ಗೌತಮ್ ಗಂಭೀರ್ ಬಳಿಕ ಮೊಹಮ್ಮದ್ ಶಮಿಗೆ ಜೀವ ಬೆದರಿಕೆ
ಐಪಿಎಲ್ 2025 ಪಂದ್ಯಾವಳಿ ಯಶಸ್ವಿಯಾಗಿ ನಡೆಯುತ್ತಿರುವ ಬೆನ್ನಲ್ಲೇ ಆತಂಕಕಾರಿ ಬೆಳವಣಿಗೆ ನಡೆದಿದೆ. ಸನ್ರೈಸರ್ಸ್ ಹೈದರಾಬಾದ್ ತಂಡದ ಪ್ರಮುಖ ವೇಗಿ ಮೊಹಮ್ಮದ್ ಶಮಿಗೆ ಜೀವ ಬೆದರಿಕೆ ಹಾಕಲಾಗಿದೆ. ಈ ಮೇಲ್ ಮೂಲಕ ಕೊಲೆ ಬೆದರಿಕೆ ಸಂದೇಶ ಕಳಿಸಿದ್ದು, ರಕ್ಷಣೆ ಪಡೆಯಲು 1 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಡಲಾಗಿದೆ.
ಈ ಬೆದರಿಕೆ ಮೇಲ್ ಅನ್ನು ಮೊಹಮ್ಮದ್ ಶಮಿ ಅವರ ಸಹೋದರ ಮೊಹಮ್ಮದ್ ಹಸೀಬ್ ಮೇ 4 ರಂದು ಪತ್ತೆಹಚ್ಚಿದರು ಮತ್ತು ತಕ್ಷಣವೇ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಸೈಬರ್ ಅಪರಾಧ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ. ಐಪಿಸಿ ಸೆಕ್ಷನ್ 308(4) ಮತ್ತು ಐಟಿ ಕಾಯ್ದೆ ಸೆಕ್ಷನ್ 66ಡಿ ಮತ್ತು 66ಇ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ರಜಪೂತ್ ಸಿಂದರ್ ಎಂದು ಗುರುತಿಸಿಕೊಂಡಿರುವ ವ್ಯಕ್ತಿಯೊಬ್ಬರು ಈ ಇಮೇಲ್ ಅನ್ನು ಕಳುಹಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಗೌತಮ್ ಗಂಭೀರ್ ಬಳಿಕ ಶಮಿಗೆ ಬೆದರಿಕೆ
ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ ಬೆದರಿಕೆ ಇಮೇಲ್ಗಳು ಬಂದ ಕೆಲವೇ ವಾರಗಳ ಅಂತರದಲ್ಲಿ ಈ ಘಟನೆ ನಡೆದಿದೆ. ಗಂಭೀರ್ ಪ್ರಕರಣದಲ್ಲಿ, ಆರೋಪಿಯನ್ನು ಗುಜರಾತ್ನ ಮಾನಸಿಕ ಅಸ್ವಸ್ಥ ಎಂಜಿನಿಯರಿಂಗ್ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಎರಡೂ ಪ್ರಕರಣಗಳ ತನಿಖೆ ಮುಂದುವರೆದಿದ್ದು, ದೆಹಲಿ ಮತ್ತು ಉತ್ತರ ಪ್ರದೇಶ ಪೊಲೀಸರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ.
ಕಳಪೆ ಫಾರ್ಮ್ನಲ್ಲಿರುವ ಶಮಿ
ಮೊಹಮ್ಮದ್ ಶಮಿ ಈ ಬಾರಿ ಆವೃತ್ತಿಯಲ್ಲಿ ಕಳಪೆ ಫಾರ್ಮ್ನಲ್ಲಿದ್ದಾರೆ. ಸೋಮವಾರ ನಡೆಯುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದಿಂದ ಅವರನ್ನು ಕೈಬಿಡಲಾಗಿದೆ. ಈ ಆವೃತ್ತಿಯಲ್ಲಿ ಅವರು ಕೇವಲ 6 ವಿಕೆಟ್ ಮಾತ್ರ ಪಡೆದಿದ್ದು, ದುಬಾರಿ ಬೌಲರ್ ಎನಿಸಿಕೊಂಡಿದ್ದಾರೆ.
ಈ ಆವೃತ್ತಿಯಲ್ಲಿ ಆಡಿರುವ ಒಂಬತ್ತು ಪಂದ್ಯಗಳಲ್ಲಿ ಕೇವಲ ಆರು ವಿಕೆಟ್ಗಳನ್ನು ಗಳಿಸಿದ್ದಾರೆ, 56.17 ರ ಸರಾಸರಿ ಮತ್ತು 11.23 ರ ಎಕಾನಮಿ ಹೊಂದಿದ್ದಾರೆ. ಮೊದಲ ಐದು ಪಂದ್ಯಗಳಲ್ಲಿ 5 ವಿಕೆಟ್ ಪಡೆದ ಅವರು ಬಳಿಕ 4 ಪಂದ್ಯಗಳಲ್ಲಿ ಕೇವಲ 1 ವಿಕೆಟ್ ಮಾತ್ರ ಪಡೆದಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಬರೋಬ್ಬರಿ 75 ರನ್ ಬಿಟ್ಟುಕೊಟ್ಟರು. ಇದು ಐಪಿಎಲ್ ಇತಿಹಾಸದಲ್ಲಿ ಎರಡನೇ ಅತ್ಯಂತ ದುಬಾರಿ ಬೌಲಿಂಗ್ ಅಂಕಿ ಅಂಶವಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications