IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್
GT Vs LSG IPL 2026: ಲಕ್ನೋದಲ್ಲಿ ಭಾನುವಾರ (ಏಪ್ರಿಲ್ 12) ನಡೆದ ಐಪಿಎಲ್ 2026ರ 19ನೇ ಪಂದ್ಯದಲ್ಲಿ ಶುಭ್ಮನ್ ಗಿಲ್ ಮತ್ತು ಜೋಸ್ ಬಟ್ಲರ್ ಅವರ ಅದ್ಭುತ ಜೊತೆಯಾಟದ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಏಳು ವಿಕೆಟ್ಗಳ ಭರ್ಜರಿ ಜಯ ದಾಖಲಿಸಿದೆ.
ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ನಾಯಕ ಶುಭ್ಮನ್ ಗಿಲ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆಯೇ ಮೊದಲು ಬ್ಯಾಟ್ ಬೀಸಿದ ರಿಷಭ್ ಪಂತ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ಗಳ ನಷ್ಟಕ್ಕೆ 164 ರನ್ಗಳನ್ನು ಕಲೆಹಾಕಿದರು. ಈ ಗುರಿಯನ್ನು ಜಿಟಿ ತಂಡವು 18.4 ಓವರ್ಗಳಲ್ಲಿ ಮುಟ್ಟುವಲ್ಲಿ ಯಶಸ್ವಿಯಾಗುವ ಮೂಲಕ ಭರ್ಜರಿ ಗೆಲುವು ಸಾಧಿಸಿತು.

ಮಾರಕ ಬೌಲಿಂಗ್ ದಾಳಿ ಮಾಡಿದ ಪ್ರಸಿದ್ಧ್ ಕೃಷ್ಣ
ಜಿಟಿ ಪರ ಪ್ರಸಿದ್ಧ್ ಕೃಷ್ಣ ಅವರ ಮಾರಕ ಬೌಲಿಂಗ್ ದಾಳಿಯಿಂದಾಗಿ ಗುಜರಾತ್ ಟೈಟಾನ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ಅನ್ನು ನಿಗದಿತ 20 ಓವರ್ಗಳಲ್ಲಿ 164/8 ರನ್ಗಳಿಗೆ ಕಟ್ಟಿಹಾಕಿತು. ಲಕ್ನೋ ಪರ ಏಡೆನ್ ಮಾರ್ಕ್ರಾಮ್ 30(21) ಗರಿಷ್ಠ ರನ್ ಗಳಿಸಿದರು. ಉಳಿದಂತೆ ತಂಡದ ನಾಯಕ ರಿಷಬ್ ಪಂತ್ 18, ನಿಕೋಲಸ್ ಪೂರನ್ 19, ಅಬ್ದುಲ್ ಸಮದ್ 18 ಮತ್ತು ಮುಕುಲ್ ಚೌಧರಿ 18 ರನ್ ಕಲೆಹಾಕಿದರು. ಇದರಿಂದ ತಂಡ ದೊಡ್ಡ ಮೊತ್ತ ಕಲೆಹಾಕುವಲ್ಲಿ ವಿಫಲವಾಯಿತು.
ನಾಲ್ಕು ವಿಕೆಟ್ ಕಬಳಿಸಿದ ಪ್ರಸಿದ್ಧ್ ಕೃಷ್ಣ
ಗುಜರಾತ್ ಪರ ಪ್ರಸಿದ್ಧ್ ಕೃಷ್ಣ ನಾಲ್ಕು ವಿಕೆಟ್ ಪಡೆದು ಮಿಂಚಿದರೆ, ಅಶೋಕ್ ಶರ್ಮಾ ಎರಡು ವಿಕೆಟ್, ಮೊಹಮ್ಮದ್ ಸಿರಾಜ್ ಮತ್ತು ಕಗಿಸೊ ರಬಾಡ ತಲಾ ಒಂದು ವಿಕೆಟ್ ಪಡೆದರು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 164 ರನ್ಗಳಿಗೆ ಕಟ್ಟಿಹಾಕಿ ತಮ್ಮ ತಂಡದ ಬ್ಯಾಟಿಂಗ್ ಹೊರೆಯನ್ನು ತಗ್ಗಿಸಿದರು.
-
Vaibhav Suryavanshi: ನನ್ನ ಕನಸು ಕೊನೆಗೂ ನನಸಾಯಿತು; ವಿರಾಟ್ ಕೊಹ್ಲಿಗೆ ವಿಶೇಷ ಧನ್ಯವಾದ ಹೇಳಿದ ವೈಭವ್ ಸೂರ್ಯವಂಶಿ -
ಮಗನ ಕ್ರಿಕೆಟ್ಗಾಗಿ ಜೈಲಿಗೆ ಹೋಗಿದ್ದ ತಂದೆ, ರೋಹಿತ್ ಕೋಚ್ ಸಲಹೆಯಿಂದ ಐಪಿಎಲ್ ಸ್ಟಾರ್ ಆದ ಮಗ ಮುಕುಲ್; ಇಲ್ಲಿದೆ ರೋಚಕ ಸ್ಟೋರಿ -
ಬುಮ್ರಾಗೆ ಸಿಕ್ಸರ್ಗಳ ಸುರಿಮಳೆ ಸುರಿಸಿದ ವೈಭವ್ ಸೂರ್ಯವಂಶಿಗೆ ಸಲಾಂ ಎಂದ ದಕ್ಷಿಣ ಆಫ್ರಿಕಾದ ಕ್ರಿಕೆಟ್ ದಂತಕಥೆ -
ಒಂದೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿಗೆ ಒಲಿದ ಮೂರು ಮರೆಯಲಾಗದ ಗೌರವಗಳು; ಕಿಂಗ್ ಕೊಹ್ಲಿ ಸಂದೇಶ ಭಾರೀ ವೈರಲ್ -
Mukul Choudhary: ಕೆಕೆಆರ್ ಧೂಳೀಪಟ ಮಾಡಿದ ₹2.6 ಕೋಟಿಯ ಮುಕುಲ್ ಚೌಧರಿ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
IPL 2026: ಸಿಎಸ್ಕೆ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯಕ್ಕೆ ಮಳೆ ಭೀತಿ ಇದ್ಯಾ? ಹವಾಮಾನ ಇಲಾಖೆ ಹೇಳೋದೇನು -
RCB Playing 11: ಆರ್ಆರ್ ವಿರುದ್ಧದ ಪಂದ್ಯಕ್ಕೆ ಆರ್ಸಿಬಿ ಪ್ಲೇಯಿಂಗ್ 11 -
PBKS VS SRH: ಹೈದರಾಬಾದ್ ಮಣಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಕಾಯ್ದುಕೊಂಡ ಪಂಜಾಬ್ ಕಿಂಗ್ಸ್ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ












Click it and Unblock the Notifications