ಪಾಕ್ ಪಂದ್ಯ ಗೆದ್ದ ಬಳಿಕ ಮೈದಾನದಲ್ಲಿಯೇ ಕಣ್ಣೀರು; ಕಾರಣ ಹಂಚಿಕೊಂಡ ಹಾರ್ದಿಕ್ ಪಾಂಡ್ಯ!
ಪಾಕಿಸ್ತಾನ ವಿರುದ್ಧ ಪಂದ್ಯವನ್ನು ಗೆದ್ದ ನಂತರ, ಪಾಂಡ್ಯ ತನ್ನ ತಂದೆಯನ್ನು ನೆನೆದು ಭಾವುಕರಾದರು ಮತ್ತು ಮೈದಾನದಲ್ಲಿಯೇ ಕಣ್ಣೀರು ಹಾಕುತ್ತಾ ಅಳಲು ಪ್ರಾರಂಭಿಸಿದರು. ಪಂದ್ಯದ ಬಳಿಕ ಅವರು ಅಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಭಾರತವು ಭಾನುವಾರ ಪಾಕಿಸ್ತಾನದ ವಿರುದ್ಧ ಟಿ-20 ವಿಶ್ವಕಪ್ 2022 ಚೊಚ್ಚಲ ಪಂದ್ಯವನ್ನು ಆಡಿತು. ಈ ಪಂದ್ಯದಲ್ಲಿ ಎದುರಾಳಿ ಪಾಕಿಸ್ತಾನವನ್ನು ನಾಲ್ಕು ವಿಕೆಟ್ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಭಾರತದ ಪರ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅದ್ಭುತ ಪ್ರದರ್ಶನ ನೀಡಿದರು. ಮೊದಲು 30 ರನ್ ನೀಡಿ ಮೂರು ವಿಕೆಟ್ ಕಬಳಿಸಿದ ಪಾಂಡ್ಯ ನಂತರ 40 ರನ್ ಗಳ ಅದ್ಭುತ ಇನ್ನಿಂಗ್ಸ್ ಆಡುವ ಮೂಲಕ ಸಂಕಷ್ಟದಲ್ಲಿದ್ದ ಭಾರತ ತಂಡವನ್ನು ಗುರಿ ತಲುಪಿಸಿದರು.
ಹಾರ್ದಿಕ್ ಪಾಂಡ್ಯ ಹೊರತುಪಡಿಸಿ ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿ ಅರ್ಧಶತಕ ಗಳಿಸಿದರು. ಕೊಹ್ಲಿ 53 ಎಸೆತಗಳಲ್ಲಿ 82 ರನ್ ಗಳಿಸಿ ಇನ್ನಿಂಗ್ಸ್ ಆಡಿದರು. ಈ ವೇಳೆ ಅವರು ಆರು ಬೌಂಡರಿ ಹಾಗೂ ನಾಲ್ಕು ಸಿಕ್ಸರ್ಗಳನ್ನು ಬಾರಿಸಿದರು. ಇವರಿಬ್ಬರು ಐದನೇ ವಿಕೆಟ್ಗೆ 113 ರನ್ಗಳ ಜೊತೆಯಾಟ ನೀಡಿದರು. ಪಂದ್ಯ ಗೆದ್ದ ನಂತರ ತಂದೆಯನ್ನು ನೆನೆದು ಭಾವುಕರಾದ ಪಾಂಡ್ಯ ಮೈದಾನದಲ್ಲಿಯೇ ಅಳಲು ತೋಡಿಕೊಂಡರು.
ನನ್ನ ತಂದೆ ನನಗಾಗಿ ಮಾಡಿದ್ದನ್ನು ನನಗೆ ಮಾಡಲು ಸಾಧ್ಯವಿಲ್ಲ
ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ಹಾರ್ದಿಕ್ ಪಾಂಡ್ಯ, 'ನಾನು ನನ್ನ ತಂದೆಯ ಬಗ್ಗೆ ಮಾತ್ರ ಯೋಚಿಸುತ್ತಿದ್ದೆ. ನಾನು ನನ್ನ ತಂದೆಗಾಗಿ ಅಳಲಿಲ್ಲ. ನಾನು ನನ್ನ ಮಗನನ್ನು ಪ್ರೀತಿಸುತ್ತೇನೆ, ಆದರೆ ನನ್ನ ತಂದೆ ನನಗಾಗಿ ಮಾಡಿದ್ದನ್ನು ನಾನು ಮಾಡಲು ಸಾಧ್ಯವಾಗುತ್ತದೆಯೇ ಎಂದು ನನಗೆ ತಿಳಿದಿಲ್ಲ. ತನ್ನ ಆರೂವರೆ ವರ್ಷದ ಮಗುವಿನ ಕನಸನ್ನು ನನಸು ಮಾಡಲು ಬೇರೆ ಊರಿಗೆ ಬಂದಿದ್ದ. ನಾನು ಇಂದು ಇರುವ ಸ್ಥಿತಿಗೆ ತಲುಪಲು ಸಾಧ್ಯವಾಗುತ್ತದೆ ಎಂದು ಅವರಿಗೆ ತಿಳಿದಿರಲಿಲ್ಲ. ಹಾಗಾಗಿ ಈ ಇನ್ನಿಂಗ್ಸ್ ಅವರದ್ದು ಎಂದು ಕಣ್ಣೀರು ಹಾಕಿದರು,

ಭಾರತದ ಆಲ್ರೌಂಡರ್ ಹಾರ್ದಿಕ್ ಪಾಂಡ್, 'ನಾನು ಅವರಿಗೆ ಯಾವಾಗಲೂ ಕೃತಜ್ಞರಾಗಿರುತ್ತೇನೆ. ಅವರು ನನಗೆ ಅವಕಾಶ ನೀಡದಿದ್ದರೆ, ನಾನು ಇಂದು ಇಲ್ಲಿ ನಿಲ್ಲುತ್ತಿರಲಿಲ್ಲ. ಅವರು ಅನೇಕ ತ್ಯಾಗಗಳನ್ನು ಮಾಡಿದರು. ಅವರು ತಮ್ಮ ಮಕ್ಕಳ ಸಲುವಾಗಿ ಬೇರೆ ನಗರದಲ್ಲಿ ನೆಲೆಸಿದರು. ಆಗ ನನಗೆ ಆರು ವರ್ಷ, ಅವರು ಬೇರೆ ನಗರದಲ್ಲಿ ನೆಲೆಸಿದರು ಮತ್ತು ಅಲ್ಲಿ ವ್ಯಾಪಾರ ಮಾಡಿದರು. ಇದು ದೊಡ್ಡ ವಿಚಾರ' ಹಾರ್ದಿಕ್ ಪಾಂಡ್ಯ ಎಂದು ಹೇಳಿದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಶಾನ್ ಮಸೂದ್ ಮತ್ತು ಇಫ್ತಿಕರ್ ಅಹ್ಮದ್ ಅವರ ಅತ್ಯುತ್ತಮ ಇನ್ನಿಂಗ್ಸ್ನ ನೆರವಿನಿಂದ ಭಾರತದ ಮುಂದೆ 160 ರನ್ಗಳ ಗುರಿಯನ್ನು ನೀಡಿತ್ತು. ಮಸೂದ್ 42 ಎಸೆತಗಳಲ್ಲಿ ಐದು ಬೌಂಡರಿಗಳ ನೆರವಿನಿಂದ 52 ರನ್ ಗಳಿಸಿದರು. ಇದೇ ಸಮಯದಲ್ಲಿ ಇಫ್ತಿಕರ್ ಅಹ್ಮದ್ 34 ಎಸೆತಗಳಲ್ಲಿ 51 ರನ್ ಗಳಿಸಿದರು. ಇದಕ್ಕೆ ಉತ್ತರವಾಗಿ ಭಾರತ ಕೊನೆಯ ಎಸೆತದಲ್ಲಿ ವಿಜಯ ಗಳಿಸಿಕೊಂಡಿತು.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications