ನಮ್ಮ ವಾಯುನೆಲೆಗಳ ಮೇಲೆ ಭಾರತ ಬ್ರಹ್ಮೋಸ್ ದಾಳಿ ನಡೆಸಿದೆ; ಕೊನೆಗೂ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ
ಮೇ 9-10ರ ಮಧ್ಯರಾತ್ರಿ ಭಾರತ ರಾವಲ್ಪಿಂಡಿಯ ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಸೇನಾ ನೆಲೆಗಳ ಮೇಲೆ ಬ್ರಹ್ಮೋಸ್ ಕ್ಷಿಪಣಿಗಳಿಂದ ದಾಳಿ ಮಾಡಿದ್ದು ತಮ್ಮ ಸೇನೆಯು ಅನಿರೀಕ್ಷಿತವಾಗಿ ಸಿಕ್ಕಿಹಾಕಿಕೊಂಡಿತು ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಕೊನೆಗೂ ಒಪ್ಪಿಕೊಂಡಿದ್ದಾರೆ.
ಪಾಕಿಸ್ತಾನದ ಪರವಾಗಿ ನಿಂತ ಕೆಲವೇ ರಾಷ್ಟ್ರಗಳಲ್ಲಿ ಒಂದಾದ ಅಜೆರ್ಬೈಜಾನ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಷರೀಫ್, ಅಸಿಮ್ ಮುನೀರ್ ನೇತೃತ್ವದ ಸೇನೆಯು ಮೇ 10 ರಂದು ಬೆಳಗಿನ ಪ್ರಾರ್ಥನೆಯ ನಂತರ ಭಾರತದ ಮೇಲೆ ದಾಳಿ ಮಾಡಲು ಯೋಜಿಸಿತ್ತು ಎಂದು ಹೇಳಿದರು.

ಬೆಳಗಿನ ಜಾವಕ್ಕೂ ಮುಂಚೆಯೇ, ಪಾಕಿಸ್ತಾನದ ವಿವಿಧ ಪ್ರಾಂತ್ಯಗಳ ಮೇಲೆ ದೀರ್ಘ-ಶ್ರೇಣಿಯ ಸೂಪರ್ಸಾನಿಕ್ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಗಳ ಮಳೆ ಸುರಿಯಿತು ಎಂದು ಪ್ರಧಾನಿ ಹೇಳಿದರು. ದಾಳಿಯ ಬಗ್ಗೆ ನಮಗೆ ಮಾಹಿತಿ ನೀಡಲಾಗಿತ್ತು ಎಂದು ಷರೀಫ್ ಹೇಳಿದ್ದಾರೆ. ಅಸಿಮ್ ಮುನೀರ್ ಅವರಿಗೆ ಈಗ ಫೀಲ್ಡ್ ಮಾರ್ಷಲ್ ಹುದ್ದೆಗೆ ಬಡ್ತಿ ನೀಡಲಾಗಿದೆ.
ದಾಳಿಗೆ ಮುನ್ನವೇ ಪ್ರತಿದಾಳಿ
ಮೇ 9-10ರ ರಾತ್ರಿ, ನಾವು ಭಾರತದ ಆಕ್ರಮಣಕ್ಕೆ ಕ್ರಮಬದ್ಧವಾಗಿ ಪ್ರತಿಕ್ರಿಯಿಸಲು ನಿರ್ಧರಿಸಿದ್ದೆವು. ಫಜ್ರ್ ಪ್ರಾರ್ಥನೆಯ ನಂತರ ಬೆಳಿಗ್ಗೆ 4.30 ಕ್ಕೆ ಪಾಠ ಕಲಿಸಲು ನಮ್ಮ ಸಶಸ್ತ್ರ ಪಡೆಗಳು ಸಿದ್ಧವಾಗಿದ್ದವು. ಆದರೆ ಸಮಯ ಬರುವ ಮೊದಲೇ, ಭಾರತ ಮತ್ತೊಮ್ಮೆ ಬ್ರಹ್ಮೋಸ್ ಬಳಸಿ ಕ್ಷಿಪಣಿ ದಾಳಿ ನಡೆಸಿತು, ರಾವಲ್ಪಿಂಡಿಯ ವಿಮಾನ ನಿಲ್ದಾಣ ಸೇರಿದಂತೆ ಪಾಕಿಸ್ತಾನದ ವಿವಿಧ ಪ್ರಾಂತ್ಯಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ಮಾಡಿತ್ತು ಎಂದು ಶರೀಫ್ ಲಾಚಿನ್ನಲ್ಲಿ ಮಾಡಿದ ಭಾಷಣದಲ್ಲಿ ಹೇಳಿದರು.
ಅಸಿಮ್ ಮುನೀರ್ ಅವರ ಮುಂದೆಯೇ ಪಾಕಿಸ್ತಾನದ ಪ್ರಧಾನಿ ಭಾರತದ ಕ್ಷಿಪಣಿ ದಾಳಿಯನ್ನು ಒಪ್ಪಿಕೊಂಡಿದ್ದರು. ಪಾಕಿಸ್ತಾನ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ನಡೆಸಿದ್ದಕ್ಕೆ ಪ್ರತಿಕ್ರಿಯೆಯಾಗಿ ಭಾರತ ಗುರಿಯಾಗಿಸಿಕೊಂಡ 11 ಮಿಲಿಟರಿ ತಾಣಗಳಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯೂ ಸೇರಿತ್ತು.
ರಾವಲ್ಪಿಂಡಿಯಲ್ಲಿರುವ ಪಾಕಿಸ್ತಾನ ಸೇನಾ ಪ್ರಧಾನ ಕಚೇರಿಯಿಂದ ಸ್ವಲ್ಪ ದೂರದಲ್ಲಿರುವ ವಾಯುನೆಲೆಯು ಲಾಕ್ಹೀಡ್ ಸಿ-130 ಹರ್ಕ್ಯುಲಸ್ ಮತ್ತು ಇಲ್ಯುಶಿನ್ ಇಲ್-78 ಇಂಧನ ತುಂಬಿಸುವ ವಿಮಾನಗಳಂತಹ ಉನ್ನತ ಶ್ರೇಣಿಯ ಮಿಲಿಟರಿ ವಿಮಾನಗಳನ್ನು ಹೊಂದಿದೆ. ಎರಡು ಮಿಲಿಟರಿ ಸಾರಿಗೆ ವಾಹನಗಳು ಹಾನಿಯಾಗಿರುವುದನ್ನು ಉಪಗ್ರಹ ಚಿತ್ರಗಳು ತೋರಿಸಿವೆ.
ನೂರ್ ಖಾನ್ ಹೊರತುಪಡಿಸಿ, ಭಾರತವು ರಫಿಕಿ, ಮುರಿಯ್, ರಹೀಮ್ ಯಾರ್ ಖಾನ್, ಸುಕ್ಕೂರ್ ಮತ್ತು ಚುನಿಯನ್ನಲ್ಲಿರುವ ಪಾಕಿಸ್ತಾನಿ ಸೇನಾ ನೆಲೆಗಳ ಮೇಲೆ ದಾಳಿ ಮಾಡಿತು. ಸ್ಕಾರ್ಡು, ಭೋಲಾರಿ, ಜಕೋಬಾಬಾದ್ ಮತ್ತು ಸರ್ಗೋಧಾದಲ್ಲಿನ ವಾಯು ನೆಲೆಗಳಿಗೂ ಕೂಡ ವ್ಯಾಪಕ ಹಾನಿ ಮಾಡಿದೆ.
-
Pakistan Crisis: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಪಾಕಿಸ್ತಾನ: ಪೆಟ್ರೋಲ್ - ಡೀಸೆಲ್ ಬೆಲೆ ಶೇ.20ರಷ್ಟು ಹೆಚ್ಚಳ, ಕಾರಣವೇನು -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ












Click it and Unblock the Notifications