Ind vs Aus: 240 ರನ್ಗಳಿಗೆ ಆಲೌಟ್ ಆದ ಭಾರತ: ಬೌಲರ್ಗಳೇ ಕಾಪಾಡಬೇಕು!
ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತ 50 ಓವರ್ ಗಳಲ್ಲಿ 240 ರನ್ಗಳಿಗೆ ಆಲೌಟ್ ಆಗಿದೆ. ವಿಶ್ವಕಪ್ ಗೆಲ್ಲಲು ಆಸ್ಟ್ರೇಲಿಯಾ 241 ರನ್ ಗಳಿಸಬೇಕಾಗಿದೆ. ಇದೇ ಮೊದಲ ಬಾರಿಗೆ ಭಾರತ ಈ ವಿಶ್ವಕಪ್ನಲ್ಲಿ ಆಲೌಟ್ ಆಗಿದೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆಸ್ಟ್ರೇಲಿಯಾ ಅತ್ಯುತ್ತಮ ಬೌಲಿಂಗ್ ಪ್ರದರ್ಶನದ ನಡುವೆ ಕೂಡ ರೋಹಿತ್ ಶರ್ಮಾ ಸ್ಫೋಟಕ ಇನ್ನಿಂಗ್ಸ್ ಆಡಿದರು. ಶುಭಮನ್ ಗಿಲ್ ಕೇವಲ 4 ರನ್ ಗಳಿಸಿ ಔಟಾದರು, ರೋಹಿತ್ 31 ಎಸೆತಗಳಲ್ಲಿ 4 ಬೌಂಡರಿ 3 ಸಿಕ್ಸರ್ ಸಹಿತ 47 ರನ್ ಗಳಿಸಿದರು.

ನಂತರ ಬಂದ ಶ್ರೇಯಸ್ ಅಯ್ಯರ್ ಕೂಡ 4 ರನ್ ಗಳಿಸಿ ಔಟಾದರು. ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡುವ ಮೂಲಕ ಭಾರತದ ಕುಸಿತವನ್ನು ತಡೆದರು. 67 ರನ್ಗಳ ಜೊತೆಯಾಡಿದಾಗ ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡರು.
63 ಎಸೆತಗಳಲ್ಲಿ 4 ಬೌಂಡರಿ ಸಹಿತ ಜವಾಬ್ದಾರಿಯುತ 54 ರನ್ ಗಳಿಸಿದ ಕೊಹ್ಲಿ ಔಟಾದರು. ನಂತರ ಬಂದ ರವೀಂದ್ರ ಜಡೇಜಾ 9 ರನ್ ಗಳಿಸಿ ಔಟಾದರೆ, ಕೆಎಲ್ ರಾಹುಲ್ 66 ರನ್ ಗಳಿಸಿದ್ದಾಗ ಔಟಾದರು. ಮೊಹಮ್ಮದ್ ಶಮಿ 6, ಬುಮ್ರಾ 1 ರನ್ ಗಳಿಸಿ ಔಟಾದರು. ಸೂರ್ಯಕುಮಾರ್ ಯಾದವ್ ಕೂಡ 18 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಕುಲದೀಪ್ ಯಾದವ್ 18 ರನ್ ಗಳಿಸಿದರೆ, ಮೊಹಮ್ಮದ್ ಸಿರಾಜ್ 9 ರನ್ ಗಳಿಸಿದರು.
ಬೌಲಿಂಗ್ಗೆ ನೆರವಾಗುತ್ತಿರುವ ಪಿಚ್
ಅಹಮದಾಬಾದ್ನಲ್ಲಿ ಪಿಚ್ ಬೌಲರ್ ಗಳಿಗೆ ನೆರವಾಗುತ್ತಿದ್ದು, ಬ್ಯಾಟರ್ ಗಳು ರನ್ ಗಳಿಸಲು ಕಷ್ಟಪಡುತ್ತಿದ್ದಾರೆ. ಬೌನ್ಸ್ ಕಡಿಮೆ ಇರುವ ಕಾರಣ ಬೌಂಡರಿ ಗಳಿಸುವುದು ಕಷ್ಟವಾಗುತ್ತದೆ. ಭಾರತದ ಬೌಲಿಂಗ್ ಉತ್ತಮವಾಗಿರುವ ಕಾರಣ ಈ ಮೊತ್ತವನ್ನು ರಕ್ಷಣೆ ಮಾಡುವ ಅವಕಾಶ ಕೂಡ ಇದೆ.
ಉಭಯ ತಂಡಗಳ ಆಡುವ ಬಳಗ
ಭಾರತ : ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ : ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಆಡಮ್ ಝಂಪಾ, ಜೋಶ್ ಹ್ಯಾಜಲ್ವುಡ್.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications