ಸೋಲಿನ ಬೇಸರ ಮರೆತು ವೈಭವ್ ಸೂರ್ಯವಂಶಿ ಬೆನ್ನು ತಟ್ಟಿ ಕ್ರೀಡಾ ಸ್ಫೂರ್ತಿ ಮೆರೆದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ
Hardik Pandya: ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಕೇವಲ ರನ್ಗಳ ಸುರಿಮಳೆಯಾಗಲಿಲ್ಲ, ಬದಲಿಗೆ ಕ್ರೀಡಾ ಸ್ಫೂರ್ತಿಯ ಅದ್ಭುತ ದೃಶ್ಯವೂ ಕಂಡುಬಂದಿತು. ಮುಂಬೈ ಇಂಡಿಯನ್ಸ್ ತಂಡವು ಪಂದ್ಯದಲ್ಲಿ ಸೋಲನ್ನು ಅನುಭವಿಸಿದರೂ, ನಾಯಕ ಹಾರ್ದಿಕ್ ಪಾಂಡ್ಯ ಅವರು ತೋರಿದ ಒಂದು ಸಣ್ಣ ನಡೆ ಈಗ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
15 ವರ್ಷದ ವೈಭವ್ ಸೂರ್ಯವಂಶಿ ಅವರು, ಮುಂಬೈ ಬೌಲರ್ಗಳ ವಿರುದ್ಧ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶನ ಮಾಡಿದರು. ಅದರಲ್ಲೂ ವಿಶ್ವದ ನಂಬರ್ 1 ಬೌಲರ್ ಎನಿಸಿಕೊಂಡಿರುವ ಜಸ್ಪ್ರೀತ್ ಬುಮ್ರಾ ಎಸೆತಗಳಿಗೆ ಬ್ಯಾಟ್ ಮೂಲಕ ದಿಟ್ಟ ಉತ್ತರ ನೀಡಿದ ವೈಭವ್ ಆಟ ಕಂಡು ಹಾರ್ದಿಕ್ ಪಾಂಡ್ಯ ಬೆರಗಾದರು. ಪಂದ್ಯ ಮುಗಿದ ಬಳಿಕವೇ ಹಾರ್ದಿಕ್ ಅವರು ವೈಭವ್ ಬಳಿ ತೆರಳಿ ಬೆನ್ನು ತಟ್ಟಿ ಪ್ರೋತ್ಸಾಹಿಸಿದ್ದು ಮಾತ್ರವಲ್ಲದೆ, ಅವರ ಅದ್ಭುತ ಇನ್ನಿಂಗ್ಸ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

ಕ್ರೀಡಾ ಸ್ಫೂರ್ತಿ ಮೆರೆದ ಹಾರ್ದಿಕ್ ಪಾಂಡ್ಯ
ತನ್ನದೇ ತಂಡದ ಪ್ರಮುಖ ಬೌಲರ್ ಅನ್ನು ದಂಡಿಸಿದ ಎದುರಾಳಿ ತಂಡದ 15 ವರ್ಷದದ ಬಾಲಕನ ಬೆನ್ನಿಗೆ ನಿಂತ ಹಾರ್ದಿಕ್ ನಡೆ ಅಭಿಮಾನಿಗಳ ಮನ ಗೆದ್ದಿದೆ. "ವೈಭವ್ ಅವರಲ್ಲಿ ಅದ್ಭುತ ಪ್ರತಿಭೆ ಇದೆ. ಇಷ್ಟು ಸಣ್ಣ ವಯಸ್ಸಿನಲ್ಲಿ ಇಂತಹ ಧೈರ್ಯವಾಗಿ ಆಟ ಆಡುವುದು ಅಷ್ಟು ಸುಲಭವಲ್ಲ," ಎಂದು ಹಾರ್ದಿಕ್ ಪಾಂಡ್ಯ ಅವರು ವೈಭವ್ ಸೂರ್ಯವಂಶಿ ಅವರನ್ನು ಹೊಗಳಿದ್ದಾರೆ.
ಪಂದ್ಯದ ಸೋಲಿನ ಬೇಸರವಿದ್ದರೂ, ಪ್ರತಿಭೆಯನ್ನು ಗೌರವಿಸುವಲ್ಲಿ ಹಾರ್ದಿಕ್ ಯಾವುದೇ ಸಂಕೋಚ ತೋರಲಿಲ್ಲ. ಈ ಕಾರಣಕ್ಕಾಗಿಯೇ ಸಾಮಾಜಿಕ ಜಾಲತಾಣದಲ್ಲಿ ಹಾರ್ದಿಕ್ ಅವರನ್ನೇ ಈ ಪಂದ್ಯದ ರಿಯಲ್ ವಿನ್ನರ್ ಎಂದು ನೆಟ್ಟಿಗರು ಕರೆಯುತ್ತಿದ್ದಾರೆ.
ವೈಭವ್ ಸೂರ್ಯವಂಶಿಯ ಹೊಸ ಯುಗ ಆರಂಭ
ಕೇವಲ 14 ಎಸೆತಗಳಲ್ಲಿ 39 ರನ್ ಸಿಡಿಸಿದ ವೈಭವ್, ಮುಂಬೈ ತಂಡದಿಂದ ಪಂದ್ಯವನ್ನು ಸಂಪೂರ್ಣವಾಗಿ ಕಿತ್ತುಕೊಂಡಿದ್ದರು. ರಾಜಸ್ಥಾನ್ ರಾಯಲ್ಸ್ ತಂಡದ ಈ 'ಮಾಸ್ಟರ್ ಸ್ಟ್ರೋಕ್' ಈಗ ಇಡೀ ವಿಶ್ವದ ಗಮನ ಸೆಳೆಯುತ್ತಿದೆ. ಅದೇನೇ ಇರಲು ಹಾರ್ದಿಕ್ ಪಾಂಡ್ಯ ಅವರು ವೈಭವ್ಗೆ ನೀಡಿದ ಈ ವಿಶೇಷ ಪ್ರೋತ್ಸಾಹದ ವಿಡಿಯೋ ಮತ್ತು ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿವೆ. ಅನುಭವಿ ಆಟಗಾರರಿಂದ ಸಿಗುವ ಇಂತಹ ಸಣ್ಣ ಪ್ರೋತ್ಸಾಹ ಯುವ ಆಟಗಾರರ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂಬುದಕ್ಕೆ ಇದು ಪ್ರಮುಖ ಸಾಕ್ಷಿ ಅಂದ್ರೆ ತಪ್ಪಾಗಲಾರದು.
-
ಸ್ಟೇಡಿಯಂ ಸಾಲುತ್ತಿಲ್ಲ, 1 ಲಕ್ಷ ಆಸನಗಳ ಸಾಮರ್ಥ್ಯದ ಮೈದಾನ ಬೇಕು: ಡಿಸಿಎಂಗೆ ಆರ್ಸಿಬಿ ಅಭಿಮಾನಿಗಳ ವಿಶೇಷ ಬೇಡಿಕೆ -
ಆರ್ಸಿಬಿ ಪಾಲಿಗೆ ವರದಾನವಾದ ಒಂದೇ ಒಂದು ನೋ-ಬಾಲ್ -
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
Copra Price: ಇದೇ ಮೊಟ್ಟ ಮೊದಲ ಬಾರಿ ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ












Click it and Unblock the Notifications