Get Updates
Get notified of breaking news, exclusive insights, and must-see stories!

Ind vs Aus: ರೋಹಿತ್ - ಗಂಭೀರ್ ನಡುವೆ ಮನಸ್ತಾಪ?

ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಭಾರತ ತಂಡ ನಿರೀಕ್ಷಿತ ಪ್ರದರ್ಶನ ನೀಡದೇ ಇರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮೇಲಿದ್ದ ಅಭಿಮಾನಿಗಳ ಸಿಟ್ಟು ಇದೀಗ ಕೋಚ್ ಗಂಭೀರ್ ಕಡೆಗೂ ತಿರುಗಿದೆ. ಗೌತಮ್ ಗಂಭೀರ್ ಮುಖ್ಯ ಕೋಚ್ ಆದ ಬಳಿಕ ಭಾರತ ಹಲವು ಅವಮಾನಕರ ಸೋಲುಗಳನ್ನು ಕಂಡಿದ್ದು ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ.

ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೂರನೇ ಪಂದ್ಯ ಮುಗಿದ ಬಳಿಕ ರವಿಚಂದ್ರನ್ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸಿದ್ದು ಊಹಾಪೋಹಗಳಿಗೆ ಕಾರಣವಾಗಿತ್ತು. ತಂಡದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವ ಅನುಮಾನವಿತ್ತು, ಗಂಭೀರ್ ಬಂದಾಗಿನಿಂದ ತಂಡದಲ್ಲಿ ಒಡಕು ಇದ್ದು ಇದು ತಂಡದ ಪ್ರದರ್ಶನದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಾಗಿದೆ. ಸಿಡ್ನಿಯಲ್ಲಿ ಶುಕ್ರವಾರ ಕೊನೆಯ ಟೆಸ್ಟ್ ಆರಂಭಾಗಲಿದ್ದು ಈ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ತಂಡದಿಂದ ಹೊರಗುಳಿಯುವುದು ಖಚಿತವಾಗಿದೆ.

gautam gambhir rohit sharma ignore each other during practice

ರೋಹಿತ್ ಬದಲಾಗಿ ಬುಮ್ರಾ ನಾಯಕತ್ವ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಇದೆಲ್ಲದರ ನಡುವೆ ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ರೋಹಿತ್ ಶರ್ಮಾ ನಡುವೆ ಮನಸ್ತಾಪ ಉಂಟಾಗಿದೆ ಎನ್ನುವ ಮಾತುಗಳು ಕೇಳಿಬಂದಿವೆ. ಗುರುವಾರ ಅಭ್ಯಾಸದ ವೇಳೆ ಇಬ್ಬರೂ ನಡೆದುಕೊಂಡ ರೀತಿಯೇ ಈ ಅನುಮಾನಗಳಿಗೆ ಕಾರಣವಾಗಿದೆ.

ಮಾಧ್ಯಮ ಗೋಷ್ಠಿಗೆ ಬಂದ ಗಂಭೀರ್

ಟೆಸ್ಟ್ ಪಂದ್ಯದ ಆರಂಭಕ್ಕೆ ಮುನ್ನಾದಿನ ನಡೆದ ಮಾಧ್ಯಮಗೋಷ್ಠಿಗೆ ನಾಯಕ ರೋಹಿತ್ ಶರ್ಮಾ ಬದಲಾಗಿ ಕೋಚ್ ಗೌತಮ್ ಗಂಭೀರ್ ಬಂದಿದ್ದು ಅನೇಕ ಪ್ರಶ್ನೆಗಳಿಗೆ ಕಾರಣವಾಯಿತು. ಸಿಡ್ನಿ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯುತ್ತಾರಾ ಎನ್ನುವ ಪ್ರಶ್ನೆಗೆ ಗಂಭೀರ್ ಉತ್ತರ ನೀಡಲಿಲ್ಲ. ಪಿಚ್ ನೋಡಿ ತಂಡವನ್ನು ಆಯ್ಕೆ ಮಾಡುತ್ತೇವೆ ಎಂದು ಹೇಳಿದರು.

ಮಾಧ್ಯಮಗೋಷ್ಠಿ ಬಳಿಕ ಗೌತಮ್ ಗಂಭೀರ್ ತಂಡ ಅಭ್ಯಾಸ ಮಾಡುತ್ತಿದ್ದ ಕಡೆ ಹೋದರು. ಅಭ್ಯಾಸದ ವೇಳೆ ಗಂಭೀರ್ ಬುಮ್ರಾ ಬಳಿ ಚರ್ಚೆ ಮಾಡುತ್ತಿದ್ದರು. ರೋಹಿತ್ ಶರ್ಮಾ ಮತ್ತು ಗೌತಮ್ ಗಂಭೀರ್ ಯಾವುದೇ ಚರ್ಚೆ ನಡೆಸದೇ ಇರುವುದು ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವ ಅನುಮಾನ ಹೆಚ್ಚಲು ಕಾರಣವಾಗಿದೆ.

ಸತತ ಸೋಲುಗಳ ಬಳಿಕ ಗೌತಮ್ ಗಂಭೀರ್ ಆಟಗಾರರ ವಿಚಾರದಲ್ಲಿ ಕಠಿಣವಾಗಿದ್ದಾರೆ. ಉತ್ತಮ ಪ್ರದರ್ಶನ ನೀಡದೇ ಇರುವ ಆಟಗಾರರನ್ನು ಹೊರಗಿಟ್ಟು ಬೇರೆ ಆಟಗಾರರಿಗೆ ಅವಕಾಶ ನೀಡಲು ಮುಂದಾಗಿದ್ದಾರೆ. ರೋಹಿತ್, ಕೊಹ್ಲಿ ವಿಚಾರದಲ್ಲೂ ಕಠಿಣ ನಿರ್ಧಾರ ತೆಗೆದುಕೊಳ್ಳುವ ಸೂಚನೆ ಕೊಟ್ಟಿದ್ದಾರೆ.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಜೊತೆಗೆ ರಿಷಬ್ ಪಂತ್ ಅವರ ಅಸ್ಥಿರ ಪ್ರದರ್ಶನ ಕೂಡ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಶುಕ್ರವಾರ ನಡೆಯಲಿರುವ ಪಂದ್ಯದಲ್ಲಿ ಪಂತ್ ಬದಲಾಗಿ ಧ್ರುವ್ ಜುರೇಲ್ ಅವಕಾಶ ಪಡೆದರೂ ಅಚ್ಚರಿ ಪಡಬೇಕಿಲ್ಲ. ಆಕಾಶ್ ದೀಪ್ ಗಾಯಗೊಂಡಿದ್ದು ಅವರ ಬದಲಾಗಿ ಧ್ರುವ್ ಜುರೆಲ್ ಅಥವಾ ಪ್ರಸಿದ್ಧ್ ಕೃಷ್ಣ ಅವಕಾಶ ಪಡೆಯಲಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+