India vs Sri Lanka: ಸೂರ್ಯ-ರಿಂಕು ಬೌಲಿಂಗ್ ಮ್ಯಾಜಿಕ್; ಸೂಪರ್ ಓವರ್ನಲ್ಲಿ ಗೆದ್ದ ಭಾರತ
ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣ ರೋಚಕ ಪಂದ್ಯಕ್ಕೆ ಸಾಕ್ಷಿಯಾಗಿದೆ. ಭಾರತ ಶ್ರೀಲಂಕಾ ವಿರುದ್ಧ ಸೂಪರ್ ಓವರ್ ನಲ್ಲಿ ಗೆಲುವು ಸಾಧಿಸುವ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.
ಟಾಸ್ ಗೆದ್ದ ಶ್ರೀಲಂಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 137 ರನ್ ಕಲೆಹಾಕಿತು. ಶುಭಮನ್ ಗಿಲ್ 39, ರಿಯಾನ್ ಪರಾಗ್ 26 ರನ್, ವಾಷಿಂಗ್ಟನ್ ಸುಂದರ್ 25 ರನ್ ಗಳಿಸಿದರು.

138 ರನ್ಗಳ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಶ್ರೀಲಂಕಾ ಉತ್ತಮ ಆರಂಭವನ್ನೇ ಪಡೆಯಿತು. ಪಾಥುಮ್ ನಿಸಂಕ ಮತ್ತು ಕುಶಾಲ್ ಮೆಂಡಿಸ್ ಮೊದಲ ವಿಕೆಟ್ಗೆ 58 ರನ್ ಕಲೆಹಾಕಿದರು. ಬಳಿಕ ಕುಶಾಲ್ ಮೆಂಡಿಸ್ ಮತ್ತು ಕುಶಾಲ್ ಪೆರೇರಾ ಜೋಡಿ ಎರಡನೇ ವಿಕೆಟ್ಗೆ 52 ರನ್ ಕಲೆಹಾಕಿದರು. 15 ಓವರ್ ಗಳಲ್ಲಿ110 ರನ್ಗಳಿಸಿದ್ದ ಶ್ರೀಲಂಕಾ ಸುಲಭ ಗೆಲುವು ಸಾಧಿಸುವ ನಿರೀಕ್ಷೆಯಲ್ಲಿತ್ತು.
ಆದರೆ ವಾಷಿಂಗ್ಟನ್ ಸುಂದರ್ ನಾಯಕ ಚರಿತ್ ಅಸಲಂಕ ವಿಕೆಟ್ ಪಡೆಯುವ ಮೂಲಕ ಪಂದ್ಯಕ್ಕೆ ತಿರುವು ನೀಡಿದರು. ಆದರೂ ಕೊನೆಯ ಎರಡು ಓವರ್ ನಲ್ಲಿ ಶ್ರೀಲಂಕಾ ಗೆಲವಿಗೆ ಕೇವಲ 9 ರನ್ ಬೇಕಿತ್ತು. ಆದರೆ 19ನೇ ಓವರ್ ಬೌಲಿಂಗ್ ಮಾಡಿದ ರಿಂಕು ಸಿಂಗ್ ಕೇವಲ 3 ರನ್ ಬಿಟ್ಟುಕೊಟ್ಟು 2 ವಿಕೆಟ್ ಪಡೆದರು.
ಕೊನೆಯ ಓವರ್ ನಲ್ಲಿ ಮೊಹಮ್ಮದ್ ಸಿರಾಜ್ ಬೌಲಿಂಗ್ ಮಾಡಬೇಕಿತ್ತು ಆದರೆ ಕೊನೆಯ ಕ್ಷಣದಲ್ಲಿ ಮನಸ್ಸು ಬದಲಾಯಿಸಿದ ಸೂರ್ಯಕುಮಾರ್ ಯಾದವ್ ತಾವೇ ಬೌಲಿಂಗ್ ದಾಳಿಗೆ ಇಳಿದರು. 5 ರನ್ ಬಿಟ್ಟುಕೊಟ್ಟು 2 ವಿಕೆಟ್ ಪಡೆದ ಅವರು ಪಂದ್ಯವನ್ನು ಟೈ ಮಾಡುವಲ್ಲಿ ಯಶಸ್ವಿಯಾದರು.
ಸೂಪರ್ ಓವರ್ ನಲ್ಲಿ ಗೆಲುವು
ಸೂಪರ್ ಓವರ್ ನಲ್ಲಿ ಶ್ರೀಲಂಕಾ 2 ವಿಕೆಟ್ ಕಳೆದುಕೊಂಡು 2 ರನ್ ಗಳಿಸುವ ಮೂಲಕ ಭಾರಕ್ಕೆ ಕೇವಲ 3 ರನ್ಗಳ ಗುರಿ ನೀಡಿತು. ಸೂರ್ಯಕುಮಾರ್ ಯಾದವ್ ಸೂಪರ್ ಓವರ್ ನ ಮೊದಲ ಎಸೆತದಲ್ಲೇ ಬೌಂಡರಿ ಗಳಿಸುವ ಮೂಲಕ ಭಾರತಕ್ಕೆ ಗೆಲುವು ತಂದುಕೊಟ್ಟರು.
ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ಕ್ಲೀನ್ ಸ್ವೀಪ್ ಮಾಡಿದೆ. ನಾಯಕನಾಗಿ ಸೂರ್ಯಕುಮಾರ್ ಯಾದವ್ ಮತ್ತು ಕೋಚ್ ಆಗಿ ಗೌತಮ್ ಗಂಭೀರ್ ಅವರಿಗೆ ಇದು ಮರೆಯಲಾಗದ ಸರಣಿಯಾಗಿದೆ. ಅದರಲ್ಲೂ ಟಿ20 ಸರಣಿಯ ಕೊನೆಯ ರೋಚಕ ಪಂದ್ಯ ಮಾತ್ರ ಬಹುಕಾಲ ನೆನಪಿನಲ್ಲಿ ಉಳಿಯಲಿದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications