ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ವನಿತೆಯರಿಗೆ ಭರ್ಜರಿ ಜಯ
ಭಾರತ ಮಹಿಳಾ ಕ್ರಿಕೆಟ್ ತಂಡ ಚೆನ್ನೈ ನಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ, ಮೂರೇ ದಿನದಲ್ಲಿ ಗೆದ್ದು ಬೀಗಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಅಮೋಘ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ವನಿತೆಯರು ಅಬ್ಬರಿಸಿದರು.
ಎಂ.ಚಿದಂಬರಂ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ವನಿತೆಯರು 6 ವಿಕೆಟ್ಗೆ 603 ರನ್ ಸೇರಿಸಿ ಡಿಕ್ಲೇರ್ ಮಾಡಿಕೊಂಡರು. ಇದಕ್ಕುತ್ತರವಾಗಿ ಮೊದಲ ಇನ್ನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ 266 ರನ್ಗಳಿಗೆ ಆಲೌಟ್ ಆಯಿತು. ಫಾಲೋ ಆನ್ ಪಡೆದು ಬ್ಯಾಟ್ ಮಾಡಿದ ಪ್ರವಾಸಿ ತಂಡ, ಸೋಮವಾರ 2 ವಿಕೆಟ್ ನಷ್ಟಕ್ಕೆ 232 ರನ್ ಕಲೆ ಹಾಕಿತ್ತು.

ಆದರೆ ಟೀಮ್ ಇಂಡಿಯಾ ವನಿತೆಯರ ಬಿಗುವಿನ ದಾಳಿಯ ನೆರವಿನಿಂದ ದಕ್ಷಿಣ ಆಫ್ರಿಕಾ 373 ರನ್ಗಳಿಗೆ ಸರ್ವ ಪತನ ಕಂಡಿತು. 93 ರನ್ ಸಿಡಿಸಿ ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದಕೊಂಡಿದ್ದ ನಾಯಕಿ ಲಾರಾ ವೊಲ್ವಾರ್ಡ್ಟ್ ಅಮೋಘ ಇನ್ನಿಂಗ್ಸ್ ಪ್ರದರ್ಶನ ನೀಡಿದರು. ಇವರ ಸಮಯೋಚಿತ ಆಟದ ನೆರವಿನಿಂದಲೇ ದಕ್ಷಿಣ ಆಫ್ರಿಕಾ ಅಲ್ಪ ಮುನ್ನಡೆ ಸಾಧಿಸಲು ನೆರವಾಯಿತು.
ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ನಾಡಿನ್ ಡಿ ಕ್ಲರ್ಕ್ ಸೊಗಸಾದ ಇನ್ನಿಂಗ್ಸ್ ಆಡಿದರು. ಯುವ ಆಟಗಾರ್ತಿಯನ್ನು ಕಟ್ಟಿ ಹಾಕಲು ಭಾರತೀಯ ಬೌಲರ್ಸ್ ವಿಫಲರಾದರು. ಇವರು 185 ಎಸೆತಗಳಲ್ಲಿ 8 ಬೌಂಡರಿ, 1 ಸಿಕ್ಸರ್ ನೆರವಿನಿಂದ 61 ರನ್ ಸಿಡಿಸಿ ತಂಡಕ್ಕೆ ನೆರವಾದರು.
ಭಾರತದ ಪರ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್, ಸ್ನೇಹಾ ರಾಣಾ, ದೀಪ್ತಿ ಶರ್ಮಾ ತಲಾ ಎರಡು ವಿಕೆಟ್ ಕಬಳಿಸಿದರು. ಸಾಧಾರಣ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ ವಿಕೆಟ್ ನಷ್ಟವಿಲ್ಲದೆ ಗುರಿ ಮುಟ್ಟಿ ಸಂಭ್ರಮಿಸಿತು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications