India vs New Zealand ODI: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಕನ್ನಡಿಗನಿಗೆ ಸ್ಥಾನ
India vs New Zealand: ಜನವರಿ 11, 2026ರಂದು ಪ್ರಾರಂಭ ಆಗಲಿರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಬಿಸಿಸಿಐ ಅಧಿಕೃತವಾಗಿ ಭಾರತ ತಂಡವನ್ನ ಪ್ರಕಟಿಸಿದೆ. ಇದರಲ್ಲಿ ಕನ್ನಡಿಗ ಕೆಎಲ್ ರಾಹುಲ್ ಸ್ಥಾನ ಪಡೆದಿದ್ದಾರೆ. ಹಾಗಾದ್ರೆ ಇನ್ನೂ ಯಾರೆಲ್ಲಾ ಇದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಭೆಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಅಧಿಕೃತವಾಗಿ ಭಾರತ ತಂಡವನ್ನ ಪ್ರಕಟಿಸಲಾಗಿದೆ. ಭಾರತವು ತನ್ನ ಅಂತಿಮ ದ್ವಿಪಕ್ಷೀಯ 50-ಓವರ್ಗಳ ನಿಯೋಜನೆಯನ್ನು ಪ್ರಾರಂಭಿಸುತ್ತದೆ, ಮೊದಲು ಗಮನವು ಸಂಪೂರ್ಣವಾಗಿ ಟಿ-20 ವಿಶ್ವಕಪ್ ಮೇಲೆ ಇರಿಸಲಾಗಿದೆ.

ಶ್ರೇಯಸ್ ಅಯ್ಯರ್ ಅವರ ಸೇರ್ಪಡೆಯು ಸೆಂಟರ್ ಆಫ್ ಎಕ್ಸಲೆಲ್ಸ್ನಿಂದ ಅಂತಿಮ ಫಿಟ್ನೆಸ್ ಅನುಮೋದನೆಯನ್ನು ಪಡೆಯುವುದರ ಮೇಲೆ ಅವಲಂಬಿತ ಆಗಿರುತ್ತದೆ. ಈ ತಂಡದ ಗಮನಾರ್ಹ ವಿಚಾರವೆಂದರೆ, ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡುವುದು. ಮುಂಬರುವ ಟಿ-20 ವಿಶ್ವಕಪ್ಗಾಗಿ ಅವರು ಗರಿಷ್ಠ ಫಿಟ್ನೆಸ್ನಲ್ಲಿ ಉಳಿಯುವುದನ್ನು ಖಚಿತಪಡಿಸಿಕೊಳ್ಳಲು, ಆಯ್ಕೆದಾರರು ತಮ್ಮ ಕೆಲಸದ ಹೊರೆಗಳನ್ನು ನಿರ್ವಹಿಸಲು ಆಯ್ಕೆ ಮಾಡಿಕೊಂಡಿದ್ದು, ಅವರನ್ನು 50-ಓವರ್ಗಳ ಪಂದ್ಯಗಳಿಂದ ಹೊರಗಿಡಲಾಗಿದೆ.
ಆಯ್ಕೆಯ ಹೆಚ್ಚು ಚರ್ಚಿಸಲ್ಪಟ್ಟ ಅಂಶವೆಂದರೆ ವಿಕೆಟ್ ಕೀಪರ್, ಬ್ಯಾಟರ್ ಸ್ಲಾಟ್. ಕೆ.ಎಲ್ ರಾಹುಲ್ ಸ್ಟಂಪ್ಗಳ ಹಿಂದೆ ಮತ್ತು ಮಧ್ಯಮ ಕ್ರಮಾಂಕದಲ್ಲಿ ಪ್ರಾಥಮಿಕ ಆಯ್ಕೆಯಾಗಿ ಉಳಿದಿದ್ದಾರೆ. ಅಲ್ಲದೆ, ರಿಷಭ್ ಪಂತ್ ತಂಡದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ಶುಭ್ಮನ್ ಗಿಲ್ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನು ಬಿಸಿಸಿಐ ಘೋಷಿಸಿದೆ. ಅಚ್ಚರಿಯ ವಿಚಾರ ಏನೆಂದರೆ, ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ತಂಡದ ಭಾಗವಾಗಿದ್ದ ತಿಲಕ್ ವರ್ಮಾ ಮತ್ತು ರುತುರಾಜ್ ಗಾಯಕ್ವಾಡ್ ಅವರನ್ನು ಈ ಸರಣಿಯಿಂದ ಕೈಬಿಡಲಾಗಿದೆ.
ಗಾಯದಿಂದಾಗಿ ಟೀಂ ಇಂಡಿಯಾದಿಂದ ಹೊರಗುಳಿದಿದ್ದ ಶ್ರೇಯಸ್ ಅಯ್ಯರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ವೇಗದ ಬೌಲರ್ ಮೊಹಮ್ಮದ್ ಸಿರಾಜ್, ರಿಷಭ್ ಪಂತ್ ಕೂಡ ಸ್ಥಾನ ಸಿಕ್ಕಿದ್ದು, ಆಲ್ರೌಂಡರ್ ನಿತೀಶ್ ರೆಡ್ಡಿ ಕೂಡ ತಂಡಕ್ಕೆ ಆಯ್ಕೆ ಆಗಿದ್ದಾರೆ. ಕಳೆದ ಆಸ್ಟ್ರೇಲಿಯಾ ಪ್ರವಾಸದ ಸಮಯದಲ್ಲಿ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ ಅಂದಿನಿಂದ ಟೀಂ ಇಂಡಿಯಾದಿಂದ ಹೊರಗುಳಿದಿದ್ದರು.
🚨 News 🚨
— BCCI (@BCCI) January 3, 2026
India’s squad for @IDFCFIRSTBank ODI series against New Zealand announced.
Details ▶️ https://t.co/Qpn22XBAPq#TeamIndia | #INDvNZ pic.twitter.com/8Qp2WXPS5P
ಪ್ರಸ್ತುತ ಎನ್ಸಿಎನಲ್ಲಿರುವ ಅಯ್ಯರ್ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸ್ ಆಗಿದ್ದು, ತಂಡದಲ್ಲಿ ಆಡಲು ಒಪ್ಪಿಗೆ ಸಿಕ್ಕಿದೆ. ಈ ಹಿನ್ನೆಲೆ ಅಯ್ಯರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆದರೂ ಅವರು ಟೀಂ ಇಂಡಿಯಾ ಪರ ಕಣಕ್ಕಿಳಿಯುವ ಮೊದಲು ವಿಜಯ್ ಹಜಾರೆ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಬೇಕಾಗುತ್ತದೆ. ಒಂದು ವೇಳೆ ಇದರಲ್ಲಿ ತಮ್ಮ ಫಿಟ್ನೆಸ್ ಫೇಲ್ ಆದರೆ, ಅಯ್ಯರ್ಗೆ ನ್ಯೂಜಿಲೆಂಟ್ ವಿರುದ್ಧದ ಏಕದಿನ ಸರಣಿಯಲ್ಲಿ ಆಡುವ ಅವಕಾಶ ಕೈತಪ್ಪುವ ಸಾಧ್ಯತೆ ಇರುತ್ತದೆ. ಒಟ್ಟಿನಲ್ಲಿ ಕನ್ನಡಿಗ ಕೆಎಲ್ ರಾಹುಲ್ಗೆ ಅವಕಾಶ ಸಿಕ್ಕಿದ್ದು, ಅವರು ಕೀಪರ್ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.
ಭಾರತ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ಉಪನಾಯಕ), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಕುಲದೀಪ್ ಯಾದವ್, ಆರ್ಶಬ್ ರೆಡ್ಡಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್.
ಏಕದಿನ ಸರಣಿ ವೇಳಾಪಟ್ಟಿ
* ಜನವರಿ 11: ಮೊದಲ ಏಕದಿನ ಪಂದ್ಯ, ವಡೋದರಾ
* ಜನವರಿ 14: ಎರಡನೇ ಏಕದಿನ ಪಂದ್ಯ, ರಾಜ್ಕೋಟ್
* ಜನವರಿ 18: ಮೂರನೇ ಏಕದಿನ ಪಂದ್ಯ, ಇಂದೋರ್
-
ಟಿ20 ವಿಶ್ವಕಪ್ 2026 ಸೆಮಿಫೈನಲ್: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಸಂಜು ಸ್ಯಾಮ್ಸನ್ -
ಐಪಿಎಲ್ ನಂತರ ಭಾರತ-ಅಫ್ಘಾನಿಸ್ತಾನ್ ಸರಣಿ ಪಂದ್ಯಗಳ ಹಬ್ಬ: ವೇಳಾಪಟ್ಟಿ ಪ್ರಕಟ -
RCB: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐದು ಪಂದ್ಯಗಳ ಆಯೋಜನೆಗೆ ಆರ್ಸಿಬಿ ಒಪ್ಪಿಗೆ -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
Sourav Ganguly: ಟಿ20 ವಿಶ್ವಕಪ್ 2026; ಸಂಜು ಆಟಕ್ಕೆ ಮನಸೋತು ಬಿಸಿಸಿಐಗೆ ಬಿಸಿ ಮುಟ್ಟಿಸಿದ 'ದಾದಾ' ಸೌರವ್ ಗಂಗೂಲಿ -
Today Horoscope Mar 3: ಹುಣ್ಣಿಮೆಯ ದಿನ ಚಂದ್ರಗ್ರಹಣ, ಈ ರಾಶಿಯವರ ಆರೋಗ್ಯದಲ್ಲಿ ಏರುಪೇರು











Click it and Unblock the Notifications