T20 World Cup: ಶ್ರೀಲಂಕಾ ವಿರುದ್ಧ ಭರ್ಜರಿ ಗೆಲುವು: ಇನ್ನೂ ಕಷ್ಟವಿದೆ ಭಾರತದ ಸೆಮಿಫೈನಲ್ ಹಾದಿ!
ಮಹಿಳಾ ಟಿ20 ವಿಶ್ವಕಪ್ನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 58 ರನ್ಗಳಿಂದ ಸೋತ ಬಳಿಕ ಗೆಲುವಿನ ಹಾದಿಗೆ ಮರಳಿದ ಭಾರತ ತಂಡ, ಸತತ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಬುಧವಾರ ದುಬೈ ಇಂಟರ್ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತ ಶ್ರೀಲಂಕಾ ವಿರುದ್ಧ 82 ರನ್ಗಳ ಬೃಹತ್ ಗೆಲುವು ಸಾಧಿಸಿದೆ. ಆದರೂ ಭಾರತ ಸೆಮಿಫೈನಲ್ ತಲುಪುವ ಹಾದಿ ಇನ್ನೂ ಸುಲಭವಾಗಿಲ್ಲ.
ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ 172 ರನ್ ಗಳಿಸಿತು. ಇದು ಟಿ20 ವಿಶ್ವಕಪ್ನಲ್ಲಿ ಭಾರತ ಗಳಿಸಿದ ದೊಡ್ಡ ಮೊತ್ತವಾಗಿದೆ. ಸ್ಮೃತಿ ಮಂಧಾನ 28 ಎಸೆತಗಳಲ್ಲಿ 50 ರನ್ ಗಳಿಸಿದರೆ, ಶಫಾಲಿ ವರ್ಮಾ 43 ರನ್ ಗಳಿಸಿ ಭಾರತಕ್ಕೆ ಉತ್ತಮ ಆರಂಭ ಒದಗಿಸಿದರು. ನಾಯಕಿ ಹರ್ಮನ್ ಪ್ರೀತ್ ಕೌರ್ 27 ಎಸೆತಗಳಲ್ಲಿ 52 ರನ್ ಗಳಿಸಿ ಮಿಂಚಿದರು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಭಾರತ 6 ರನ್ ಗಳಿಸುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಭಾರತದ ಬಿಗಿ ಬೌಲಿಂಗ್ ದಾಳಿಗೆ ತತ್ತರಿಸಿದ ಶ್ರೀಲಂಕಾ 19.5 ಓವರ್ ಗಳಲ್ಲಿ 90 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ಅರುಂಧತಿ ರೆಡ್ಡಿ ಮತ್ತು ಆಶಾ ಶೋಭನಾ ತಲಾ 3 ವಿಕೆಟ್ ಪಡೆದರೆ. ರೇಣುಕಾಸಿಂಗ್ ಠಾಕೂರ್ 2 ವಿಕೆಟ್ ಪಡೆದರು. ಶ್ರೇಯಾಂಕಾ ಪಾಟೀಲ್ ಮತ್ತು ದೀಪ್ತಿ ಶರ್ಮಾ ತಲಾ ಒಂದು ವಿಕೆಟ್ ಪಡೆದರು.
ಭಾರತದ ಸೆಮಿಫೈನಲ್ ಹಾದಿ
ಶ್ರೀಲಂಕಾ ವಿರುದ್ಧ 82 ರನ್ಗಳಿಂದ ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿದ ಬಳಿಕ ಭಾರತದ ರನ್ರೇಟ್ ಉತ್ತಮವಾಗಿದೆ. ಋಣಾತ್ಮಕವಾಗಿದ್ದ ಭಾರತದ ನೆಟ್ರನ್ ರೇಟ್ ಶ್ರೀಲಂಕಾ ವಿರುದ್ಧದ ಗೆಲುವಿನ ಬಳಿಕ ಧನಾತ್ಮಕ (+0.576) ವಾಗಿದೆ. ಇದರೊಂದಿಗೆ ಭಾರತ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಏರಿದೆ. ಆಸ್ಟ್ರೇಲಿಯಾ ಮಹಿಳಾ ತಂಡ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ಎರಡು ಪಂದ್ಯಗಳನ್ನು ಗೆದ್ದಿದ್ದು, ಪಾಕಿಸ್ತಾನ ಮತ್ತು ಭಾರತದ ವಿರುದ್ಧ ಆಡಬೇಕಿದೆ.
ಪಾಕಿಸ್ತಾನ ಮಹಿಳಾ ತಂಡ ಸದ್ಯ ಮೂರನೇ ಸ್ಥಾನದಲ್ಲಿದ್ದು, ನ್ಯೂಜಿಲೆಂಡ್ ನಾಲ್ಕನೇ ಸ್ಥಾನದಲ್ಲಿದೆ. ನ್ಯೂಜಿಲೆಂಡ್ ಕೂಡ ಇನ್ನೂ ಎರಡು ಪಂದ್ಯಗಳನ್ನು ಆಡಬೇಕಿದ್ದು ಶ್ರೀಲಂಕಾ, ಪಾಕಿಸ್ತಾನದ ವಿರುದ್ಧ ಸೆಣೆಸಲಿದೆ. ಒಂದು ವೇಳೆ ನ್ಯೂಜಿಲೆಂಡ್ ಮುಂದಿನ ಎರಡೂ ಪಂದ್ಯಗಳನ್ನು ಗೆದ್ದರೆ ಭಾರತದ ಹಾದಿ ಕಠಿಣವಾಗುವ ಸಾಧ್ಯತೆ ಇದೆ.
ಭಾರತಕ್ಕೆ ಇನ್ನೊಂದು ಪಂದ್ಯ ಮಾತ್ರ ಉಳಿದಿದ್ದು ಆಸ್ಟ್ರೇಲಿಯಾ ವಿರುದ್ಧ ಗೆಲುವ ಸಾಧಿಸಿದರೆ ಸೆಮಿಫೈನಲ್ ಹಾದಿ ಸುಲಭವಾಗಲಿದೆ. ನ್ಯೂಜಿಲೆಂಡ್ ಏನಾದರೂ ಉಳಿದ ಎರಡು ಪಂದ್ಯಗಳಲ್ಲಿ ಒಂದು ಪಂದ್ಯ ಸೋತರೂ ಭಾರತ ಸುಲಭವಾಗಿ ಸೆಮಿಫೈನಲ್ ಪ್ರವೇಶಿಸಬಹುದು.
ಅಕ್ಟೋಬರ್ 13ರಂದು ಭಾರತ ಆಸ್ಟ್ರೇಲಿಯಾ ವಿರುದ್ಧ ಸೆಣೆಸಲಿದ್ದು, ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಶ್ರೀಲಂಕಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ಭಾರತದ ಆತ್ಮವಿಶ್ವಾಸ ಹೆಚ್ಚಾಗಿದ್ದು ಆಸ್ಟ್ರೇಲಿಯಾವನ್ನು ಮಣಿಸುವ ವಿಶ್ವಾಸದಲ್ಲಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications