GT vs SRH: ಮಿಂಚಿದ ಕನ್ನಡಿಗ; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದ ಗುಜರಾತ್ ಟೈಟಾನ್ಸ್
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025ರ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಗುಜರಾತ್ ಟೈಟಾನ್ಸ್ ಭರ್ಜರಿ ಗೆಲುವು ಸಾಧಿಸಿದೆ. ಈ ಸೋಲಿನ ಮೂಲಕ ಸನ್ರೈಸರ್ಸ್ ಹೈದರಾಬಾದ್ ಪ್ಲೇಆಫ್ ಅವಕಾಶ ಬಹುತೇಕ ಅಂತ್ಯವಾಗಿದೆ. ಈ ಗೆಲುವಿನ ಮೂಲಕ ಗುಜರಾತ್ ಟೈಟಾನ್ಸ್ 14 ಅಂಕಗಳಿಂ
ಟಾಸ್ ಗೆದ್ದ ಸನ್ರೈಸರ್ಸ್ ಹೈದರಾಬಾದ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 224 ರನ್ಗಳ ಬೃಹತ್ ಮೊತ್ತ ಕಲೆಹಾಕಿತು. ಸಾಯಿ ಸುದರ್ಶನ್, ಶುಭಮನ್ ಗಿಲ್ ಮತ್ತು ಜೋಸ್ ಬಟ್ಲರ್ ಗುಜರಾತ್ ಟೈಟಾನ್ಸ್ಗೆ ಆಸರೆಯಾದರು.

ಸಾಯಿ ಸುದರ್ಶನ್ 23 ಎಸೆತಗಳಲ್ಲಿ 48 ರನ್ ಗಳಿಸಿದರೆ, ಶುಭಮನ್ ಗಿಲ್ 38 ಎಸೆತಗಳಲ್ಲಿ 10 ಬೌಂಡರಿ 2 ಸಿಕ್ಸರ್ ಸಹಿತ 76 ರನ್ ಗಳಿಸಿದರು. ಜೋಸ್ ಬಟ್ಲರ್ 37 ಎಸೆತಗಳಲ್ಲಿ 64 ರನ್ ಗಳಿಸಿ ಮಿಂಚಿದರು. ವಾಷಿಂಗ್ಟನ್ ಸುಂದರ್ 21 ರನ್ ಗಳಿಸಿದರು. ಸನ್ರೈಸರ್ಸ್ ಹೈದರಾಬಾದ್ ಪರ ಜಯದೇವ್ ಉನದ್ಕತ್ ಮಾತ್ರ 3 ವಿಕೆಟ್ ಪಡೆಯುವ ಮೂಲಕ ಯಶಸ್ವಿ ಬೌಲರ್ ಎನಿಸಿಕೊಂಡರು.
ಮಿಂಚಿದ ಪ್ರಸಿದ್ಧ್ ಕೃಷ್ಣ
225 ರನ್ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಸನ್ರೈಸರ್ಸ್ ಹೈದರಾಬಾದ್ ಉತ್ತಮ ಆರಂಭವನ್ನೇ ಪಡೆಯಿತು. 4.3 ಓವರ್ ಗಳಲ್ಲಿ 49 ರನ್ ಗಳಿಸಿದ್ದಾಗ ಕನ್ನಡಿಗ ಪ್ರಸಿದ್ಧ್ ಕೃಷ್ಣ ಟ್ರಾವಿಸ್ ಹೆಡ್ ಅವರ ವಿಕೆಟ್ ಪಡೆಯುವ ಮೂಲಕ ಸನ್ರೈಸರ್ಸ್ ಹೈದರಾಬಾದ್ಗೆ ಶಾಕ್ ಕೊಟ್ಟರು. ಅದಾದ ಬಳಿಕ ಸನ್ರೈಸರ್ಸ್ ಹೈದರಾಬಾದ್ ಚೇತರಿಸಿಕೊಳ್ಳಲು ಆಗಲೇ ಇಲ್ಲ.
ಅಭಿಷೇಕ್ ಶರ್ಮಾ 41 ಎಸೆತಗಳಲ್ಲಿ 74 ರನ್ ಗಳಿಸುವ ಮೂಲಕ ಏಕಾಂಗಿ ಹೋರಾಟ ನೀಡಿದರು. ಇಶಾನ್ ಕಿಶನ್ 17 ಎಸೆತಗಳಲ್ಲಿ 13 ರನ್ ಗಳಿಸಿದರು. ಹೆನ್ರಿಚ್ ಕ್ಲಾಸೆನ್ 18 ಎಸೆಗಳಲ್ಲಿ 23 ರನ್ ಗಳಿಸಿ ಅಪಾಯಕಾರಿಯಾಗುತ್ತಿದ್ದಾಗ ಮತ್ತೆ ಬೌಲಿಂಗ್ಗೆ ಬಂದ ಪ್ರಸಿದ್ಧ್ ಕೃಷ್ಣ ಅವರನ್ನು ಔಟ್ ಮಾಡುವ ಮೂಲಕ ಗುಜರಾತ್ ಜೈಂಟ್ಸ್ ಗೆಲುವನ್ನು ಸುಲಭವಾಗಿಸಿದರು.
ಅಂತಿಮವಾಗಿ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 186 ರನ್ ಗಳಿಸಿದ ಸನ್ರೈಸರ್ಸ್ ಹೈದರಾಬಾದ್ 38 ರನ್ಗಳಿಂದ ಸೋಲೊಪ್ಪಿಕೊಂಡಿತು. ಪ್ರಸಿದ್ಧ್ ಕೃಷ್ಣ 4 ಓವರ್ ಗಳಲ್ಲಿ ಕೇವಲ 19 ರನ್ ನೀಡಿ 2 ಪ್ರಮುಖ ವಿಕೆಟ್ ಪಡೆದುಕೊಂಡರು. ಮೊಹಮ್ಮದ್ ಸಿರಾಜ್ ಕೂಡ 2 ವಿಕೆಟ್ ಪಡೆದರೆ, ಇಶಾಂತ್ ಶರ್ಮಾ ಮತ್ತು ಗೆರಾಲ್ಡ್ ಕೊಯೆಟ್ಜೆ ತಲಾ 1 ವಿಕೆಟ್ ಪಡೆದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications