Mohammed Azharuddin: ಭಾರತದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ಗೆ ಶಾಕ್!
ಹೈದರಾಬಾದ್ನ ಉಪ್ಪಳದಲ್ಲಿರುವ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿರುವ ಸ್ಟ್ಯಾಂಡ್ನಿಂದ ಭಾರತದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಅವರ ಹೆಸರನ್ನು ತೆಗೆದುಹಾಕುವಂತೆ ಆದೇಶವನ್ನು ಸ್ವೀಕರಿಸಿದ ಎಂದು ವರದಿಯಾಗಿದೆ. ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಬಗ್ಗೆ ಸಾಕಷ್ಟು ದೂರುಗಳು ಬರುತ್ತಲೇ ಇದ್ದು, ಸಾಕಷ್ಟು ಕಾರಣಗಳಿಗೆ ಸುದ್ದಿ ಮಾಡುತ್ತಿದೆ. ಇದೀಗ ಹೆಸರು ತೆಗೆದುಹಾಕುವಂತೆ ಆದೇಶ ನೀಡಿರುವುದು ಮತ್ತೊಂದು ದೊಡ್ಡ ಸುದ್ದಿಯಾಗಿದೆ.
ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ ಉತ್ತರ ಪೆವಿಲಿಯನ್ ಸ್ಟ್ಯಾಂಡ್ನಿಂದ ಅಜರುದ್ದೀನ್ ಅವರ ಹೆಸರನ್ನು ತೆಗೆದುಹಾಕುವ ಆದೇಶವನ್ನು ಸ್ವೀಕರಿಸಿದೆ. ಅಜರುದ್ದೀನ್ ಸ್ಟ್ಯಾಂಡ್ ಹೆಸರಿನೊಂದಿಗೆ ಇನ್ನು ಮುಂದೆ ಟಿಕೆಟ್ಗಳನ್ನು ನೀಡದಂತೆ ಹೆಚ್ಸಿಎಗೆ ಸೂಚನೆ ಕೊಡಲಾಗಿದೆ. ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ನ ನೈತಿಕ ಅಧಿಕಾರಿ ಮತ್ತು ಒಂಬುಡ್ಸ್ಮನ್ ನ್ಯಾಯಮೂರ್ತಿ ವಿ. ಈಶ್ವರಯ್ಯ ಅವರು ಶನಿವಾರ ಈ ಆದೇಶವನ್ನು ಅಂಗೀಕರಿಸಿದ್ದಾರೆ.

ಕ್ರಿಕ್ಬಜ್ನ ವರದಿ ಮಾಡಿರುವ ಪ್ರಕಾರ, ಸಂಘರ್ಷದ ಕಾರಣದಿಂದ ಈ ನಿರ್ಧಾರ ಮಾಡಲಾಗಿದೆ. ಮೊಹಮ್ಮದ್ ಅಜರುದ್ಧೀನ್ 2019ರಲ್ಲಿ ಹೆಚ್ಸಿಎ ಅಧ್ಯಕ್ಷರಾಗಿದ್ದರು. ಅದೇ ವರ್ಷದಲ್ಲಿ ನಡೆದ ಉನ್ನತ ಸಭೆಯಲ್ಲಿ, ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿರುವ ಉತ್ತರ ಪೆವಿಲಿಯನ್ ಸ್ಟ್ಯಾಂಡ್ ಅನ್ನು "WS ಲಕ್ಷ್ಮಣ್ ಪೆವಿಲಿಯನ್" ನಿಂದ ಅವರ ಹೆಸರಿಗೆ ಮರುನಾಮಕರಣ ಮಾಡಲು ನಿರ್ಧರಿಸಲಾಯಿತು.
ಈ ವರ್ಷ ಫೆಬ್ರವರಿ 28 ರಂದು, ಹೈದರಾಬಾದ್ನ ಲಾರ್ಡ್ಸ್ ಕ್ರಿಕೆಟ್ ಕ್ಲಬ್ (ಎಲ್ಸಿಸಿ) ದೂರು ದಾಖಲಿಸಿ, ಅಜರುದ್ದೀನ್ ಅವರ ಹೆಸರನ್ನು ಸ್ಟ್ಯಾಂಡ್ನಿಂದ ತೆಗೆದುಹಾಕಬೇಕೆಂದು ಒತ್ತಾಯಿಸಿತು. ನಿಯಮ 38 ರ ಪ್ರಕಾರ, ಅಪೆಕ್ಸ್ ಕೌನ್ಸಿಲ್ ಸದಸ್ಯರು ತಮ್ಮ ಪರವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲದ ಕಾರಣ ಇದು ಹಿತಾಸಕ್ತಿ ಸಂಘರ್ಷ ಎಂದು ವಾದಿಸಿದರು.
ಎಲ್ಎಲ್ಸಿಯು ಓಂಬುಡ್ಸ್ಮನ್ಗೆ ಉತ್ತರ ಸ್ಟ್ಯಾಂಡ್ ಅನ್ನು ಮೊಹಮ್ಮದ್ ಅಜರುದ್ದೀನ್ ಸ್ಟ್ಯಾಂಡ್ ಎಂದು ಹೆಸರಿಸುವಲ್ಲಿ ಅಜರುದ್ದೀನ್ ಅವರ ಪಕ್ಷಪಾತ ಕ್ರಮವನ್ನು ಬದಿಗಿಟ್ಟು ಅದನ್ನು "WS ಲಕ್ಷ್ಮಣ್ ಸ್ಟ್ಯಾಂಡ್ ಆಗಿ " ಮುಂದುವರಿಸಬೇಕೆಂದು ಮನವಿ ಮಾಡಿತು.
ಈಶ್ವರಯ್ಯ ಅವರು ತಮ್ಮ 25 ಪುಟಗಳ ತೀರ್ಪಿನಲ್ಲಿ, "ಸಾಮಾನ್ಯ ಸಭೆಯಿಂದ ನಿರ್ಧಾರಕ್ಕೆ ಯಾವುದೇ ಅನುಮೋದನೆ/ ಮಾರ್ಪಾಡು ಮಾಡಲಾಗಿಲ್ಲ ಎಂಬ ಅಂಶವು ಪ್ರತಿವಾದಿ ನಂ. 1 ಅಜರುದ್ದೀನ್ ವಿರುದ್ಧದ ಪ್ರಕರಣವನ್ನು ಮತ್ತಷ್ಟು ಬಲಪಡಿಸುತ್ತದೆ, ಏಕೆಂದರೆ ಪ್ರತಿವಾದಿ ನಂ. 1 ಸ್ವತಃ ಲಾಭ ಪಡೆಯುವ ಅಧಿಕಾರವನ್ನು ಮೀರಿದ್ದಾರೆ ಎಂದು ಹೇಳಿದ್ದಾರೆ.
ತೀರ್ಪಿನ ಬಳಿಕ ಎಲ್ಸಿಸಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿತು. ಸ್ಪೋರ್ಟ್ಸ್ಟಾರ್ ಉಲ್ಲೇಖಿಸಿದಂತೆ, ಕ್ಲಬ್ನ ಖಜಾಂಚಿ ಸೋಮ್ನಾ ಮಿಶ್ರಾ, ಈ ತೀರ್ಪು ಪಾರದರ್ಶಕತೆ ಮತ್ತು ಸಮಗ್ರತೆಗಾಗಿ ನಮ್ಮ ಹೋರಾಟವನ್ನು ತೋರಿಸುತ್ತದೆ. ಅಧಿಕಾರಿಗಳು ನ್ಯಾಯಯುತವಾಗಿ ತೀರ್ಪು ನೀಡಿರುವುದಕ್ಕೆ ಧನ್ಯವಾದ ಎಂದಿದ್ದಾರೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications