T20 World Cup: ಆಸ್ಟ್ರೇಲಿಯಾ ಮಟ್ಟ ಹಾಕಿದ ಭಾರತ; ಸೆಮಿಫೈನಲ್ನಲ್ಲಿ ಎದುರಾಳಿ ಯಾರು?
ಸೆಂಟ್ ಲೂಸಿಯಾದ ಡರೇನ್ ಸಾಮಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 24 ರನ್ಗಳ ಭರ್ಜರಿ ಗೆಲುವು ಸಾಧಿಸಿದ್ದು, ಸೆಮಿಫೈನಲ್ ಪ್ರವೇಶಿಸಿದೆ. ಸೆಮಿಫೈನಲ್ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬೌಲಿಂಗ್ ಮಾಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 205 ರನ್ ಕಲೆಹಾಕಿತು. ಈ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 181 ರನ್ ಗಳಿಸುವ ಮೂಲಕ ಸೋಲೊಪ್ಪಿಕೊಂಡಿತು.

ನಾಯಕ ರೋಹಿತ್ ಶರ್ಮಾ 41 ಎಸೆತಗಳಲ್ಲಿ 7 ಬೌಂಡರಿ ಮತ್ತು 8 ಸಿಕ್ಸರ್ ಸಹಿತ 92 ರನ್ ಗಳಿಸುವ ಮೂಲಕ ಭಾರತ ಬೃಹತ್ ಮೊತ್ತ ಕಲೆಹಾಕಲು ಕಾರಣವಾದರು. ರಿಷಬ್ ಪಂತ್ 15 ರನ್, ಸೂರ್ಯ ಕುಮಾರ್ 31 ರನ್, ಶಿವಂ ದುಬೆ 28 ರನ್ ಗಳಿಸಿದರೆ. ಪಾಂಡ್ಯ ಅಜೇಯ 27 ರನ್ ಮತ್ತು ಜಡೇಜಾ ಅಜೇಯ 9 ರನ್ ಗಳಿಸಿದರು.
ಆತಂಕ ಮೂಡಿಸಿದ್ದ ಹೆಡ್
206 ರನ್ಗಳ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾಗೆ ಅರ್ಷದೀಪ್ ಸಿಂಗ್ ಮೊದಲ ಓವರ್ ನಲ್ಲೇ ಆಘಾತ ನೀಡಿದರು. 6 ರನ್ ಗಳಿಸಿದ್ದ ಡೇವಿಡ್ ವಾರ್ನರ್ ಅವರನ್ನು ಔಟ್ ಮಾಡಿದರು. ಬಳಿಕ ನಾಯಕ ಮಿಚೆಲ್ ಮಾರ್ಷ್ ಮತ್ತು ಟ್ರಾವಿಸ್ ಹೆಡ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು.
28 ಎಸೆತಗಳಲ್ಲಿ 37 ರನ್ ಗಳಿಸಿದ್ದ ಮಾರ್ಷ್ ಕುಲದೀಪ್ ಬೌಲಿಂಗ್ನಲ್ಲಿ ಅಕ್ಷರ್ ಪಟೇಲ್ ಹಿಡಿದ ಅದ್ಭುತ ಬೌಲಿಂಗ್ಗೆ ಬಲಿಯಾದರು. ಆದರೆ ಹೆಡ್ ಒಂದು ಕಡೆ ಬೌಂಡರಿ, ಸಿಕ್ಸರ್ ಬಾರಿಸುವ ಮೂಲಕ ಭಾರತದ ಗೆಲುವು ಕಸಿಯುವ ಆತಂಕ ಮೂಡಿಸಿದ್ದರು.
43 ಎಸೆತಗಳಲ್ಲಿ 76 ರನ್ ಗಳಿಸಿದ್ದ ಹೆಡ್ರನ್ನು ಬುಮ್ರಾ ಔಟ್ ಮಾಡುವ ಮೂಲಕ ಭಾರತ ಪಂದ್ಯದ ಮೇಲೆ ಬಿಗಿಹಿಡಿತ ಸಾಧಿಸಿತು. ಹೆಡ್ ಔಟಾಗುತ್ತಿದ್ದಂತೆ ಬಂದ ಆಟಗಾರರು ಹೆಚ್ಚು ಹೊತ್ತು ಕ್ರೀಸ್ನಲ್ಲಿ ನಿಲ್ಲಲಿಲ್ಲ. ಅಂತಿಮವಾಗಿ 20 ಓವರ್ ಗಳಲ್ಲಿ 181 ರನ್ ಮಾತ್ರ ಗಳಿಸಿದ ಆಸ್ಟ್ರೇಲಿಯಾ ಸೋಲೊಪ್ಪಿಕೊಂಡಿತು.
ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ಗ್ರೂಪ್ 2ರಿಂದ ಸೆಮಿಫೈನಲ್ಗೆ ಅರ್ಹತೆ ಪಡೆದಿದ್ದು, ಗ್ರೂಪ್ 1ರಲ್ಲಿ ಭಾರತ ಸೆಮಿಫೈನಲ್ ತಲುಪಿದೆ. ಇನ್ನೊಂದು ಸ್ಥಾನಕ್ಕೆ ಈಗ ಆಸ್ಟ್ರೇಲಿಯಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ನಡುವೆ ಪೈಪೋಟಿ ನಡೆಯಲಿದೆ.
ಸೂಪರ್ 8 ಹಂತದ ಕೊನೆಯ ಪಂದ್ಯದಲ್ಲಿ ಅಫ್ಘಾನಿಸ್ತಾನ ಏನಾದರೂ ಬಾಂಗ್ಲಾದೇಶವನ್ನು ಸೋಲಿಸಿದರೆ, ಆಸ್ಟ್ರೇಲಿಯಾ ವಿಶ್ವಕಪ್ನಿಂದ ಹೊರಬೀಳಲಿದ್ದು, ಭಾರತ ಮತ್ತು ಅಫ್ಘಾನಿಸ್ತಾನ ಸೆಮಿಫೈನಲ್ ಪ್ರವೇಶಿಸಲಿವೆ.
ಬಾಂಗ್ಲಾದೇಶ ಏನಾದರೂ ದೊಡ್ಡ ಅಂತರದಲ್ಲಿ ಅಫ್ಘಾನಿಸ್ತಾನವನ್ನು ಮಣಿಸಿದರೆ, ಬಾಂಗ್ಲಾ ಕೂಡ ಸೆಮಿಫೈನಲ್ಗೆ ಪ್ರವೇಶಿಸುವ ಅವಕಾಶ ಇದೆ. ಕಡಿಮೆ ಅಂತರದಲ್ಲಿ ಏನಾದರೂ ಬಾಂಗ್ಲಾ ಸೋತರೆ ಆಗ ಆಸ್ಟ್ರೇಲಿಯಾಗೆ ರನ್ರೇಟ್ ಆಧಾರದಲ್ಲಿ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಸಿಗುತ್ತದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications