GT vs KKR: ಗುಜರಾತ್ ಟೈಟಾನ್ಸ್ ಪ್ಲೇ ಆಫ್ ಕನಸಿಗೆ ಅಡ್ಡಿಯಾದ ಮಳೆ
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯ ಮಳೆಯಿಂದಾಗಿ ರದ್ದಾಗಿದ ನಂತರ ಗುಜರಾತ್ ಟೈಟಾನ್ಸ್ ಐಪಿಎಲ್ 2024 ರ ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ.
ಗುಜರಾತ್ ಟೈಟಾನ್ಸ್ ಈಗ 13 ಪಂದ್ಯಗಳಿಂದ 11 ಅಂಕಗಳನ್ನು ಹೊಂದಿದ್ದು ಅವರು ಗರಿಷ್ಠ 13 ಅಂಕಗಳನ್ನು ಮಾತ್ರ ಹೊಂದಬಹುದಾಗಿದೆ. ಇದರಿಂದಾಗಿ ಶುಭಮನ್ ಗಿಲ್ ಪಡೆಯ ಪ್ಲೇಆಫ್ ಕನಸು ಕಮರಿಹೋಗಿದೆ.
ಮತ್ತೊಂದೆಡೆ ಕೆಕೆಆರ್ 19 ಅಂಕಗಳನ್ನು ಹೊಂದಿದ್ದು ಮುಂದಿನ ಪಂದ್ಯಗಳಲ್ಲಿ ಸೋತರೂ ಟಾಪ್ 2 ಸ್ಥಾನವನ್ನು ಖಚಿತಪಡಿಸಿಕೊಂಡಿದ್ದಾರೆ.

ಭಾರಿ ಗುಡುಗು, ಮಿಂಚಿನ ಜೊತೆಗೆ ಬಿರುಗಾಳಿ ಇದ್ದ ಕಾರಣ ಟಾಸ್ ಅನ್ನು ಮುಂದೂಡಲಾಗಿತ್ತು. ಆದರೆ ಬಳಿಕ ಮಳೆ ಆರಂಭವಾದ ಕಾರಣ, ಟಾಸ್ ನಡೆಯಲು ಅವಕಾಶ ಸಿಗಲೇ ಇಲ್ಲ. 10.15ರ ವೇಳೆಗೆ ಮಳೆ ನಿಂತ ಬಳಿಕ 10.45ಕ್ಕೆ ಟಾಸ್ ಎಂದು ಹೇಳಲಾಗಿತ್ತಾದರೂ, ಮತ್ತೆ ಮಳೆ ಶುರುವಾದ ಬಳಿಕ ಪಂದ್ಯವನ್ನು ರದ್ದು ಮಾಡಲಾಯಿತು. ಇದರಿಂದ ಎರಡೂ ತಂಡಗಳಿಗೆ ತಲಾ ಒಂದೊಂದು ಅಂಕ ಹಂಚಿಕೆ ಮಾಡಲಾಯಿತು.
ಮೊದಲ ಬಾರಿ ಪ್ಲೇಆಫ್ಗೆ ಮುನ್ನವೇ ಗುಜರಾತ್ ಟೈಟಾನ್ಸ್ ಐಪಿಎಲ್ ಪಂದ್ಯಾವಳಿಯಿಂದ ಹೊರಬಿದ್ದಿದೆ. ಮೊದಲ ಆವೃತ್ತಿಯಲ್ಲೇ ಐಪಿಎಲ್ 2022ರಲ್ಲಿ ಚಾಂಪಿಯನ್ ಆಗಿದ್ದ ಗುಜರಾತ್ ಟೈಟಾನ್ಸ್ ಬಳಿಕ ಕಳೆದ ಆವೃತ್ತಿಯಲ್ಲಿ ಫೈನಲ್ ತಲುಪಿತ್ತು. ಆದರೆ ಫೈನಲ್ನಲ್ಲಿ ಸಿಎಸ್ಕೆ ವಿರುದ್ಧ ಸೋತ ಬಳಿಕ ರನ್ನರ್ ಅಪ್ ಆಗಿತ್ತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸತತ ಎರಡು ಪಂದ್ಯಗಳನ್ನು ಸೋತಿದ್ದು ತಂಡಕ್ಕೆ ಭಾರಿ ಹಿನ್ನಡೆಯಾಗಿತ್ತು. ಕಳೆದ ಪಂದ್ಯದಲ್ಲಿ ಸಿಎಸ್ಕೆ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದ ಗುಜರಾತ್, ಇಂದಿನ ಪಂದ್ಯವನ್ನು ಗೆಲ್ಲುವ ವಿಶ್ವಾಸದಲ್ಲಿತ್ತು, ಆದರೆ ಮಳೆ ಅವರ ಕನಸಿಗೆ ಆಸ್ಪದ ಕೊಡಲೇ ಇಲ್ಲ.
ಸನ್ರೈಸರ್ಸ್ ವಿರುದ್ಧ ಪಂದ್ಯ
ಮೇ 16ರಂದು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಗುಜರಾತ್ ಟೈಟಾನ್ಸ್ ಈ ಆವೃತ್ತಿಯ ತಮ್ಮ ಕೊನೆಯ ಪಂದ್ಯ ಆಡಲಿದ್ದಾರೆ. ಆ ಪಂದ್ಯವನ್ನು ಗೆಲ್ಲುವ ಮೂಲಕ ಈ ಆವೃತ್ತಿಗೆ ವಿದಾಯ ಹೇಳುವ ಉತ್ಸಾಹದಲ್ಲಿದೆ ಗಿಲ್ ಪಡೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications