ಐಸಿಸಿ ಏಕದಿನ ವಿಶ್ವಕಪ್ 2027: 8 ಕ್ರೀಡಾಂಗಣಗಳು ಫೈನಲ್
ಅಕ್ಟೋಬರ್ ಮತ್ತು ನವೆಂಬರ್ನಲ್ಲಿ ನಡೆಯಲಿರುವ 2027 ರ ವಿಶ್ವಕಪ್ ಅನ್ನು ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆಯೋಜಿಸುತ್ತವೆ. ಮೂರು ದೇಶಗಳ ಎಂಟು ಕ್ರೀಡಾಂಗಣಗಳು ಈ ಬಾರಿ 14 ತಂಡಗಳನ್ನು ಒಳಗೊಂಡ ಪಂದ್ಯಾವಳಿಯನ್ನು ಆಯೋಜಿಸಲಿವೆ.
2023ರಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಭಾರತ ಆತಿಥ್ಯ ವಹಿಸಿತ್ತು. ಆಸ್ಟ್ರೇಲಿಯಾ ದಾಖಲೆಯ 6ನೇ ಬಾರಿ ಟ್ರೋಫಿ ಗೆದ್ದಿತ್ತು. ಮುಂದಿನ ಏಕದಿನ ಪಂದ್ಯಾವಳಿ ದಕ್ಷಿಣ ಆಫ್ರಿಕಾ ಮತ್ತು ಜಿಂಬಾಬ್ವೆಯಲ್ಲಿ ನಡೆಯಲಿದೆ.

ಐಸಿಸಿ ವಿಶ್ವಕಪ್ 2027ರ ಆತಿಥ್ಯ ವಹಿಸಲು ಎಂಟು ಕ್ರೀಡಾಂಗಣಗಳನ್ನು ಅಂತಿಮಗೊಳಿಸಲಾಗಿದೆ. ಜೋಹಾನ್ಸ್ಬರ್ಗ್ನಲ್ಲಿ ವಾಂಡರರ್ಸ್, ಪ್ರಿಟೋರಿಯಾದ ಸೆಂಚುರಿಯನ್ ಪಾರ್ಕ್, ಡರ್ಬನ್ನ ಕಿಂಗ್ಸ್ಮೀಡ್, ಗ್ಕೆಬರ್ಹಾದಲ್ಲಿನ ಸೇಂಟ್ ಜಾರ್ಜ್ ಪಾರ್ಕ್, ಪಾರ್ಲ್ನ ಬೋಲ್ಯಾಂಡ್ ಪಾರ್ಕ್ ಮತ್ತು ಕೇಪ್ ಟೌನ್ನ ನ್ಯೂಲ್ಯಾಂಡ್ಸ್ ಪ್ರಮುಖ ಕ್ರೀಡಾಂಗಣಗಳಾಗಿವೆ.
ಜಿಂಬಾಬ್ವೆಯ ಬ್ಲೋಮ್ಫಾಂಟೈನ್ನಲ್ಲಿರುವ ಮಂಗಾಂಗ್ ಓವಲ್ ಮತ್ತು ಪೂರ್ವ ಲಂಡನ್ನಲ್ಲಿರುವ ಬಫಲೋ ಪಾರ್ಕ್ಗಳಲ್ಲಿ ಕೂಡ ಕೆಲವು ಪಂದ್ಯಗಳನ್ನು ಆಯೋಜನೆ ಮಾಡಲಾಗುತ್ತದೆ.
14 ತಂಡಗಳು ಪ್ರತಿಷ್ಠಿತ ಕಪ್ಗೆ ಸ್ಪರ್ಧೆ
2027ರ ಏಕದಿನ ವಿಶ್ವಕಪ್ನಲ್ಲಿ 14 ತಂಡಗಳು ಪ್ರತಿಷ್ಠಿತ ಕಪ್ಗಾಗಿ ಸೆಣೆಸಲಿವೆ. ಜಿಂಬಾಬ್ವೆ ವಿಶ್ವಕಪ್ಗೆ ಆತಿಥ್ಯ ವಹಿಸುವ ಕಾರಣ, ನೇರವಾಗಿ ವಿಶ್ವಕಪ್ ಆಡಲು ಅರ್ಹತೆ ಪಡೆಯಲಿದೆ.
ಕ್ರಿಕೆಟ್ ದಕ್ಷಿಣ ಆಫ್ರಿಕಾದ (CSA) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಫೋಲೆಟ್ಸಿ ಮೊಸೆಕಿ, ಹೋಟೆಲ್ ಕೊಠಡಿಗಳ ಲಭ್ಯತೆ ಮತ್ತು ವಿಮಾನ ನಿಲ್ದಾಣಗಳ ಸಾಮೀಪ್ಯದಂತಹ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಬೆನೊನಿ, ಜೆಬಿ ಮಾರ್ಕ್ಸ್ ಓವಲ್ ಮತ್ತು ಡೈಮಂಡ್ ಓವಲ್ನಲ್ಲಿರುವ ಮೂರು ಕ್ರೀಡಾಂಗಣಗಳನ್ನು ಏಕದಿನ ವಿಶ್ವಕಪ್ಗೆ ಆಯ್ಕೆ ಮಾಡದೇ ಇರುವುದು ಸವಾಲಿನ ನಿರ್ಧಾರ ಎಂದು ಮೊಸೆಕಿ ಹೇಳಿದ್ದಾರೆ.
ನಾವು 11 ಐಸಿಸಿ-ಮಾನ್ಯತೆ ಪಡೆದ ಸ್ಥಳಗಳನ್ನು ಹೊಂದಿದ್ದೇವೆ, ಆದ್ದರಿಂದ ಮೂರನ್ನು ಬಿಟ್ಟುಬಿಡುವುದು ಕಷ್ಟಕರವಾಗಿತ್ತು, ಆದರೆ ಬಹಳಷ್ಟು ವಿಷಯಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಸ್ಥಳದಲ್ಲಿ ಲಭ್ಯವಿರುವ ಸ್ಥಳಗಳ ಹೊರಗಿನ ತರಬೇತಿ ಸ್ಥಳಗಳ ಪ್ರಮುಖ ವಿಷಯವೂ ಇದೆ ಎಂದು ಹೇಳಿದ್ದಾರೆ.
ಆತಿಥೇಯ ದಕ್ಷಿಣ ಆಫ್ರಿಕಾ ಮತ್ತು ಜಿಂಬಾಬ್ವೆ ನೇರವಾಗಿ ಪಂದ್ಯಾವಳಿಗೆ ಅರ್ಹತೆ ಪಡೆದಿವೆ, ಆದರೆ ನಮೀಬಿಯಾ ಆಫ್ರಿಕಾದ ಅರ್ಹತಾ ಸುತ್ತಿನ ಮೂಲಕ ವಿಶ್ವಕಪ್ಗೆ ಬರಬೇಕಿದೆ.
ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಅಗ್ರ ಎಂಟು ತಂಡಗಳು ನೇರವಾಗಿ ಪಂದ್ಯಾವಳಿಗೆ ಅರ್ಹತೆ ಪಡೆಯುತ್ತವೆ, ಆದರೆ ಉಳಿದ ನಾಲ್ಕು ಸ್ಥಾನಗಳನ್ನು ಜಾಗತಿಕ ಅರ್ಹತಾ ಪಂದ್ಯಾವಳಿಗಳ ಮೂಲಕ ನಿರ್ಧರಿಸಲಾಗುತ್ತದೆ.
ಪಂದ್ಯಾವಳಿಯಲ್ಲಿ ತಲಾ ಏಳು ತಂಡಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಪ್ರತಿ ಗುಂಪಿನಿಂದ ಅಗ್ರ ಮೂರು ತಂಡಗಳು ಸೂಪರ್ ಸಿಕ್ಸ್ ಹಂತಕ್ಕೆ ಪ್ರವೇಶಿಸುತ್ತವೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications