T20 World Cup: ಟಿ20 ವಿಶ್ವಕಪ್ಗೆ ಭಾರತ ತಂಡ ಪ್ರಕಟ; ಕನ್ನಡತಿ ಶ್ರೇಯಾಂಕಾ ಪಾಟೀಲ್ಗೆ ಸ್ಥಾನ
ಅಕ್ಟೋಬರ್ 3ರಿಂದ ಆರಂಭವಾಗಲಿರುವ ಮಹಿಳಾ ಟಿ20 ವಿಶ್ವಕಪ್ಗೆ ಬಿಸಿಸಿಐ ಭಾರತ ತಂಡವನ್ನು ಆಯ್ಕೆ ಮಾಡಿದೆ. ಬಾಂಗ್ಲಾದೇಶದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಪಂದ್ಯಾವಳಿ ಅಲ್ಲಿ ದಂಗೆ ಶುರುವಾದ ಬಳಿಕ, ಯುಎಇಗೆ ಸ್ಥಳಾಂತರ ಮಾಡಿದೆ. ಭಾರತ ಬಲಿಷ್ಠ ತಂಡವನ್ನು ಆಯ್ಕೆ ಮಾಡಿದ್ದು, ಈ ಬಾರಿ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದೆ. ಕನ್ನಡತಿ ಶ್ರೇಯಾಂಕಾ ಪಾಟೀಲ್ ಕೂಡ ಟಿ20 ವಿಶ್ವಕಪ್ನಲ್ಲಿ ಮಿಂಚಲು ಸಜ್ಜಾಗಿದ್ದಾರೆ.
ಹರ್ಮನ್ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದಾರೆ. ಸ್ಮೃತಿ ಮಂದಾನಗೆ ತಂಡದ ಉಪನಾಯಕಿ ಪಟ್ಟ ನೀಡಲಾಗಿದೆ. ಆರ್ ಸಿಬಿ ಸ್ಟಾರ್ ಆಟಗಾರ್ತಿ, ಕರ್ನಾಟಕದ ಶ್ರೇಯಾಂಕಾ ಪಾಟೀಲ್ ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ, ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಅವರು ತಂಡದಲ್ಲಿ ಅವಕಾಶ ಪಡೆಯಲು ಪಂದ್ಯಾವಳಿಗೆ ಮುನ್ನ ಸಂಪೂರ್ಣವಾಗಿ ಫಿಟ್ ಆಗಬೇಕಿದೆ.

ಟಿ20 ವಿಶ್ವಕಪ್ಗೆ ಭಾರತ ತಂಡ
ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯಾದವ್, ಶ್ರೇಯಾಂಕಾ ಪಾಟೀಲ್, ಸಜನಾ ಸಜೀವನ್.
ತಂಡದ ಜೊತೆ ಪ್ರಯಾಣ ಮಾಡಲಿರುವ ಮೀಸಲು ಆಟಗಾರರು: ಉಮಾ ಚೆಟ್ರಿ, ತನನುಜಾ ತನುಜಾ ಕನ್ವರ್, ಸೈಮಾ ಠಾಕೋರ್.
ಪ್ರಯಾಣಿಸದ ಮೀಸಲು ಆಟಗಾರರು: ರಾಘವಿ ಬಿಸ್ಟ್, ಪ್ರಿಯಾ ಮಿಶ್ರಾ.
ಭಾರತ-ಪಾಕಿಸ್ತಾನ ಪಂದ್ಯ ಯಾವಾಗ?
ಐಸಿಸಿ ಪಂದ್ಯಾವಳಿಗಳು ಎಂದ ಮೇಲೆ ಅಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಮುಖಾಮುಖಿ ಭಾರಿ ಕುತೂಹಲ ಕೆರಳಿಸುತ್ತದೆ. ಟಿ20 ವಿಶ್ವಕಪ್ನಲ್ಲಿ ಕೂಡ ಭಾರತ-ಪಾಕಿಸ್ತಾನ ಎ ಗುಂಪಿನಲ್ಲಿ ಆಡುತ್ತಿದ್ದು, ಅಕ್ಟೋಬರ್ 6ರಂದು ಮುಖಾಮುಖಿಯಾಗಲಿವೆ. ದುಬೈನ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಸ್ಥಳೀಯ ಕಾಲಮಾನ 3.30ಕ್ಕೆ ಆರಂಭವಾಗಲಿದೆ.
ಭಾರತದ ಪಂದ್ಯಗಳ ವಿವರ
ಅಕ್ಟೋಬರ್ 3ರಿಂದ ಟಿ20 ವಿಶ್ವಕಪ್ ಪಂದ್ಯಾವಳಿ ಆರಂಭವಾಗಲಿದ್ದು, ಅಕ್ಟೋಬರ್ 4ರಂದು ಭಾರತ ತನ್ನ ಮೊದಲ ಪಂದ್ಯ ಆಡಲಿದೆ. ಭಾರತ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 6ರಂದು ಭಾರತ ಪಾಕಿಸ್ತಾನ ಮುಖಾಮುಖಿಯಾಗಲಿವೆ. ಅಕ್ಟೋಬರ್ 9ರಂದು ಭಾರತ ಮತ್ತು ಶ್ರೀಲಂಕಾ ಸೆಣೆಸಲಿವೆ. ಅಕ್ಟೋಬರ್ 13ರಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಪಂದ್ಯ ನಡೆಯಲಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications