Virat Kohli: ಧೋನಿಗಿಂತ ಕೊಹ್ಲಿ ಉತ್ತಮ ಫಿನಿಶರ್! ಹಾಡಿ ಹೊಗಳಿದ ಗೌತಮ್ ಗಂಭೀರ್
ಏಕದಿನ ವಿಶ್ವಕಪ್ 2023ರ ಪಂದ್ಯಾವಳಿಯಲ್ಲಿ ಭಾರತ ತಂಡ ಅಮೋಘ ಪ್ರದರ್ಶನ ಮುಂದುವರೆಸಿದೆ. ಬರೋಬ್ಬರಿ 20 ವರ್ಷಗಳ ಬಳಿಕ ಭಾರತ ಐಸಿಸಿ ಪಂದ್ಯಾವಳಿಯಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದೆ. ಈ ಮೂಲಕ 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ಲೆಕ್ಕ ಚುಕ್ತಾ ಮಾಡಿದೆ.
ಭಾನುವಾರ ಧರ್ಮಶಾಲಾದ ಹೆಚ್ಸಿಪಿಎ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್ಗಳ ರೋಚಕ ಗೆಲುವು ಸಾಧಿಸಿತು. ಚೇಸ್ ಮಾಸ್ಟರ್ ಎಂದೇ ಕರೆಯುವ ವಿರಾಟ್ ಕೊಹ್ಲಿ ಮತ್ತೊಮ್ಮೆ ಮಿಂಚಿದರು. ಶತಕದ ಹೊಸ್ತಿಲಲ್ಲಿ ಎಡವಿದರು, ಭಾರತವನ್ನು ಗೆಲುವಿನ ದಡ ಸೇರಿಸಿದರು.

ವಿರಾಟ್ ಕೊಹ್ಲಿ ಬ್ಯಾಟಿಂಗ್ ಮೋಡಿಗೆ ಮತ್ತೊಮ್ಮೆ ಕ್ರಿಕೆಟ್ ಜಗತ್ತು ಮನಸೋತಿದೆ, ಸಾಮಾಜಿಕ ಮಾಧ್ಯಮಗಳಲ್ಲಿ ಕೊಹ್ಲಿ ಬ್ಯಾಟಿಂಗ್ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ. ಈ ವಿಶ್ವಕಪ್ನಲ್ಲಿ ಅವರು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
ಅನೇಕ ಮಾಜಿ ಕ್ರಿಕೆಟಿಗರು ಕೂಡ ಕೊಹ್ಲಿ ಬ್ಯಾಟಿಂಗ್ ಅನ್ನು ಮನಸಾರೆ ಹೊಗಳಿದ್ದಾರೆ. ಇನ್ನು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕೂಡ ವಿರಾಟ್ ಕೊಹ್ಲಿ ಬ್ಯಾಟಿಂಗ್ ಅನ್ನು ಮೆಚ್ಚಿಕೊಂಡಿದ್ದು, ಎಂಎಸ್ ಧೋನಿಗಿಂತಲೂ ವಿರಾಟ್ ಕೊಹ್ಲಿ ಅತ್ಯುತ್ತಮ ಫಿನಿಶರ್ ಎಂದಿದ್ದಾರೆ.
ವಿರಾಟ್ ಕೊಹ್ಲಿಗಿಂತ ಉತ್ತಮ ಫಿನಿಶರ್ ಇಲ್ಲ
ಈ ಬಾರಿ ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿ ಒಂದಲ್ಲ ಹಲವು ಬಾರಿ ಪಂದ್ಯವನ್ನು ಮುಗಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಭಾರತದ ಗೆಲುವಿನಲ್ಲಿ 85 ರನ್ ಗಳಿಸಿ ಮಿಂಚಿದ್ದರೆ, ಬಾಂಗ್ಲಾದೇಶದ ವಿರುದ್ಧ ಶತಕ ಗಳಿಸಿ ಪಂದ್ಯವನ್ನು ಗೆಲ್ಲಿಸಿದ್ದರು, ನ್ಯೂಜಿಲೆಂಡ್ ವಿರುದ್ಧ ಕೂಡ ಅವರು ಶತಕದ ಸಮೀಪಕ್ಕೆ ಬಂದು ಎಡವಿದರೂ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.
"ವಿರಾಟ್ ಕೊಹ್ಲಿಗಿಂತ ಉತ್ತಮ ಫಿನಿಶರ್ ಇಲ್ಲ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ. ಫಿನಿಶರ್ ಎಂದರೆ ನಂ.5 ಅಥವಾ ನಂ.7ರಲ್ಲಿ ಬ್ಯಾಟಿಂಗ್ ಮಾಡುವವರು ಮಾತ್ರವಲ್ಲ, ಅವರು ಚೇಸ್ ಮಾಸ್ಟರ್" ಎಂದು ಗಂಭೀರ್ ಸ್ಟಾರ್ ಸ್ಪೋರ್ಟ್ಸ್ಗೆ ತಿಳಿಸಿದ್ದಾರೆ.
ಚೇಸಿಂಗ್ ಮಾಡುವಾಗ ಕೊಹ್ಲಿ 28 ಶತಕ ಸಿಡಿಸಿದ್ದಾರೆ. ಮಿಸ್ಟರ್ ಕೂಲ್ ಎಂಎಸ್ ಧೋನಿಗಿಂತಲೂ ಕೊಹ್ಲಿ ರನ್ ಚೇಸ್ನ ಒತ್ತಡವನ್ನು ಉತ್ತಮವಾಗಿ ನಿಭಾಯಿಸುತ್ತಾರೆ ಎಂದು ಗಂಭೀರ್ ಶ್ಲಾಘಿಸಿದ್ದಾರೆ. ಎಂಎಸ್ ಧೋನಿ 7 ನೇ ಸ್ಥಾನದಲ್ಲಿ ಬ್ಯಾಟ್ ಮಾಡಿದರೂ ಮತ್ತು ಹೆಚ್ಚಿನ ರನ್ ಚೇಸ್ಗಳಲ್ಲಿ ಅಜೇಯರಾಗಿ ಉಳಿದಿದ್ದಾರೆ, ಹೆಚ್ಚಿನ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಬ್ಯಾಟರ್ಗಳಿಗೆ ಫಿನಿಶರ್ ಪದವನ್ನು ಹೆಚ್ಚಾಗಿ ಬಳಸಲಾಗುವುದಿಲ್ಲ ಎಂದು ಗಂಭೀರ್ ಭಾವಿಸುತ್ತಾರೆ.
ಚೇಸಿಂಗ್ ಮಾಡುವಾಗ ಕೊಹ್ಲಿ ಮತ್ತೊಮ್ಮೆ ತಮ್ಮ ಮಾಸ್ಟರ್ ಕ್ಲಾಸ್ ಅನ್ನು ತೋರಿಸಿದರು. ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡಿದರು ನಿಯಮಿತವಾಗಿ ಬೌಂಡರಿಗಳನ್ನು ಗಳಿಸಿ ತಂಡದ ಗೆಲುವಿನಲ್ಲಿ ಸಹಕಾರಿಯಾದರು. 274 ರನ್ ಚೇಸ್ ಮುಗಿಸಲು ಕೊಹ್ಲಿ ಕೊನೆಯವರೆಗೂ ಉಳಿಯಲು ಸಾಧ್ಯವಾಗದಿದ್ದರೂ, ಅವರ 95 ವಿಶ್ವಕಪ್ನಲ್ಲಿ ಭಾರತದ ಐದನೇ ಗೆಲುವಿನ ಪ್ರಮುಖ ಮೂಲಾಧಾರವಾಗಿತ್ತು.
-
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications