Get Updates
Get notified of breaking news, exclusive insights, and must-see stories!

India vs New Zealand ODI: ನ್ಯೂಜಿಲೆಂಡ್‌ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಕನ್ನಡಿಗನಿಗೆ ಸ್ಥಾನ

India vs New Zealand: ಜನವರಿ 11, 2026ರಂದು ಪ್ರಾರಂಭ ಆಗಲಿರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಬಿಸಿಸಿಐ ಅಧಿಕೃತವಾಗಿ ಭಾರತ ತಂಡವನ್ನ ಪ್ರಕಟಿಸಿದೆ. ಇದರಲ್ಲಿ ಕನ್ನಡಿಗ ಕೆಎಲ್‌ ರಾಹುಲ್‌ ಸ್ಥಾನ ಪಡೆದಿದ್ದಾರೆ. ಹಾಗಾದ್ರೆ ಇನ್ನೂ ಯಾರೆಲ್ಲಾ ಇದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಭೆಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಅಧಿಕೃತವಾಗಿ ಭಾರತ ತಂಡವನ್ನ ಪ್ರಕಟಿಸಲಾಗಿದೆ. ಭಾರತವು ತನ್ನ ಅಂತಿಮ ದ್ವಿಪಕ್ಷೀಯ 50-ಓವರ್‌ಗಳ ನಿಯೋಜನೆಯನ್ನು ಪ್ರಾರಂಭಿಸುತ್ತದೆ, ಮೊದಲು ಗಮನವು ಸಂಪೂರ್ಣವಾಗಿ ಟಿ-20 ವಿಶ್ವಕಪ್‌ ಮೇಲೆ ಇರಿಸಲಾಗಿದೆ.

Ind vs NZ ODIs KL Rahul Included as BCCI Announces 15-Member India Squad for January 2026 Series

ಶ್ರೇಯಸ್ ಅಯ್ಯರ್ ಅವರ ಸೇರ್ಪಡೆಯು ಸೆಂಟರ್ ಆಫ್ ಎಕ್ಸಲೆಲ್ಸ್‌ನಿಂದ ಅಂತಿಮ ಫಿಟ್‌ನೆಸ್ ಅನುಮೋದನೆಯನ್ನು ಪಡೆಯುವುದರ ಮೇಲೆ ಅವಲಂಬಿತ ಆಗಿರುತ್ತದೆ. ಈ ತಂಡದ ಗಮನಾರ್ಹ ವಿಚಾರವೆಂದರೆ, ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡುವುದು. ಮುಂಬರುವ ಟಿ-20 ವಿಶ್ವಕಪ್‌ಗಾಗಿ ಅವರು ಗರಿಷ್ಠ ಫಿಟ್‌ನೆಸ್‌ನಲ್ಲಿ ಉಳಿಯುವುದನ್ನು ಖಚಿತಪಡಿಸಿಕೊಳ್ಳಲು, ಆಯ್ಕೆದಾರರು ತಮ್ಮ ಕೆಲಸದ ಹೊರೆಗಳನ್ನು ನಿರ್ವಹಿಸಲು ಆಯ್ಕೆ ಮಾಡಿಕೊಂಡಿದ್ದು, ಅವರನ್ನು 50-ಓವರ್‌ಗಳ ಪಂದ್ಯಗಳಿಂದ ಹೊರಗಿಡಲಾಗಿದೆ.

ಆಯ್ಕೆಯ ಹೆಚ್ಚು ಚರ್ಚಿಸಲ್ಪಟ್ಟ ಅಂಶವೆಂದರೆ ವಿಕೆಟ್ ಕೀಪರ್, ಬ್ಯಾಟರ್ ಸ್ಲಾಟ್. ಕೆ.ಎಲ್ ರಾಹುಲ್ ಸ್ಟಂಪ್‌ಗಳ ಹಿಂದೆ ಮತ್ತು ಮಧ್ಯಮ ಕ್ರಮಾಂಕದಲ್ಲಿ ಪ್ರಾಥಮಿಕ ಆಯ್ಕೆಯಾಗಿ ಉಳಿದಿದ್ದಾರೆ. ಅಲ್ಲದೆ, ರಿಷಭ್ ಪಂತ್ ತಂಡದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಶುಭ್ಮನ್ ಗಿಲ್ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನು ಬಿಸಿಸಿಐ ಘೋಷಿಸಿದೆ. ಅಚ್ಚರಿಯ ವಿಚಾರ ಏನೆಂದರೆ, ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ತಂಡದ ಭಾಗವಾಗಿದ್ದ ತಿಲಕ್ ವರ್ಮಾ ಮತ್ತು ರುತುರಾಜ್ ಗಾಯಕ್ವಾಡ್ ಅವರನ್ನು ಈ ಸರಣಿಯಿಂದ ಕೈಬಿಡಲಾಗಿದೆ.

ಗಾಯದಿಂದಾಗಿ ಟೀಂ ಇಂಡಿಯಾದಿಂದ ಹೊರಗುಳಿದಿದ್ದ ಶ್ರೇಯಸ್ ಅಯ್ಯರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ವೇಗದ ಬೌಲರ್ ಮೊಹಮ್ಮದ್ ಸಿರಾಜ್, ರಿಷಭ್ ಪಂತ್ ಕೂಡ ಸ್ಥಾನ ಸಿಕ್ಕಿದ್ದು, ಆಲ್ರೌಂಡರ್ ನಿತೀಶ್ ರೆಡ್ಡಿ ಕೂಡ ತಂಡಕ್ಕೆ ಆಯ್ಕೆ ಆಗಿದ್ದಾರೆ. ಕಳೆದ ಆಸ್ಟ್ರೇಲಿಯಾ ಪ್ರವಾಸದ ಸಮಯದಲ್ಲಿ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ ಅಂದಿನಿಂದ ಟೀಂ ಇಂಡಿಯಾದಿಂದ ಹೊರಗುಳಿದಿದ್ದರು.

ಪ್ರಸ್ತುತ ಎನ್ಸಿಎನಲ್ಲಿರುವ ಅಯ್ಯರ್ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸ್ ಆಗಿದ್ದು, ತಂಡದಲ್ಲಿ ಆಡಲು ಒಪ್ಪಿಗೆ ಸಿಕ್ಕಿದೆ. ಈ ಹಿನ್ನೆಲೆ ಅಯ್ಯರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆದರೂ ಅವರು ಟೀಂ ಇಂಡಿಯಾ ಪರ ಕಣಕ್ಕಿಳಿಯುವ ಮೊದಲು ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಬೇಕಾಗುತ್ತದೆ. ಒಂದು ವೇಳೆ ಇದರಲ್ಲಿ ತಮ್ಮ ಫಿಟ್ನೆಸ್ ಫೇಲ್‌ ಆದರೆ, ಅಯ್ಯರ್ಗೆ ನ್ಯೂಜಿಲೆಂಟ್‌ ವಿರುದ್ಧದ ಏಕದಿನ ಸರಣಿಯಲ್ಲಿ ಆಡುವ ಅವಕಾಶ ಕೈತಪ್ಪುವ ಸಾಧ್ಯತೆ ಇರುತ್ತದೆ. ಒಟ್ಟಿನಲ್ಲಿ ಕನ್ನಡಿಗ ಕೆಎಲ್‌ ರಾಹುಲ್‌ಗೆ ಅವಕಾಶ ಸಿಕ್ಕಿದ್ದು, ಅವರು ಕೀಪರ್ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

ಭಾರತ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ಉಪನಾಯಕ), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ನಿತೀಶ್‌ ಕುಮಾರ್ ರೆಡ್ಡಿ, ಕುಲದೀಪ್ ಯಾದವ್, ಆರ್ಶಬ್ ರೆಡ್ಡಿ, ಅರ್ಷದೀಪ್‌ ಸಿಂಗ್, ಯಶಸ್ವಿ ಜೈಸ್ವಾಲ್.

ಏಕದಿನ ಸರಣಿ ವೇಳಾಪಟ್ಟಿ

* ಜನವರಿ 11: ಮೊದಲ ಏಕದಿನ ಪಂದ್ಯ, ವಡೋದರಾ
* ಜನವರಿ 14: ಎರಡನೇ ಏಕದಿನ ಪಂದ್ಯ, ರಾಜ್‌ಕೋಟ್
* ಜನವರಿ 18: ಮೂರನೇ ಏಕದಿನ ಪಂದ್ಯ, ಇಂದೋರ್

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+