Ind vs SA T20: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಸೂರ್ಯಕುಮಾರ್ ಯಾದವ್
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯನ್ನು ಗೆದ್ದ ಬಳಿಕ, ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲೂ ಸೂರ್ಯಕುಮಾರ್ ಯಾದವ್ ನಾಯಕತ್ವ ವಹಿಸಿಕೊಂಡಿದ್ದಾರೆ. ಮಳೆಯ ಕಾರಣದಿಂದ ಸರಣಿಯ ಮೊದಲ ಟಿ20 ಪಂದ್ಯ ರದ್ದಾದ ಬಳಿಕ ಗೆಬೆರ್ಹಾದಲ್ಲಿ ಎರಡನೇ ಪಂದ್ಯ ನಡೆಯಿತು.
ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಸೂರ್ಯ ಟಿ20 ಕ್ರಿಕೆಟ್ನಲ್ಲಿ 2000 ರನ್ ಗಳಿಸಿದರು. ಸೂರ್ಯಕುಮಾರ್ ಯಾದವ್ ಮೈಲಿಗಲ್ಲು ಸಾಧಿಸಲು ಕೇವಲ 15 ರನ್ಗಳ ಅಗತ್ಯವಿತ್ತು. ವಿರಾಟ್ ಕೊಹ್ಲಿ 56 ಟಿ20 ಪಂದ್ಯಗಳಲ್ಲಿ 2000 ರನ್ ಗಳಿಸಿದ್ದರೆ, ಸೂರ್ಯಕುಮಾರ್ ಯಾದವ್ ಕೂಡ ಅಷ್ಟೇ ಪಂದ್ಯಗಳಲ್ಲಿ 2000 ರನ್ ಗಳಿಸಿದರು.

ಅರ್ಧಶತಕ ಗಳಿಸಿ ಮಿಂಚಿದ ಸೂರ್ಯ
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಆರಂಭಿಕರಾದ ಯಶಸ್ವಿ ಜೈಸ್ವಾಲ್ ಮತ್ತು ಶುಭಮನ್ ಗಿಲ್ ಇಬ್ಬರೂ ಶೂನ್ಯಕ್ಕೆ ಔಟಾದರು. ನಂತರ ಜೊತೆಯಾದ ತಿಲಕ್ ವರ್ಮಾ ಮತ್ತು ಸೂರ್ಯಕುಮಾರ್ ಯಾದವ್ 49 ರನ್ಗಳ ಜೊತೆಯಾಟ ಆಡಿದರು.
ತಿಲಕ್ ವರ್ಮಾ 29 ರನ್ಗಳನ್ನು ಗಳಿಸಿ ಔಟಾದರೆ, ನಾಯಕನಂತೆ ಜವಾಬ್ದಾರಿಯುತ ಆಟವಾಡಿದ ಸೂರ್ಯಕುಮಾರ್ ಯಾದವ್ 36 ಎಸೆತಗಳಲ್ಲಿ 5 ಬೌಂಡರಿ 3 ಸಿಕ್ಸರ್ ಸಹಿತ 56 ರನ್ ಗಳಿಸಿದರು. ರಿಂಕು ಸಿಂಗ್ 39 ಎಸೆತಗಳಲ್ಲಿ ಅಜೇಯ 68 ರನ್ ಗಳಿಸಿದರು, 19.3 ಓವರ್ ಗಳಲ್ಲಿ ಭಾರತ 180 ರನ್ ಗಳಿಸಿದ್ದಾಗ ಮಳೆ ಜೋರಾದ ಬಳಿಕ ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ.
ಸೂರ್ಯ ಹೇಳಿದ್ದೇನು?
ಟಾಸ್ ಬಳಿಕ ಮಾತನಾಡಿದ ನಾಯಕ ಸೂರ್ಯಕುಮಾರ್ ಯಾದವ್, "ಇಲ್ಲಿರುವುದಕ್ಕೆ ತುಂಬಾ ಸಂತೋಷವಾಗಿದೆ. ನಾವು ಏನು ಮಾಡಬೇಕೆಂದು ಗೊಂದಲದಲ್ಲಿದ್ದೆವು, ಆದರೆ ಈಗ ನಾವು ಮೊದಲು ಬ್ಯಾಟ್ ಮಾಡಲು ತುಂಬಾ ಸಂತೋಷವಾಗಿದ್ದೇವೆ. ಈ ಆಟವನ್ನು ಆಡುವ ಎಲ್ಲರಿಗೂ ಇದು ಒಂದು ಅವಕಾಶ. ವಿಶ್ವಕಪ್ಗೆ ಇನ್ನೂ 5-6 ತಿಂಗಳು ಬಾಕಿ ಇದೆ. ಸುಮ್ಮನೆ ಆಟವನ್ನು ಆನಂದಿಸಿ ಎಂಬುದು ತಂಡಕ್ಕೆ ಸಂದೇಶವಾಗಿದೆ" ಎಂದು ಹೇಳಿದ್ದಾರೆ.
ಉಭಯ ತಂಡಗಳ ಆಡುವ ಬಳಗ
ಭಾರತ: ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಶ್ದೀಪ್ ಸಿಂಗ್, ಮುಖೇಶ್ ಕುಮಾರ್.
ದಕ್ಷಿಣ ಆಫ್ರಿಕಾ: ಮ್ಯಾಥ್ಯೂ ಬ್ರೀಟ್ಜ್ಕೆ, ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಆಂಡಿಲ್ ಫೆಹ್ಲುಕ್ವಾಯೊ, ಜೆರಾಲ್ಡ್ ಕೋಟ್ಜಿ, ಲಿಜಾಡ್ ವಿಲಿಯಮ್ಸ್, ತಬ್ರೈಜ್ ಶಮ್ಸಿ.
-
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ












Click it and Unblock the Notifications