Ind vs Afg: ಮೊದಲ ಟಿ20 ಪಂದ್ಯಕ್ಕೆ ಮುನ್ನ ಭಾರತಕ್ಕೆ ಶಾಕ್: ಕೊಹ್ಲಿ ಆಡಲ್ಲ ಎಂದ ದ್ರಾವಿಡ್
ಅಫ್ಘಾನಿಸ್ತಾನದ ವಿರುದ್ಧದ ಟಿ20 ಸರಣಿ ಭಾರತಕ್ಕೆ ವಿಶೇಷವಾಗಿದೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಟಿ20 ಕ್ರಿಕೆಟ್ಗೆ ಮರಳಲು ಸಜ್ಜಾಗಿದ್ದಾರೆ. ಜೂನ್ 1ರಿಂದ ಟಿ20 ವಿಶ್ವಕಪ್ ಆರಂಭವಾಗುವ ಕಾರಣ ಇವರ ವಾಪಸಾತಿ ಮುಖ್ಯವಾಗಿದೆ.
ಟಿ20 ಸರಣಿ ಆರಂಭಕ್ಕೆ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿರುವ ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಗುರುವಾರ ಅಫ್ಘಾನಿಸ್ತಾನ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಡುವುದಿಲ್ಲ ಎಂದು ಬಹಿರಂಗಪಡಿಸಿದರು.

ವಿರಾಟ್ ಮತ್ತು ರೋಹಿತ್ ಕೊನೆಯದಾಗಿ 2022 ರ ಟಿ 20 ವಿಶ್ವಕಪ್ನಲ್ಲಿ ಟಿ20 ಐ ಪಂದ್ಯವನ್ನು ಆಡಿದ್ದರು, ಅಲ್ಲಿ ಭಾರತ ಸೆಮಿಫೈನಲ್ನಲ್ಲಿ ಸೋತಿತು. ಅಂದಿನಿಂದ ಈ ಇಬ್ಬರೂ ಆಟಗಾರರು ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ಗೆ ಸೀಮಿತವಾಗಿದ್ದಾರೆ.
2024 ರ ಟಿ 20 ವಿಶ್ವಕಪ್ಗೆ ಮೊದಲು ಭಾರತ ಆಡಲಿರುವ ಕೊನೆಯ ಟಿ20 ಐ ಸರಣಿಗೆ, ಭಾರತೀಯ ಕ್ರಿಕೆಟ್ ತಂಡದ ಮ್ಯಾನೇಜ್ಮೆಂಟ್ ಇಬ್ಬರನ್ನೂ ಕರೆತಂದಿದೆ, ಆದರೆ ಮೊದಲ ಪಂದ್ಯದಲ್ಲಿ ಕೊಹ್ಲಿ ಹೊರಗುಳಿಯಲಿದ್ದಾರೆ.
ಕೊಹ್ಲಿ ಹೊರಗುಳಿಯಲು ಕಾರಣವೇನು?
ಕ್ರಿಕ್ಬಜ್ನ ವರದಿಯ ಮಾಡಿರುವ ಪ್ರಕಾರ, ಬಿಸಿಸಿಐ ಆಯ್ಕೆಗಾರರು ವಿರಾಟ್ ಕೊಹ್ಲಿ ಅವರ ನಿರೀಕ್ಷೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಟಿ20 ಕ್ರಿಕೆಟ್ನಲ್ಲಿ ಅವರ ಭವಿಷ್ಯದ ಬಗ್ಗೆ ಈ ಚರ್ಚೆ ನಡೆದಿದೆ. ವಾಸ್ತವವಾಗಿ, ಬಿಸಿಸಿಐ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಕೊಹ್ಲಿ ಮತ್ತು ರೋಹಿತ್ರನ್ನು ಕೇಪ್ ಟೌನ್ನಲ್ಲಿ ಭೇಟಿಯಾದರು ಎಂದು ವರದಿ ತಿಳಿಸಿದೆ.
ವೈಯಕ್ತಿಕ ಕಾರಣಗಳಿಂದಾಗಿ ವಿರಾಟ್ ಕೊಹ್ಲಿ ಮೊದಲ ಟಿ20ಐನಿಂದ ಹೊರಗುಳಿಯಲಿದ್ದಾರೆ ಮತ್ತು ಎರಡನೇ ಮತ್ತು ಮೂರನೇ ಟಿ20ಐಗಳಿಗೆ ಲಭ್ಯರಾಗಲಿದ್ದಾರೆ ಎಂದು ರಾಹುಲ್ ದ್ರಾವಿಡ್ ಬುಧವಾರ ಬಹಿರಂಗಪಡಿಸಿದ್ದಾರೆ. ಯಶಸ್ವಿ ಜೈಸ್ವಾಲ್ ಮತ್ತು ರೋಹಿತ್ ಶರ್ಮಾ ಬ್ಯಾಟಿಂಗ್ ಮೊದಲ ಟಿ20 ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.
ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಅವರೊಂದಿಗೆ ಇದೇ ರೀತಿಯ ಚರ್ಚೆ ನಡೆದಿದೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ವರದಿ ತಿಳಿಸಿದೆ. ವಿರಾಟ್ ಕೊಹ್ಲಿ 115 ಟಿ20 ಪಂದ್ಯಗಳಲ್ಲಿ 52.73 ಸರಾಸರಿಯಲ್ಲಿ 4008 ರನ್ ಗಳಿಸಿದ್ದಾರೆ. ಅವರ ಸ್ಟ್ರೈಕ್ ರೇಟ್ 137.96 ಆಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ 1ನೇ ಟೆಸ್ಟ್ನಲ್ಲಿ ಭಾರತ ಹೀನಾಯವಾಗಿ ಸೋತ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಏಳು ಕ್ಯಾಲೆಂಡರ್ ವರ್ಷಗಳಲ್ಲಿ 2000 ರನ್ ಗಳಿಸಿದ ಮೊದಲ ಬ್ಯಾಟರ್ ಎನಿಸಿಕೊಂಡ ದಾಖಲೆ ಮಾಡಿದ್ದಾರೆ. ವಿರಾಟ್ ಕೊಹ್ಲಿ ಈ ಮೊದಲು 2012 (2186 ರನ್), 2014 (2286 ರನ್), 2016 (2595 ರನ್), 2017 (2818 ರನ್), 2018 (2735 ರನ್) ಮತ್ತು 2019 (2455 ರನ್) ನಲ್ಲಿ ಈ ಸಾಧನೆ ಮಾಡಿದ್ದರು.
-
ಭಾರತದ ಸನಿಹವೇ ಮುಳುಗಿತು ಇರಾನ್ ಯುದ್ಧನೌಕೆ: ವಿಶಾಖಪಟ್ಟಣದಿಂದ ಹಿಂದಿರುಗುತ್ತಿದ್ದ ಹಡಗಿಗೆ ಅಮೆರಿಕ ಬಾಂಬ್ -
ಐಪಿಎಲ್ ನಂತರ ಭಾರತ-ಅಫ್ಘಾನಿಸ್ತಾನ್ ಸರಣಿ ಪಂದ್ಯಗಳ ಹಬ್ಬ: ವೇಳಾಪಟ್ಟಿ ಪ್ರಕಟ -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
Sourav Ganguly: ಟಿ20 ವಿಶ್ವಕಪ್ 2026; ಸಂಜು ಆಟಕ್ಕೆ ಮನಸೋತು ಬಿಸಿಸಿಐಗೆ ಬಿಸಿ ಮುಟ್ಟಿಸಿದ 'ದಾದಾ' ಸೌರವ್ ಗಂಗೂಲಿ -
Today Horoscope Mar 3: ಹುಣ್ಣಿಮೆಯ ದಿನ ಚಂದ್ರಗ್ರಹಣ, ಈ ರಾಶಿಯವರ ಆರೋಗ್ಯದಲ್ಲಿ ಏರುಪೇರು -
ಬೆಂಗಳೂರು ಆಡಳಿತ ಬಿಬಿಎಂಪಿಯಿಂದ ಜಿಬಿಎಗೆ: 5 ಪಾಲಿಕೆಗಳ ರಚನೆ, ಹೊಸ ಪ್ರದೇಶಗಳ ಸೇರ್ಪಡೆಯಿಂದ ರಿಯಲ್ ಎಸ್ಟೇಟ್ಗೆ ಬಂಪರ್












Click it and Unblock the Notifications