Champions Trophy Ind vs NZ: ಪಾಂಡ್ಯ, ಅಯ್ಯರ್, ಅಕ್ಷರ್ ಆಸರೆ; ನ್ಯೂಜಿಲೆಂಡ್ ವಿರುದ್ಧ ಭಾರತ 249 ರನ್ಗಳಿಗೆ ಆಲೌಟ್
ಚಾಂಪಿಯನ್ಸ್ ಟ್ರೋಫಿ 2025ರ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ 249 ರನ್ಗಳಿಗೆ ಆಲೌಟ್ ಆಗಿದೆ. ನ್ಯೂಜಿಲೆಂಡ್ ಶಿಸ್ತಿನ ಬೌಲಿಂಗ್ ದಾಳಿ ಎದುರು ಭಾರತದ ಬ್ಯಾಟರ್ ಗಳು ರನ್ ಗಳಿಸಲು ಪರದಾಡಿದರು. ಎರಡೂ ತಂಡಗಳು ಈಗಾಗಲೇ ಸೆಮಿಫೈನಲ್ ಪ್ರವೇಶಿಸಿದ್ದರು ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿ ಯಾರು ಸೆಮಿಫೈನಲ್ ಪ್ರವೇಶಿಸುತ್ತಾರೆ ಎನ್ನುವುದನ್ನು ಈ ಪಂದ್ಯ ನಿರ್ಣಯಿಸಲಿದೆ.
ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಭಾರತ ಸತತ 13ನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಕೆಟ್ಟ ದಾಖಲೆ ಮುಂದುವರೆಸಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭದಲ್ಲೇ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಶುಭಮನ್ ಗಿಲ್ ಕೇವಲ 2 ರನ್ ಗಳಿಸಿ ಔಟಾದರೆ, ನಾಯಕ ರೋಹಿತ್ ಶರ್ಮಾ 15 ರನ್ ಗಳಿಸಿ ಔಟಾದರು.

ತಮ್ಮ 300ನೇ ಏಕದಿನ ಪಂದ್ಯ ಆಡುತ್ತಿರುವ ವಿರಾಟ್ ಕೊಹ್ಲಿ 11 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಬಳಿಕ ಬಂದ ಶ್ರೇಯಸ್ ಅಯ್ಯರ್ ಮತ್ತು ಅಕ್ಷರ್ ಪಟೇಲ್ ಭಾರತಕ್ಕೆ ಆಸರೆಯಾದರು. ಈ ಜೋಡಿ 4 ನೇ ವಿಕೆಟ್ಗೆ 98 ರನ್ ಕಲೆಹಾಕಿತು. 42 ರನ್ ಗಳಿಸಿ ಅಕ್ಷರ್ ಪಟೇಲ್ ಔಟಾದರು.
ಶ್ರೇಯಸ್ ಅಯ್ಯರ್ ತಮ್ಮ ಅರ್ಧಶತಕ ಗಳಿಸಿ ಮಿಂಚಿದರು. 79 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ಅವರು ಮತ್ತೊಮ್ಮೆ ಶಾರ್ಟ್ ಬಾಲ್ ಆಡಲು ಹೋಗಿ ಔಟಾದರು. ಕೆಎಲ್ ರಾಹುಲ್ 23 ರನ್ ಗಳಿಸಿದರೆ, ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಹಾರ್ದಿಕ್ ಪಾಂಡ್ಯ 45 ಎಸೆತಗಳಲ್ಲಿ 45 ರನ್ ಗಳಿಸಿದರು. ರವೀಂದ್ರ ಜಡೇಜಾ 16 ರನ್ ಗಳಿಸಿದರು.
ನ್ಯೂಜಿಲೆಂಡ್ ಶಿಸ್ತಿನ ಬೌಲಿಂಗ್
ನ್ಯೂಜಿಲೆಂಡ್ ಶಿಸ್ತಿನ ಬೌಲಿಂಗ್ ಮಾಡಿತು, ಮ್ಯಾಟ್ ಹೆನ್ರಿ 8 ಓವರ್ ಗಳಲ್ಲಿ 42 ರನ್ ಬಿಟ್ಟುಕೊಟ್ಟು 5 ವಿಕೆಟ್ ಪಡೆದುಕೊಂಡು ಮಿಂಚಿದರು. ಕೈಲ್ ಜೇಮಿಸನ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ವಿಲಿಯಮ್ ಓರೂರ್ಕ್ ತಲಾ 1 ವಿಕೆಟ್ ಪಡೆದರು.
ಪಿಚ್ ಬ್ಯಾಟಿಂಗ್ ಮಾಡಲು ಕಷ್ಟವಾಗಿದ್ದು ಬೌಲರ್ ಗಳು ಪರಿಣಾಮಕಾರಿಯಾಗಿದ್ದಾರೆ. ಭಾರತ ತಂಡ ಇಂದು ನಾಲ್ಕು ಸ್ಪಿನ್ನರ್ ಗಳೊಂದಿಗೆ ಕಣಕ್ಕಿಳಿದಿದ್ದು ಈ ಮೊತ್ತವನ್ನು ರಕ್ಷಿಸಿಕೊಳ್ಳುವ ವಿಶ್ವಾಸದಲ್ಲಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications