Ind vs SA ODI: ಅರ್ಷದೀಪ್, ಆವೇಶ್ ಖಾನ್ ಮಾರಕ ಬೌಲಿಂಗ್: 116 ರನ್ಗಳಿಗೆ ಆಲೌಟ್ ಆದ ಹರಿಣಗಳು
ಜೋಹಾನ್ಸ್ಬರ್ಗ್ನ ವಾಂಡರರ್ಸ್ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡದ ಮಿಂಚಿನ ಬೌಲಿಂಗ್ ದಾಳಿಗೆ ದಕ್ಷಿಣ ಆಫ್ರಿಕಾ ತತ್ತರಿಸಿದೆ. ಅರ್ಷದೀಪ್ ಸಿಂಗ್ ಮತ್ತು ಆವೇಶ್ ಖಾನ್ ಅವರ ವೇಗದ ಬೌಲಿಂಗ್ಗೆ ತತ್ತರಿಸಿದ ದಕ್ಷಿಣ ಆಫ್ರಿಕಾ 116 ರನ್ಗಳಿಗೆ ಆಲೌಟ್ ಆಗಿದೆ.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಆದರೆ ಭಾರತದ ವೇಗಿಗಳು ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಪಡೆಯ ಲೆಕ್ಕಾಚಾರವನ್ನೇ ತಲೆಕೆಳಗು ಮಾಡಿದರು. 2ನೇ ಓವರ್ ನಲ್ಲೇ ದಕ್ಷಿಣ ಆಫ್ರಿಕಾ ಎರಡು ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು.

ಅರ್ಷದೀಪ್ ಸಿಂಗ್ ತಮ್ಮ ಮೊದಲ ಓವರ್ ನಲ್ಲೇ ಎರಡು ವಿಕೆಟ್ ಪಡೆದು ಮಿಂಚಿದರು. ರೀಜಾ ಹೆಂಡ್ರಿಕ್ಸ್ ಔಟಾದ ನಂತರದ ಎಸೆತದಲ್ಲೇ ರಾಸಿ ವಾನ್ ಡರ್ ಡುಸೆನ್ ಕೂಡ ಔಟಾಗುವ ಮೂಲಕ ದಕ್ಷಿಣ ಆಫ್ರಿಕಾ ತಂಡದ ಕುಸಿತ ಆರಂಭವಾಯಿತು.
ಅದಾದ ಬಳಿಕ ಟೋನಿ ದೆ ಝೋರ್ಜಿ (28 ರನ್), ನಾಯಕ ಐಡೆನ್ ಮಾರ್ಕ್ರಾಮ್ (12) 39 ರನ್ಗಳ ಜೊತೆಯಾಟ ಆಡುವ ಮೂಲಕ ಆರಂಭಿಕ ಆಘಾತವನ್ನು ಎದುರಿಸಿದರು. ಆದರೆ, ಟೋನಿ 28 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಬಂದ ಹೆನ್ರಿಕ್ ಕ್ಲಾಸೆನ್ ಕೇವಲ 6 ರನ್ ಗಳಿಸಿ ಔಟಾದರು.
ಡೇವಿಡ್ ಮಿಲ್ಲರ್ 2 ರನ್ ಗಳಿಸಿ ಔಟಾದರೆ, ನಾಯಕ ಮಾರ್ಕ್ರಾಮ್ 12 ರನ್ ಗಳಿಸಿ ಔಟಾದರು. ವಿಯಾನ್ ಮುಲ್ಡರ್ ಯಾವುದೇ ರನ್ ಗಳಿಸದೆ ವಿಕೆಟ್ ಒಪ್ಪಿಸಿದರು. ಆಂಡಿಲೆ ಫೆಲುಕ್ವಾಯೊ 33 ರನ್ ಗಳಿಸುವ ಮೂಲಕ ದಕ್ಷಿಣ ಆಫ್ರಿಕಾ 100 ರನ್ಗಳ ಗಡಿ ದಾಟಲು ಸಹಾಯ ಮಾಡಿದರು.
ಕೇಶವ್ ಮಹರಾಜ್ (4), ನಾಂದ್ರೆ ಬರ್ಗರ್ (7), ತಬ್ರೈಜ್ ಶಂಸಿ ಅಜೇಯ 11 ರನ್ ಗಳಿಸಿದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ 27.3 ಓವರ್ ಗಳಲ್ಲಿ 116 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗುವ ಮೂಲಕ ಭಾರತಕ್ಕೆ ಸುಲಭ ಗುರಿ ನೀಡಿದೆ.
ಅರ್ಷದೀಪ್, ಆವೇಶ್ ಖಾನ್ ಮಿಂಚು
ಬುಮ್ರಾ, ಸಿರಾಜ್, ಶಮಿ ಅವರ ಅನುಪಸ್ಥಿತಿಯಲ್ಲಿ ತಂಡದಲ್ಲಿ ಅವಕಾಶ ಪಡೆದ ಅರ್ಷದೀಪ್ ಸಿಂಗ್ ಮತ್ತು ಆವೇಶ್ ಖಾನ್ ಮಿಂಚು ಹರಿಸಿದರು. ಅರ್ಷದೀಪ್ ಸಿಂಗ್ 10 ಓವರ್ ಗಳಲ್ಲಿ 37 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದರು. ಆವೇಶ್ ಖಾನ್ 8 ಓವರ್ ಗಳಲ್ಲಿ 27 ರನ್ ನೀಡಿ 4 ವಿಕೆಟ್ ಪಡೆದುಕೊಂಡರು. ಕುಲದೀಪ್ ಯಾದವ್ ಕೊನೆಯ ಒಂದು ವಿಕೆಟ್ ಪಡೆದರು.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications