ಟಿ20 ವಿಶ್ವಕಪ್ ಫೈನಲ್ನಲ್ಲಿ ಐತಿಹಾಸಿಕ ದಾಖಲೆ ಮಾಡಿದ ಟೀಂ ಇಂಡಿಯಾ
T20 World Cup 2026 Final: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಐತಿಹಾಸಿಕ ಸಾಧನೆಯನ್ನು ಮಾಡಿದೆ. ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ಟೀಂ ಇಂಡಿಯಾ ನಿಗದಿತ 20 ಓವರ್ಗಳಲ್ಲಿ 255 ರನ್ಗಳನ್ನು ಗಳಿಸಿದೆ. ಟಿ20 ವಿಶ್ವಕಪ್ ಫೈನಲ್ ಇತಿಹಾಸದಲ್ಲೇ ಇದು ಅತಿ ಹೆಚ್ಚು ಮೊತ್ತವಾಗಿದೆ.
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2026ರ ಟಿ20 ವಿಶ್ವಕಪ್ನ ನಿರ್ಣಾಯಕ ಫೈನಲ್ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸೂರ್ಯಕುಮಾರ್ ಯಾದವ್ ಪಡೆ ನ್ಯೂಜಿಲೆಂಡ್ ಬೌಲರ್ಗಳನ್ನು ಮನಬಂದಂತೆ ದಂಡಿಸಿತು.

ಕಿವೀಸ್ ಎದುರು ಭಾರತ ಐತಿಹಾಸಿಕ ದಾಖಲೆ
ನಿಗದಿತ 20 ಓವರ್ಗಳಲ್ಲಿ ಭಾರತ ತಂಡವು 5 ವಿಕೆಟ್ ನಷ್ಟಕ್ಕೆ ಬರೋಬ್ಬರಿ 255 ರನ್ಗಳನ್ನು ಪೇರಿಸಿ, ಎದುರಾಳಿ ನ್ಯೂಜಿಲೆಂಡ್ಗೆ ಬೃಹತ್ ಮೊತ್ತದ ಗುರಿಯನ್ನು ನೀಡಿದೆ. ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಇತಿಹಾಸದಲ್ಲೇ ಇಷ್ಟೊಂದು ಬೃಹತ್ ಮೊತ್ತ ದಾಖಲಾಗಿರುವುದು ಇದೇ ಮೊದಲು. ಈ ಮೂಲಕ ಭಾರತ ತಂಡವು ವಿಶ್ವದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡಿದೆ.
ತಂಡದ ಆರಂಭಿಕ ಆಟಗಾರರು ನೀಡಿದ ಸ್ಫೋಟಕ ಅಡಿಪಾಯ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್ಗಳ ಅಬ್ಬರದ ಹೊಡೆತಗಳು ತಂಡದ ಮೊತ್ತವನ್ನು 250ರ ಗಡಿ ದಾಟುವಂತೆ ಮಾಡಿದವು. ವಿಶೇಷವಾಗಿ ಅಂತಿಮ ಓವರ್ಗಳಲ್ಲಿ ಬಂದ ರನ್ ಪ್ರವಾಹವು ಭಾರತಕ್ಕೆ ಈ ಬೃಹತ್ ಸ್ಕೋರ್ ಗಳಿಸಲು ನೆರವಾಯಿತು. ಈಗ ಕಿವೀಸ್ ಪಡೆ ಗೆಲುವಿಗಾಗಿ 256 ರನ್ಗಳ ಬೃಹತ್ ಗುರಿಯನ್ನು ಬೆನ್ನಟ್ಟಬೇಕಿದೆ. ತವರಿನ ಅಂಗಳದಲ್ಲಿ ಟ್ರೋಫಿ ಎತ್ತಿಹಿಡಿಯುವ ಕನಸಿನಲ್ಲಿರುವ ಭಾರತೀಯ ಬೌಲರ್ಗಳು, ಈ ಬೃಹತ್ ಸ್ಕೋರ್ ಅನ್ನು ರಕ್ಷಿಸಿಕೊಳ್ಳಲು ಸಜ್ಜಾಗಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications