India vs Zimbabwe: ಭಾರತಕ್ಕೆ ಭರ್ಜರಿ ಗೆಲುವು; ಸರಣಿ ಗೆದ್ದ ಗಿಲ್ ಪಡೆ
ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯ ಸೋತ ಭಾರತ ಬಳಿಕ ಸತತ ನಾಲ್ಕು ಪಂದ್ಯಗಳನ್ನು ಗೆಲ್ಲುವ ಮೂಲಕ 4-1 ಅಂತರದಲ್ಲಿ ಸರಣಿಯನ್ನು ಗೆದ್ದುಕೊಂಡಿದೆ. ಹರಾರೆಯಲ್ಲಿ ನಡೆದ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ 42 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದ ಜಿಂಬಾಬ್ವೆ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 167 ರನ್ ಗಳಿಸಿತು. ಸಂಜು ಸ್ಯಾಮ್ಸನ್ 58 ರನ್ ಗಳಿಸಿದರೆ, ಶಿವಂ ದುಬೆ 12 ಎಸೆತಗಳಲ್ಲಿ 26 ರನ್ ಗಳಿಸಿದರು.

ಈ ಮೊತ್ತವನ್ನು ಬೆನ್ನತ್ತಿದ ಜಿಂಬಾಬ್ವೆ ಭಾರತದ ಬಿಗಿ ಬೌಲಿಂಗ್ ದಾಳಿಗೆ ಸಿಲುಕಿ 18.3 ಓವರ್ ಗಳಲ್ಲಿ 125 ರನ್ಗಳಿಗೆ ಆಲೌಟ್ ಆಯಿತು. ಮುಖೇಶ್ ಕುಮಾರ್ 4 ವಿಕೆಟ್ ಪಡೆದರೆ, ಶಿವಂ ದುಬೆ 2 ವಿಕೆಟ್ ಪಡೆದರು. ಅಭಿಷೇಕ್ ಶರ್ಮಾ, ವಾಷಿಂಗ್ಟನ್ ಸುಂದರ್ ಮತ್ತು ತುಷಾರ್ ದೇಶಪಾಂಡೆ ತಲಾ ಒಂದು ವಿಕೆಟ್ ಪಡೆದುಕೊಂಡರು.
ದಾಖಲೆ ಬರೆದ ಜೈಸ್ವಾಲ್
ಇನ್ನು ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ವಿಶ್ವದಾಖಲೆ ಬರೆಯುವ ಮೂಲಕ ಗಮನ ಸೆಳೆದರು. ಒಂದೇ ಎಸೆತದಲ್ಲಿ 13 ರನ್ ಗಳಿಸಿ ಮೊದಲ ಎಸೆತದಲ್ಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ವಿಶೇಷ ದಾಖಲೆ ಬರೆದರು.
ಜಿಂಬಾಬ್ವೆ ನಾಯಕ ಸಿಕಂದರ್ ರಝಾ ಅವರ ಮೊದಲ ಓವರ್ ನ ಮೊದಲ ಎಸೆತದಲ್ಲೇ ಜೈಸ್ವಾಲ್ ಸಿಕ್ಸರ್ ಬಾರಿಸಿದರು, ಆದರೆ ಇದು ನೋಬಾಲ್ ಆಗಿತ್ತು, ಮೊದಲನೇ ಅಧಿಕೃತ ಎಸೆತಕ್ಕೂ ಮುನ್ನವೇ ಭಾರತದ ಸ್ಕೋರ್ 7 ರನ್ ಆಗಿತ್ತು, ಎರಡನೇ ಎಸೆತವನ್ನು ಸಿಕ್ಸರ್ ಬಾರಿಸಿದ ಜೈಸ್ವಾಲ್, ಒಂದೇ ಎಸೆತದಲ್ಲಿ 13 ರನ್ ಗಳಿಸಿದ ಸಾಧನೆ ಮಾಡಿದರು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications