India vs Bangladesh: ಬಾಂಗ್ಲಾ ಮಣಿಸಿದ ಭಾರತ; ಸೆಮಿಫೈನಲ್ ಸ್ಥಾನ ಬಹುತೇಕ ಖಚಿತ
ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ಭಾರತ ಬಾಂಗ್ಲಾದೇಶದ ವಿರುದ್ಧ 50 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ.
ಬಾಂಗ್ಲಾದೇಶವನ್ನು ಮಣಿಸುವ ಮೂಲಕ ಭಾರತದ ಸೆಮಿಫೈನಲ್ ಸ್ಥಾನ ಬಹುತೇಕ ಖಚಿತವಾಗಿದೆ. ಭಾರತ ಸೂಪರ್ 8 ಹಂತದ ತನ್ನ ಕೊನೆಯ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ.

ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್ಗಳ ಬೃಹತ್ ಮೊತ್ತ ಕಲೆಹಾಕಿದರು.
ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಆರಂಭ ಒದಿಗಿಸಿದರು. 3.4 ಓವರ್ ಗಳಲ್ಲಿ 39 ರನ್ ಗಳಿಸಿದ್ದಾಗ ಭಾರತ ರೋಹಿತ್ ಶರ್ಮಾ (23 ರನ್) ಅವರ ವಿಕೆಟ್ ಕಳೆದುಕೊಂಡಿತು. ವಿರಾಟ್ ಕೊಹ್ಲಿ 28 ಎಸೆತಗಳಲ್ಲಿ 37 ರನ್ ಗಳಿಸಿ ಔಟಾದರು.
ರಿಷಬ್ ಪಂತ್ ಕೂಡ 24 ಎಸೆತಗಳಲ್ಲಿ 36 ರನ್ ಗಳಿಸಿದರು. ಸೂರ್ಯಕುಮಾರ್ ಯಾದವ್ 2 ಎಸೆತಗಳಲ್ಲಿ 6 ರನ್ ಗಳಿಸಿದರು. ಶಿವಂ ದುಬೆ 24 ಎಸೆತಗಳಲ್ಲಿ 34 ರನ್ ಗಳಿಸಿದರೆ, ಹಾರ್ದಿಕ್ ಪಾಂಡ್ಯ 27 ಎಸೆತಗಳಲ್ಲಿ ಅಜೇಯ 50 ರನ್ ಗಳಿಸಿ ಮಿಂಚಿದರು.
ಭಾರತದ ಬೌಲಿಂಗ್ ದಾಳಿಗೆ ಬೆಚ್ಚಿದ ಬಾಂಗ್ಲಾ
197 ರನ್ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಬಾಂಗ್ಲಾದೇಶ ಯಾವ ಹಂತದಲ್ಲೂ ಪೈಪೋಟಿ ಕೊಡಲೇ ಇಲ್ಲ. ಲಿಟ್ಟನ್ ದಾಸ್ 13 ರನ್, ತಂಜಿದ್ ಹಸನ್ 29 ರನ್, ನಜ್ಮುಲ್ ಶಾಂಟೋ 40 ರನ್ ಗಳಿಸಿದರು. ಟೋವಿದ್ ಹೃದೋಯ್ 4 ರನ್, ಝಾಕೆರ್ ಅಲಿ 1 ರನ್, ಮಹಮ್ಮುದಲ್ಲಾ 13 ರನ್, ಶಕೀಬ್ ಅಲ್ ಹಸನ್ 11 ರನ್ ಗಳಿಸಿ ನಿರಾಸೆ ಮೂಡಿಸಿದರು.
ಅರ್ಷದೀಪ್ ಸಿಂಗ್ ಮತ್ತು ಜಸ್ಪ್ರೀತ್ ಬುಮ್ರಾ ತಲಾ ಎರಡು ವಿಕೆಟ್ ಪಡೆದರು. ಕುಲದೀಪ್ ಯಾದವ್ ಇಂದು ಮೋಡಿ ಮಾಡಿದರು. 4 ಓವರ್ ಗಳಲ್ಲಿ ಕೇವಲ 19 ರನ್ ಕೊಟ್ಟ ಅವರು ಪ್ರಮುಖ ಮೂರು ವಿಕೆಟ್ ಪಡೆದು ಮಿಂಚಿದರು. ಹಾರ್ದಿಕ್ ಪಾಂಡ್ಯ ಒಂದು ವಿಕೆಟ್ ಪಡೆದರು.
ಅಂತಿಮವಾಗಿ ಬಾಂಗ್ಲಾದೇಶ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 146 ರನ್ ಗಳಿಸುವ ಮೂಲಕ 50 ರನ್ಗಳಿಂದ ಸೋಲೊಪ್ಪಿಕೊಂಡಿತು.
-
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications