U19 World Cup: ವಿಶ್ವಕಪ್ ಫೈನಲ್ನಲ್ಲಿ ಭಾರತ-ಆಸ್ಟ್ರೇಲಿಯಾ ಸೆಣೆಸು: ನೇರಪ್ರಸಾರ, ಸಮಯ, ಪಿಚ್ ವರದಿ
ದಕ್ಷಿಣ ಆಫ್ರಿಕಾದ ಬೆನೊನಿಯಲ್ಲಿರುವ ಸಹಾರಾ ಪಾರ್ಕ್ ವಿಲ್ಲೊಮೂರ್ ಕ್ರಿಕೆಟ್ ಸ್ಟೇಡಿಯಂನಲ್ಲಿ 2024 ರ ಅಂಡರ್-19 ವಿಶ್ವಕಪ್ನ ಫೈನಲ್ನಲ್ಲಿ ಭಾರತವು ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಭಾನುವಾರ, ಫೆಬ್ರವರಿ 11 ರಂದು ಈ ಪಂದ್ಯ ನಡೆಯಲಿದೆ.
ಭಾರತವು ತಮ್ಮ ದಾಖಲೆಯ ಆರನೇ ಅಂಡರ್ 19 ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲುವ ಗುರಿಯನ್ನು ಹೊಂದಿದೆ. 2000, 2008, 2012, 2018 ಮತ್ತು 2022ರಲ್ಲಿ ಜಯಗಳಿಸುವ ಮೂಲಕ ಅತಿ ಹೆಚ್ಚು ಬಾರಿ ಪ್ರಶಸ್ತಿ ಗೆದ್ದ ತಂಡ ಎನಿಸಿಕೊಂಡಿದೆ.

ಭಾರತ ಮತ್ತು ಆಸ್ಟ್ರೇಲಿಯಾ ಎರಡೂ ಅಜೇಯವಾಗಿ ಫೈನಲ್ಗೆ ಬಂದಿವೆ. ಆದಾಗ್ಯೂ, ಸೂಪರ್-6 ಹಂತದಲ್ಲಿ ವೆಸ್ಟ್ ಇಂಡೀಸ್-ಆಸ್ಟ್ರೇಲಿಯಾ ಪಂದ್ಯ ಫಲಿತಾಂಶವಿಲ್ಲದೆ ಕೊನೆಯಾಗಿತ್ತು. ಆದರೆ, ಭಾರತ ಆಡಿರುವ ಎಲ್ಲಾ ಪಂದ್ಯಗಳನ್ನು ಗೆದ್ದಿದೆ.
2024 ರ ಅಂಡರ್ 19 ವಿಶ್ವಕಪ್ ಫೈನಲ್ಗೆ ಭಾರತ ಅಮೋಘ ಪ್ರದರ್ಶನ ನೀಡುವ ಮೂಲಕ ಅರ್ಹತೆ ಪಡೆದುಕೊಂಡಿದೆ. ಬಾಂಗ್ಲಾದೇಶದ ವಿರುದ್ಧ 84 ರನ್ಗಳ ಭರ್ಜರಿ ಗೆಲುವು ಸಾಧಿಸಿದ ಭಾರತ, ನಂತರ ಐರ್ಲೆಂಡ್ ವಿರುದ್ಧ 201 ರನ್ಗಳಿಂದ ಭಾರಿ ಗೆಲುವು ಸಾಧಿಸಿತ್ತು. ಯುಎಸ್ಎ ವಿರುದ್ಧ 201 ರನ್ಗಳಿಂದ ಗೆದ್ದ ಭಾರತ ಸೂಪರ್ ಸಿಕ್ಸ್ನಲ್ಲಿ ನ್ಯೂಜಿಲೆಂಡ್ ಅನ್ನು 214 ರನ್ಗಳಿಂದ ಮತ್ತು ನೇಪಾಳವನ್ನು 132 ರನ್ಗಳಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿತು. ದಕ್ಷಿಣ ಆಫ್ರಿಕಾ ವಿರುದ್ಧದ ಅವರ ಸೆಮಿ-ಫೈನಲ್ ಪಂದ್ಯದಲ್ಲಿ ಎರಡು ವಿಕೆಟ್ಗಳ ರೋಚಕ ಗೆಲುವ ಸಾಧಿಸುವ ಮೂಲಕ ಸತತ 9ನೇ ಬಾರಿಗೆ ಫೈನಲ್ ಪ್ರವೇಸಿದೆ.
ಅಪಾಯಕಾರಿ ಆಸ್ಟ್ರೇಲಿಯಾ
ಆಸ್ಟ್ರೇಲಿಯಾ ಕೂಡ ಆಡಿರುವ ಎಲ್ಲಾ ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಫೈನಲ್ಗೆ ಪ್ರವೇಶ ಪಡೆದುಕೊಂಡಿದೆ. ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಒಂದು ವಿಕೆಟ್ನ ರೋಚಕ ಗೆಲುವು ಸಾಧಿಸಿರುವ ಆಸ್ಟ್ರೇಲಿಯಾ ಐದನೇ ಬಾರಿಗೆ ಅಂಡರ್ 19 ಫೈನಲ್ ಪ್ರವೇಶಿಸಿದ್ದು, ನಾಲ್ಕನೇ ಬಾರಿ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದೆ.
ಪಿಚ್ ವರದಿ
ಬೆನೋನಿಯಲ್ಲಿರುವ ಸಹಾರಾ ಪಾರ್ಕ್ ವಿಲೋಮೂರ್ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಇದೇ ಅಂಗಳದಲ್ಲಿ ಆಸ್ಟ್ರೇಲಿಯಾ - ಪಾಕಿಸ್ತಾನ ಸೆಮಿಫೈನಲ್ ಪಂದ್ಯ ನಡೆದಿತ್ತು. ವೇಗಿಗಳಿಗೆ ಈ ಪಿಚ್ ಸಹಕಾರಿಯಾಗಿದ್ದು, ಬ್ಯಾಟರ್ ರನ್ ಗಳಿಸುವುದು ಸವಾಲಾಗಲಿದೆ.
ಪಂದ್ಯದ ಸಮಯ, ನೇರಪ್ರಸಾರ
ಅಂಡರ್19 ವಿಶ್ವಕಪ್ ಫೈನಲ್ ಭಾನುವಾರ, ಫೆಬ್ರವರಿ 11 ರಂದು ನಡೆಯಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಪಂದ್ಯ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಮೂಲಕ ಟಿವಿಯಲ್ಲಿ ಪಂದ್ಯದ ನೇರಪ್ರಸಾರ ವೀಕ್ಷಣೆ ಮಾಡಬಹುದು. ಮೊಬೈಲ್ನಲ್ಲಿ ಪಂದ್ಯ ನೋಡುವವರು ಹಾಟ್ಸ್ಟಾರ್ ನಲ್ಲಿ ನೇರಪ್ರಸಾರವನ್ನು ವೀಕ್ಷಿಸಬಹುದು.
-
ಯುಪಿಎಸ್ಸಿ 2025 ಫಲಿತಾಂಶ ಪ್ರಕಟ: ಪಾಸಾದವರು 958 ಆಕಾಂಕ್ಷಿಗಳು, ಅರ್ಜಿ ಹಾಕಿದ್ದವರು 10 ಲಕ್ಷ ಮಂದಿ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ












Click it and Unblock the Notifications