Devdutt Padikkal: ಮೊದಲ ಅಂತಾರಾಷ್ಟ್ರೀಯ ಟೆಸ್ಟ್ನಲ್ಲೇ ಮಿಂಚಿದ ಕನ್ನಡಿಗ
ಧರ್ಮಶಾಲಾದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಮೇಲುಗೈ ಸಾಧಿಸಿದೆ. ಎರಡನೇ ದಿನದ ಆಟ ಮುಗಿಯುವ ಮುನ್ನವೇ ಈ ಪಂದ್ಯದಲ್ಲಿ ಹಲವು ದಾಖಲೆಗಳು ನಿರ್ಮಾಣವಾಗಿದೆ.
ಇಂಗ್ಲೆಂಡ್ ವಿರುದ್ಧದ ಸರಣಿ ಭಾರತದ ಪಾಲಿಗೆ ವಿಶೇಷ. ಬರೋಬ್ಬರಿ ಐವರು ಆಟಗಾರರು ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದಾರೆ. ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್, ಆಕಾಶ್ ದೀಪ್ ಮತ್ತು ದೇವದತ್ ಪಡಿಕ್ಕಲ್ ಈ ಸರಣಿಯಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿದರು.

ರಜತ್ ಪಾಟಿದಾರ್ ಅವರನ್ನು ಹೊರತುಪಡಿಸಿ ಉಳಿದ ಎಲ್ಲಾ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದರು. ಧರ್ಮಶಾಲಾ ಟೆಸ್ಟ್ ನಲ್ಲಿ ಪದಾರ್ಪಣೆ ಮಾಡಿದ ಕನ್ನಡಿಗ ದೇವದತ್ ಪಡಿಕ್ಕಲ್ ಮೊದಲ ಇನ್ನಿಂಗ್ಸ್ನಲ್ಲಿ ಅರ್ಧಶತಕ ಗಳಿಸುವ ಮೂಲಕ ಗಮನ ಸೆಳೆದರು.
ಉತ್ತಮ ಜೊತೆಯಾಟ
ಆರಂಭದಲ್ಲಿ ಯಶಸ್ವಿ ಜೈಸ್ವಾಲ್ ಅರ್ಧಶತಕ ಗಳಿಸಿದ ಬಳಿಕ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಶತಕ ಗಳಿಸಿ ಔಟಾದರು. ಬಳಿಕ ಜೊತೆಯಾದ ಸರ್ಫರಾಜ್ ಖಾನ್ ಮತ್ತು ದೇವದತ್ ಪಡಿಕ್ಕಲ್ 97 ರನ್ಗಳ ಅಮೂಲ್ಯ ಜೊತೆಯಾಟ ಆಡಿದರು. ಮೊದಲನೇ ಪಂದ್ಯ ಆಡುತ್ತಿದ್ದರೂ ಆತ್ಮವಿಶ್ವಾಸದಿಂದ ಬ್ಯಾಟಿಂಗ್ ಮಾಡಿದ ದೇವದತ್ ಪಡಿಕ್ಕಲ್ ಬೌಂಡರಿ, ಸಿಕ್ಸರ್ ಮೂಲಕ ರನ್ ಗಳಿಸಿದರು. 103 ಎಸೆತಗಳಲ್ಲಿ 10 ಬೌಂಡರಿ 1 ಭರ್ಜರಿ ಸಿಕ್ಸರ್ ಸಹಿತ 65 ರನ್ ಗಳಿಸಿ ಔಟಾದರು.
23 ವರ್ಷದ ಯುವ ಬ್ಯಾಟರ ದೇವದತ್ ಪಡಿಕ್ಕಲ್ ಮೊದಲ ಪಂದ್ಯದಲ್ಲೇ ಭರವಸೆ ಮೂಡಿಸಿದ್ದಾರೆ. ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿದ್ದ ಅವರು, ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ತಂಡಕ್ಕೆ ಸೇರ್ಪಡೆಯಾದರು.
ಈ ಬಾರಿ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ 4 ಪಂದ್ಯಗಳನ್ನು ಮಾತ್ರ ಆಡಿರುವ ಅವರು 6 ಇನ್ನಿಂಗ್ಸ್ಗಳಲ್ಲಿ 556 ರನ್ ಗಳಿಸಿ ಮಿಂಚಿದ್ದರು. 193 ರನ್ ಅವರು ಗಳಿಸಿದ ಅತ್ಯಧಿಕ ಸ್ಕೋರ್ ಆಗಿದೆ. ಅದಾದ ಬಳಿಕ ಇಂಗ್ಲೆಂಡ್ ಲಯನ್ಸ್ ವಿರುದ್ಧ ಭಾರತ ಎ ತಂಡಕ್ಕಾಗಿ ಆಡಿದ್ದ ಪಡಿಕ್ಕಲ್ ಅಲ್ಲೂ ಶತಕ ಸಿಡಿಸಿದ್ದರು.
ಕರ್ನಾಟಕ ತಂಡಕ್ಕಾಗಿ ಆಡಿ ಉತ್ತಮ ಪ್ರದರ್ಶನ ನೀಡಿದ್ದ ಅವರು, ಐಪಿಎಲ್ನಲ್ಲಿ ಮೊದಲ ಬಾರಿಗೆ ಆರ್ ಸಿಬಿ ತಂಡಕ್ಕಾಗಿ ಆಡಿದರು. ಬಳಿಕ ರಾಜಸ್ಥಾನ ರಾಯಲ್ಸ್ ಪಾಳಯ ಸೇರಿದ ಅವರು, 2024ರ ಐಪಿಎಲ್ಗೆ ಮುನ್ನ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಟ್ರೇಡ್ ಆಗಿದ್ದಾರೆ.
-
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ












Click it and Unblock the Notifications