Ind vs SA: ಸ್ಮೃತಿ ಮಂಧಾನ ಭರ್ಜರಿ ಶತಕ; ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದ ಭಾರತ
ಬೆಂಗಳೂರಿನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 143 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. ಆಶಾ ಶೋಭಾನಾ ಮತ್ತು ಸ್ಮೃತಿ ಮಂಧಾನ ಭಾರತದ ಗೆಲುವಿನಲ್ಲಿ ಮಹತ್ವದ ಕೊಡುಗೆ ನೀಡಿದರು.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಭಾರತ ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಆಲ್ರೌಂಡ್ ಪ್ರದರ್ಶನ ನೀಡಿತು.

ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 50 ಓವರ್ ಗಳಲ್ಲಿ ಭಾರತ 8 ವಿಕೆಟ್ ನಷ್ಟಕ್ಕೆ 265 ರನ್ ಗಳಿಸಿತು.
ಸ್ಮೃತಿ ಮಂಧಾನ ಭರ್ಜರಿ ಶತಕ
ಶೆಫಾಲಿ ವರ್ಮಾ 7 ರನ್ ಗಳಿಸಿ ಔಟಾದರೆ, ದಯಾಳ್ ಹೇಮಲತಾ 12 ರನ್ ಗಳಿಸಿ ಔಟಾದರು. ನಾಯಕಿ ಹರ್ಮನ್ಪ್ರೀತ್ ಕೌರ್ 10 ರನ್, ಜೆಮಿಮಾ ರೋಡ್ರಿಗಸ್ 17 ರನ್, ರಿಚಾ ಘೋಷ್ 3 ರನ್ ಗಳಿಸಿದರು. ಒಂದು ಕಡೆ ವಿಕೆಟ್ ಬೀಳುತ್ತಿದ್ದರು ಸ್ಮೃತಿ ಮಂಧಾನ ಮತ್ತೊಂದು ಕಡೆ ಅತ್ಯುತ್ತಮವಾಗಿ ಬ್ಯಾಟಿಂಗ್ ಮಾಡಿದರು.
127 ಎಸೆತಗಳಲ್ಲಿ 117 ರನ್ ಗಳಿಸುವ ಮೂಲಕ ಅಮೋಘ ಶತಕ ಸಿಡಿಸಿದರು. ದೀಪ್ತಿ ಶರ್ಮಾ 37 ರನ್, ಪೂಜಾ ವಸ್ತ್ರಾಕರ್ 31 ರನ್ ಗಳಿಸುವ ಮೂಲಕ ಮಂಧಾನಗೆ ಜೊತೆಯಾದರು.
ಆಶಾ ಶೋಭನಾ ಮಾರಕ ಬೌಲಿಂಗ್
ಈ ಸವಾಲಿನ ಮೊತ್ತವನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ಮೊದಲ ಓವರ್ ನಲ್ಲೇ ವಿಕೆಟ್ ಕಳೆದುಕೊಂಡಿತು. ಬಳಿಕ ದಕ್ಷಿಣ ಆಫ್ರಿಕಾ ಚೇತರಿಸಿಕೊಳ್ಳಲೇ ಇಲ್ಲ.
ಏಕದಿನ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಮೊದಲ ಪಂದ್ಯದಲ್ಲೇ ಆಶಾ ಶೋಭನಾ ಮಾರಕ ಬೌಲಿಂಗ್ ಮಾಡಿದರು. 8.4 ಓವರ್ ಗಳಲ್ಲಿ ಕೇವಲ 21 ರನ್ ನೀಡಿ 4 ವಿಕೆಟ್ ಪಡೆದುಕೊಂಡರು.
ದೀಪ್ತಿ ಶರ್ಮಾ 2 ವಿಕೆಟ್ ಪಡೆದರೆ, ರೇಣುಕಾಸಿಂಗ್, ಪೂಜಾ ವಸ್ತ್ರಾಕರ್ ಮತ್ತು ರಾಧಾ ಯಾದವ್ ತಲಾ ಒಂದು ವಿಕೆಟ್ ಪಡೆದರು.
ಭಾರತದ ಈ ಆಲ್ರೌಂಡ್ ಪ್ರದರ್ಶನದ ಮೂಲಕ ಏಕದಿನ ಸರಣಿಯಲ್ಲಿ ಮೊದಲ ಪಂದ್ಯ ಗೆದ್ದು ಶುಭಾರಂಭ ಮಾಡಿದೆ. ದಕ್ಷಿಣ ಆಫ್ರಿಕಾ ಭಾರತದ ವಿರುದ್ಧ ಮೂರು ಏಕದಿನ ಪಂದ್ಯ, ಒಂದು ಟೆಸ್ಟ್ ಮತ್ತು ಮೂರು ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಮೂರು ಏಕದಿನ ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಟೆಸ್ಟ್ ಮತ್ತು ಟಿ20 ಪಂದ್ಯಗಳು ಚೆನ್ನೈನಲ್ಲಿ ನಡೆಯಲಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು












Click it and Unblock the Notifications