ಭಾರತ-ಇಂಗ್ಲೆಂಡ್ ಟೆಸ್ಟ್ 2025: ಭಾರತದ ಪ್ಲೇಯಿಂಗ್ 11ನಲ್ಲಿ ಮೂವರು ಕನ್ನಡಿಗರು; ಮರುಕಳಿಸಿದ 2002ರ ಇತಿಹಾಸ
ಭಾರತ-ಇಂಗ್ಲೆಂಡ್ 5 ಪಂದ್ಯಗಳ ಟೆಸ್ಟ್ ಸರಣಿ ಶಕ್ರವಾರ ಜೂನ್ 20ರಿಂದ ಆರಂಭವಾಗಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಎದುರಾಳಿ ಆಂಗ್ಲರು ಬೌಲಿಂಗ್ ಮುಂದುವರೆಸಿದ್ದಾರೆ. ಅದರಂತೆಯೇ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಇನ್ನೂ ಈ ಬಾರಿಯ ಪ್ಲೇಯಿಂಗ್ 11ನಲ್ಲಿ 3 ಕನ್ನಡಿಗರು ಸ್ಥಾನ ಪಡೆದಿದ್ದಾರೆ. ಅದು 23 ವರ್ಷಗಳ ಬಳಿಕ. ಹಾಗಾದ್ರೆ ಯಾರು ಅವರು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
70ರಿಂದ 90ರ ದಶಕದ ಅಂತ್ಯದವರೆಗೆ ರಾಜ್ಯದ ಕ್ರಿಕೆಟಿಗರು ಭಾರತ ತಂಡದಲ್ಲಿ ಅಧಿಪತ್ಯ ಸಾಧಿಸಿದ್ದ ಸಮಯವಾಗಿತ್ತು. 90ರ ದಶಕದಲ್ಲಿ ಬರೋಬ್ಬರಿ 7 ಮಂದಿ ಕನ್ನಡಿಗರು ಒಂದೇ ಬಾರಿ ಭಾರತ ತಂಡದಲ್ಲಿ ಕಾಣಿಸಿಕೊಂಡು ದಾಖಲೆ ಬರೆದಿರುವ ಉದಾಹರಣೆ ಇದೆ. ಇನ್ನು 2002ರಲ್ಲಿ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಮತ್ತು ಜಾವಗಲ್ ಶ್ರೀನಾಥ್ ಮೂವರು ಕನ್ನಡಿಗರು ಭಾರತ ಪರ ಕಣಕ್ಕಿಳಿದದ್ದೇ ಕೊನೆಯಾಗಿತ್ತು.

ಇದೀಗ 2025ರಲ್ಲಿ 23 ವರ್ಷಗಳ ಬಳಿಕ ಮತ್ತೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಕರ್ನಾಟಕದ ಮೂವರು ಆಟಗಾರರು ಒಂದೇ ಬಾರಿ ಭಾರತದ ಪರ ಆಡುವ 11ರ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಕೆ.ಎಲ್.ರಾಹುಲ್, ಕರುಣ್ ನಾಯರ್ ಮತ್ತು ಪ್ರಸಿದ್ಧ್ ಕೃಷ್ಣ ಸ್ಥಾನ ಪಡೆದಿದ್ದು, ಮತ್ತೆ 2002ರ ಇತಿಹಾಸ ಮರುಕಳಿಸಿದಂತಾಗಿದೆ.
ಟೀಮ್ ಇಂಡಿಯಾ ಇದೇ ಮೊದಲ ಬಾರಿಗೆ ಹೊಸ ನಾಯಕ ಶುಭ್ಮನ್ ಗಿಲ್ ನೇತೃತ್ವದಲ್ಲಿ ಟೆಸ್ಟ್ ಪಂದ್ಯ ಆಡುತ್ತಿದೆ. ಈಗಾಗಲೇ ಟಾಸ್ ಸೋತು ಭಾರತದ ಮೊದಲು ಬ್ಯಾಟ್ ಮಾಡುತ್ತಿದೆ. ಇನ್ನು ಜಸ್ಪ್ರೀತ್ ಬುಮ್ರಾ ನೇತೃತ್ವದಲ್ಲಿ ಭಾರತ ತಂಡ ಬೌಲಿಂಗ್ ಪಡೆ ದಾಳಿ ನಡೆಸಲಿದೆ. ವಿಕೆಟ್ ಕೀಪರ್ ಹಾಗೂ ಉಪನಾಯಕನಾಗಿ ರಿಷಭ್ ಪಂತ್ ಅವರು ತಂಡದಲ್ಲಿದ್ದಾರೆ.
ಲೀಡ್ಸ್ನ ಹೆಡಿಂಗ್ಲೇ ಮೈದಾನದಲ್ಲಿ ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಕನ್ನಡಿಗರಾದ ರಾಹುಲ್ ಆರಂಭಿಕರಾಗಿ ಕಣಕ್ಕಿಳಿದು 8 ಬೌಂಡರಿ ನೆರವಿನಿಂದ 42 ರನ್ ಬಾರಿಸಿ ಔಟ್ ಆಗಿದ್ದಾರೆ. ದೇಶೀಯ ಟೂರ್ನಿಯಲ್ಲಿ ಅಬ್ಬರಿಸಿದ್ದ ಕರುಣ್ ನಾಯರ್ 6ನೇ ಕ್ರಮಾಂಕದಲ್ಲಿ ಆಡುವುದು ಖಚಿತ.
ಕನ್ನಡಿಗ ಪ್ರಸಿದ್ಧ್ ಕೃಷ್ಣ ಮೂರನೇ ವೇಗಿಯಾಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ ಹಾಗೂ ಸಿರಾಜ್ಗೆ ಸಾಥ್ ನೀಡಲು ಸಿದ್ಧರಾಗಿದ್ದಾರೆ. ಇತ್ತೀಚಿಗೆ ಭಾರತದಲ್ಲಿ ನಡೆದಿದ್ದ ಐಪಿಎಲ್ನಲ್ಲಿ ಇವರು ಬಿಗುವಿನ ದಾಳಿ ನಡೆಸಿ ಪರ್ಪಲ್ ಕ್ಯಾಪ್ ಪಡೆದಿದ್ದರು. ಈ ಮೂಲಕ ಆಯ್ಕೆ ಸಮಿತಿಯ ಮನ ಗೆದ್ದಿದ್ದರು. ಬಹು ವರ್ಷದ ಬಳಿಕ ಟೀಮ್ ಇಂಡಿಯಾದಲ್ಲಿ ಮೂವರು ಕನ್ನಡಿಗರು ಆಡುತ್ತಿರುವುದು ವಿಶೇಷ. ಈ ಮೊದಲು 23 ವರ್ಷಗಳ ಹಿಂದೆ ಆಗಿತ್ತು
ಟೀಮ್ ಇಂಡಿಯಾ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ಕೆ.ಎಲ್.ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಕರುಣ್ ನಾಯರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications