Vinay Kumar: ದಾವಣಗೆರೆ ಎಕ್ಸ್ಪ್ರೆಸ್ ವಿನಯ್ ಕುಮಾರ್ ಭಾರತ ತಂಡದ ಬೌಲಿಂಗ್ ಕೋಚ್?
ರಾಹುಲ್ ದ್ರಾವಿಡ್ ಅವರ ಭಾರತ ತಂಡದ ಮುಖ್ಯ ಕೋಚ್ ಅವಧಿ ಮುಕ್ತಾಯವಾಗಿದ್ದು, ಬಿಸಿಸಿಐ ಗೌತಮ್ ಗಂಭೀರ್ ಅವರನ್ನು ನೂತನ ಮುಖ್ಯ ಕೋಚ್ ಆಗಿ ನೇಮಕ ಮಾಡಿದೆ. ಬಿಸಿಸಿಐ ಕಾರ್ಯದರ್ಶಿ ಜಯ್ಶಾ ಗಂಭೀರ್ ಮುಂದಿನ ಭಾರತ ತಂಡದ ಮುಖ್ಯ ಕೋಚ್ ಎಂದು ಘೋಷಣೆ ಮಾಡುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಜೊತೆಯಿದ್ದ ಬ್ಯಾಟಿಂಗ್ ಮತ್ತು ಬೌಲಿಂಗ್ ಕೋಚ್ ಅವರ ಅವಧಿ ಕೂಡ ಮುಕ್ತಾಯವಾಗಿದ್ದು, ಭಾರತ ತಂಡಕ್ಕೆ ಶೀಘ್ರದಲ್ಲೇ ಬ್ಯಾಟಿಂಗ್ ಮತ್ತು ಬೌಲಿಂಗ್ ಕೋಚ್ ನೇಮಕವಾಗಲಿದ್ದಾರೆ.

ಮುಖ್ಯ ಕೋಚ್ ಆಗಿ ನೇಮಕವಾಗಿರುವ ಗೌತಮ್ ಗಂಭೀರ್ ತಮ್ಮ ಕೋಚ್ ಸಿಬ್ಬಂದಿ ಬಗ್ಗೆ ಬಿಸಿಸಿಐ ಬಳಿ ವಿಶೇಷ ಬೇಡಿಕೆ ಇಟ್ಟಿದ್ದಾರೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಕೋಚ್ ಇವರೇ ಬೇಕು ಎಂದು ಕೇಳಿದ್ದಾರೆ ಎಂದು ವರದಿಯಾಗಿದೆ.
ಬೌಲಿಂಗ್ ಕೋಚ್ ಆಗಿ ಕನ್ನಡಿಗ?
ವರದಿಗಳ ಪ್ರಕಾರ ಬ್ಯಾಟಿಂಗ್ ಕೋಚ್ ಆಗಿ ಅಭಿಷೇಕ್ ನಾಯರ್ ಮತ್ತು ಬೌಲಿಂಗ್ ಕೋಚ್ ಆಗಿ ವಿನಯ್ ಕುಮಾರ್ ಬೇಕು ಎಂದು ಗಂಭೀರ್ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಬಿಸಿಸಿಐ ಶೀಘ್ರದಲ್ಲೇ ಕೋಚಿಂಗ್ ಸಹಾಯಕ ಸಿಬ್ಬಂದಿ ನೇಮಕ ಮಾಡಲು ಅರ್ಜಿ ಆಹ್ವಾನಿಸಲಿದೆ.
ದಾವಣಗೆರೆ ಎಕ್ಸ್ಪ್ರೆಸ್ ಎಂದೇ ಪ್ರಸಿದ್ಧವಾಗಿರುವ ಭಾರತ ತಂಡದ ಮಾಜಿ ಆಟಗಾರ ಬೌಲಿಂಗ್ ಕೋಚ್ ಆಗುತ್ತಾರೆ ಎನ್ನಲಾಗಿದೆ. 40 ವರ್ಷದ ವಿನಯ್ ಕುಮಾರ್ ಅವರಿಗೆ ಅಂತಾರಾಷ್ಟ್ರೀಯ ಮತ್ತು ದೇಶೀಯ ಟೂರ್ನಿಯಲ್ಲಿ ಆಡಿರುವ ಅಪಾರ ಅನುಭವ ಇದೆ. ಮುಖ್ಯವಾಗಿ ಕೆಕೆಆರ್ ತಂಡದಲ್ಲಿ ಗಂಭೀರ್ ನಾಯಕರಾಗಿದ್ದ ಅವಧಿಯಲ್ಲಿ ವಿನಯ್ ಕುಮಾರ್ ಮುಖ್ಯ ಬೌಲರ್ ಆಗಿದ್ದರು. ಹೀಗಾಗಿ ವಿನಯ್ ಕುಮಾರ್ ಬಗ್ಗೆ ಗಂಭೀರ್ ಅವರಿಗೆ ಚನ್ನಾಗಿ ಗೊತ್ತಿದೆ.
ಭಾರತ ತಂಡಕ್ಕಾಗಿ ವಿನಯ್ ಕುಮಾರ್ 1 ಟೆಸ್ಟ್, 31 ಏಕದಿನ ಮತ್ತು 10 ಟಿ20 ಪಂದ್ಯಗಳನ್ನು ಆಡಿದ್ದಾರೆ. 105 ಐಪಿಎಲ್ ಪಂದ್ಯಗಳಲ್ಲಿ ಆಡಿರುವ ಅನುಭವ ಇದೆ. ಅವರ ನಾಯಕತ್ವದಲ್ಲಿ ಕರ್ನಾಟಕ ಎರಡು ಬಾರಿ ರಣಜಿ ಟ್ರೋಫಿ ಗೆದ್ದಿದೆ. 139 ಪ್ರಥಮ ದರ್ಜೆ ಪಂದ್ಯಗಳನ್ನಾಡಿರುವ ಅವರು 504 ವಿಕೆಟ್ ಪಡೆದಿದ್ದಾರೆ.
ಅಭಿಷೇಕ್ ನಾಯರ್ ಬ್ಯಾಟಿಂಗ್ ಕೋಚ್?
ಮುಂಬೈ ಮೂಲಕ ಅಭಿಷೇಕ್ ನಾಯರ್ ಬ್ಯಾಟಿಂಗ್ ಕೋಚ್ ಆಗಲಿ ಎಂದು ಗಂಭೀರ್ ಕೇಳಿದ್ದಾರೆ ಎನ್ನಲಾಗಿದೆ. 103 ಪ್ರಥಮದರ್ಜೆ ಪಂದ್ಯಗಳನ್ನಾಡಿರುವ ಅಭಿಷೇಕ್ ನಾಯರ್, 5749 ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ ಅವರ ಸ್ನೇಹಿತ ಕೂಡ ಆಗಿದ್ದು, ತಂಡಕ್ಕೆ ಅವರು ಬ್ಯಾಟಿಂಗ್ ಕೋಚ್ ಆದರೆ ಲಾಭವಾಗಲಿದೆ ಎಂದು ಹೇಳಲಾಗುತ್ತಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications