Ind vs Afg: ಬುಮ್ರಾ, ಅರ್ಷದೀಪ್ ಮಾರಕ ಬೌಲಿಂಗ್; ಭಾರತಕ್ಕೆ 47 ರನ್ಗಳ ಭರ್ಜರಿ ಜಯ
ಟಿ20 ವಿಶ್ವಕಪ್ನ ಸೂಪರ್ 8 ಪಂದ್ಯದಲ್ಲಿ ಭಾರತ ಅಫ್ಘಾನಿಸ್ತಾನದ ವಿರುದ್ಧ 47 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. 182 ರನ್ಗಳ ಗುರಿ ಬೆನ್ನತ್ತಿದ ಅಫ್ಘಾನಿಸ್ತಾನ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿ 134 ರನ್ಗಳಿಗೆ ಆಲೌಟ್ ಆದರು.
ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ನಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಸೂರ್ಯಕುಮಾರ್ ಅವರ ಸ್ಫೋಟಕ ಅರ್ಧಶತಕದ ನೆರವಿನೊಂದಿಗೆ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 181 ರನ್ ಗಳಿಸಿತು.

ಈ ಸವಾಲಿನ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ ಭಾರತದ ಬಿಗಿ ಬೌಲಿಂಗ್ ದಾಳಿ ಎದುರು ರನ್ ಗಳಿಸಲು ಪರದಾಡಿತು. ಜಸ್ಪ್ರೀತ್ ಬುಮ್ರಾ ಮಾರಕ ಬೌಲಿಂಗ್ ಎದುರು ಅಫ್ಘಾನಿಸ್ತಾನ ಮಂಡಿಯೂರಿತು. ಬುಮ್ರಾ 4 ಓವರ್ ಗಳಲ್ಲಿ ಕೇವಲ 7 ರನ್ ನೀಡಿ 3 ವಿಕೆಟ್ ಪಡೆದರು.
ಅರ್ಷದೀಪ್ ಸಿಂಗ್ ಕುಡ 3 ವಿಕೆಟ್ ಪಡೆದರೆ, ಕುಲದೀಪ್ ಯಾದವ್ 2 ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ತಲಾ ಒಂದು ವಿಕೆಟ್ ಪಡೆದರು. ಅಂತಿಮವಾಗಿ ಅಫ್ಘಾನಿಸ್ತಾನ 20 ಓವರ್ ಗಳಲ್ಲಿ 134 ರನ್ಗಳಿಗೆ ಆಲೌಟ್ ಆಯಿತು.
ಸೂರ್ಯಕುಮಾರ್ ಆಸರೆ
ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭದಲ್ಲೇ ರೋಹಿತ್ ಶರ್ಮಾ (8 ರನ್) ಅವರ ವಿಕೆಟ್ ಕಳೆದುಕೊಂಡಿತು. ರಿಷಬ್ ಪಂತ್ ಮತ್ತು ವಿರಾಟ್ ಕೊಹ್ಲಿ ಎರಡನೇ ವಿಕೆಟ್ಗೆ 43 ರನ್ ಗಳಿಸುವ ಮೂಲಕ ಆಸರೆಯಾದರು.
ಪಂತ್ 20 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 24 ರನ್ ಗಳಿಸಿದರು. ಶಿವಂ ದುಬೆ ಕೂಡ 10 ರನ್ ಗಳಿಸಿದರು. ಸೂರ್ಯಕುಮಾರ್ ಯಾದವ್ ಅಫ್ಘಾನಿಸ್ತಾನ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಿದರು. 28 ಎಸೆತಗಳಲ್ಲಿ 53 ರನ್ ಗಳಿಸಿ ಭಾರತ ಸವಾಲಿನ ಮೊತ್ತ ಕಲೆಹಾಕಲು ಕಾರಣವಾದರು. ಹಾರ್ದಿಕ್ ಪಾಂಡ್ಯ 32 ರನ್ ಗಳಿಸಿದರು. ಜಡೇಜಾ 7 ರನ್, ಅಕ್ಷರ್ ಪಟೇಲ್ 12 ರನ್ ಗಳಿಸಿದರು.
ಈ ಗೆಲುವಿನೊಂದಿಗೆ ಭಾರತ ಸೂಪರ್ 8ರ ಮೊದಲ ಗುಂಪಿನ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಭಾರತ ಮುಂದಿನ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ಜೂನ್ 22ರಂದು ಈ ಪಂದ್ಯ ನಡೆಯಲಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications