India vs Australia: ಇಂದೋರ್ ತಲುಪಿದ ಭಾರತ ತಂಡ: ಪ್ಲೇಯಿಂಗ್ ಇಲೆವೆನ್, ಪಿಚ್ ವರದಿ
ಸೆಪ್ಟೆಂಬರ್ 24 ರಂದು (ಭಾನುವಾರ) ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಎರಡನೇ ಏಕದಿನ ಪಂದ್ಯ ನಡೆಯಲಿದ್ದು, ಭಾರತ ತಂಡ ಇಂದೋರ್ ತಲುಪಿದೆ. ಸರಣಿಯ ಮೊದಲನೇ ಪಂದ್ಯವನ್ನು ಗೆದ್ದಿರುವ ಭಾರತ ತಂಡ, ಎರಡನೇ ಪಂದ್ಯ ಗೆಲ್ಲುವ ಸರಣಿ ವಶಪಡಿಸಿಕೊಳ್ಳುವ ಉತ್ಸಾಹದಲ್ಲಿದೆ.
ಇಂದೋರ್ ನಲ್ಲಿ ನಡೆಯಲಿರುವ ಎರಡನೇ ಪಂದ್ಯದಲ್ಲಿ ಭಾರತ ತಂಡದಲ್ಲಿ ಹಲವು ಬದಲಾವಣೆ ಮಾಡುವ ಸಾಧ್ಯತೆ ಇದೆ. ಮೊದಲ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾದ ಶಾರ್ದೂಲ್ ಠಾಕೂರ್ ಅವರ ಬದಲಾಗಿ ಮೊಹಮ್ಮದ್ ಸಿರಾಜ್ ಮತ್ತೆ ಆಡುವ ಬಳಗಕ್ಕೆ ವಾಪಸಾಗುವ ಸಾದ್ಯತೆ ಇದೆ.

ಮೊದಲ ಏಕದಿನ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ಗೆ ವಿಶ್ರಾಂತಿ ನೀಡಲಾಯಿತು ಮತ್ತು ಅವರ ಬದಲಾಗಿ ಮೊಹಮ್ಮದ್ ಶಮಿ ಅವಕಾಶ ಪಡೆದು ಮಿಂಚು ಹರಿಸಿದ್ದರು. ಅನುಭವಿ ವೇಗಿ ಆಸೀಸ್ ವಿರುದ್ಧ 5 ವಿಕೆಟ್ ಪಡೆಯುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಎರಡನೇ ಪಂದ್ಯಕ್ಕೂ ಪ್ರಮುಖರು ಅಲಭ್ಯ
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಅವರು ಎರಡನೇ ಪಂದ್ಯದಲ್ಲಿ ವಿಶ್ರಾಂತಿ ಪಡೆದಿರುವ ಕಾರಣ ಬ್ಯಾಟಿಂಗ್ ಲೈನ್ ಅಪ್ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ನಿರೀಕ್ಷೆ ಮಾಡಲಾಗಿದೆ.
ಎರಡನೇ ಏಕದಿನ ಪಂದ್ಯದಲ್ಲೂ ಕೆಎಲ್ ರಾಹುಲ್ ತಂಡದ ನಾಯಕರಾಗಿ ಮುಂದುವರಿಯಲಿದ್ದಾರೆ. ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಅವರು ಕೂಡ ಉತ್ತಮ ಪ್ರದರ್ಶನ ನೀಡುತ್ತಿದ್ದು, ಭಾರತ ತಂಡ ಗೆಲ್ಲುವ ಉತ್ಸಾಹದಲ್ಲಿದೆ.
ಕೆಎಲ್ ರಾಹುಲ್ ಮತ್ತು ರಾಹುಲ್ ದ್ರಾವಿಡ್ ಬೌಲಿಂಗ್ ವಿಭಾಗದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಸಿರಾಜ್ ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ 6 ವಿಕೆಟ್ ಪಡೆಯುವ ಮೂಲಕ ಭಾರತದ ಗೆಲುವಿಗೆ ಕಾರಣವಾಗಿದ್ದರು.
ಭಾರತದ ಮೂವರು ಪ್ರಮುಖ ವೇಗಿಗಳು ತಂಡಕ್ಕೆ ಮರಳುವ ಮೂಲಕ ತಂಡದ ಬೌಲಿಂಗ್ ವಿಭಾಗ ಮತ್ತಷ್ಟು ಪರಿಣಾಮಕಾರಿಯಾಗಿದೆ. ಶಮಿ ಕೂಡ ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿರುವುದು ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ.
ಶಾರ್ದೂಲ್ ಠಾಕೂರ್ ಬ್ಯಾಟ್ನಲ್ಲಿ ಅವಕಾಶವನ್ನು ಪಡೆಯದಿದ್ದರೂ, ಅವರ ಬೌಲಿಂಗ್ ಸಾಕಷ್ಟು ಉತ್ತಮವಾಗಿಲ್ಲ. ಅವರು 10 ಓವರ್ಗಳಲ್ಲಿ 78 ರನ್ಗಳನ್ನು ನೀಡುವ ಮೂಲಕ ದುಬಾರಿ ಬೌಲರ್ ಎನಿಸಿಕೊಂಡಿದ್ದರು. ಅವರು ಎರಡನೇ ಪಂದ್ಯದಲ್ಲಿ ಬೆಂಚ್ ಕಾಯುವುದು ಖಚಿತವಾಗಿದೆ.
ಇಂದೋರ್ ಪಿಚ್ ವರದಿ
ಏಕದಿನ ವಿಶ್ವಕಪ್ಗಾಗಿ ಎಲ್ಲಾ ಕ್ರೀಡಾಂಗಣದ ಅಂಗಳವನ್ನು ಮರುನಿರ್ಮಾಣ ಮಾಡಲಾಗಿದ್ದು, ಬ್ಯಾಟಿಂಗ್ ಸ್ನೇಹಿ ಪಿಚ್ ನಿರ್ಮಾಣ ಮಾಡಲಾಗಿದೆ. ಆದರೂ ಇಂದೋರ್ ನಲ್ಲಿ ಸ್ಪಿನ್ನರ್ ಗಳು ಹೆಚ್ಚಿನ ಸಹಾಯ ಪಡೆಯುವ ನಿರೀಕ್ಷೆ ಇದೆ.
ಭಾರತ ತಂಡದ ಆಡುವ ಬಳಗ
ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
-
IPL 2026 Full Schedule: ಐಪಿಎಲ್ 2026ರ ಸಂಪೂರ್ಣ ವೇಳಾಪಟ್ಟಿ ಪ್ರಕಟ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ












Click it and Unblock the Notifications