Jasprit Bumrah: ವಾಸಿಮ್ ಅಕ್ರಮ್ ದಾಖಲೆ ಅಳಿಸಿದ ಬುಮ್ರಾ
ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯ ಲೀಡ್ಸ್ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಬ್ಯಾಟರ್ಗಳು ಆರ್ಭಟ ನಡೆಸುತ್ತಿದ್ದಾರೆ. ಭಾರತದ ಪರ ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಿಷಭ್ ಪಂತ್ ಶತಕ ಬಾರಿಸಿ ಮಿಂಚಿದರು. ಮೊದಲ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡದ ಬ್ಯಾಟರ್ಗಳಿಗೆ ಬುಮ್ರಾ ಬಹುವಾಗಿ ಕಾಡಿದರು. ಇವರು ಬಿದ್ದ ಮೂರು ವಿಕೆಟ್ಗಳನ್ನು ಪಡೆದು ಹೊಸ ಇತಿಹಾಸ ನಿರ್ಮಿಸಿದರು.
ಶನಿವಾರ ಮೊದಲ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ 3 ವಿಕೆಟ್ಗೆ 359 ರನ್ಗಳಿಂದ ಮುಂದುವರೆಸಿ 471 ರನ್ಗಳಿಗೆ ಆಲೌಟ್ ಆಯಿತು. ಮೊದಲ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡ ದಿನದಾಟದಂತ್ಯಕ್ಕೆ 3 ವಿಕೆಟ್ಗೆ 209 ರನ್ ಸೇರಿಸಿತು. ಓಲಿ ಪೋಪ್ ಅಜೇಯ 100 ಹಾಗೂ ಹ್ಯಾರಿ ಬ್ರೂಕ್ ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಶನಿವಾರ ಬುಮ್ರಾ ಮೂರು ವಿಕೆಟ್ ಪಡೆಯುವ ಮೂಲಕ ದಾಖಲೆ ಬರೆದರು.

ಟೀಮ್ ಇಂಡಿಯಾದ ಪ್ರಸಿದ್ಧ ಕೃಷ್ಣಾ, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್ ವಿಕೆಟ್ ಪಡೆಯುವಲ್ಲಿ ವಿಫಲರಾದರು. ಆದರೆ ಜಸ್ಪ್ರಿತ್ ಬುಮ್ರಾ ಮೂರು ವಿಕೆಟ್ ಪಡೆದು ಅಬ್ಬರಿಸಿದರು. ಇವರು ಈ ಮೂಲಕ ಪಾಕಿಸ್ತಾನದ ದಿಗ್ಗಜ ವೇಗದ ಬೌಲರ್ ವಾಸಿಮ್ ಅಕ್ರಮ್ ಅವರ ದಾಖಲೆಯನ್ನು ಅಳಿಸಿ ಹಾಕಿದರು. ಸೇನಾ ರಾಷ್ಟ್ರಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಏಷ್ಯಾ ಬೌಲರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡರು.
ಮೊದಲ ಇನಿಂಗ್ಸ್ನಲ್ಲಿ ಬುಮ್ರಾ ಬೆನ್ ಡಕೆಟ್, ಜಾಕ್ ಕ್ರಾಲಿ ಅವರ ವಿಕೆಟ್ ಪಡೆಯುತ್ತಿದ್ದಂತೆ ಸೇನಾ ರಾಷ್ಟ್ರಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಏಷ್ಯನ ಬೌಲರ್ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು. ವಾಸಿಮ್ ಅಕ್ರಮ್ (146), ಅನಿಲ್ ಕುಂಬ್ಳೆ (141), ಇಶಾಂತ್ ಶರ್ಮಾ (130) ಮತ್ತು ಮೊಹಮ್ಮದ್ ಶಮಿ (123) ನಂತರದ ಸ್ಥಾನದಲ್ಲಿದ್ದಾರೆ.

ಬೆಸ್ಟ್ ಬೌಲರ್
ಟೀಮ್ ಇಂಡಿಯಾದ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ಅವರನ್ನು ವಿಶ್ವದ ಅತ್ಯುತ್ತಮ ಬೌಲರ್ ಎಂದು ಬೆನ್ ಡಕೆಟ್ ತಿಳಿಸಿದ್ದಾರೆ. ಬುಮ್ರಾ ಅವರನ್ನು ಎದುರಿಸುವುದು ತುಂಬ ಕಷ್ಟ. ಇವರು ಎರಡೂ ಕಡೆಗಳಲ್ಲಿ ಸ್ವಿಂಗ್ ಮಾಡುವ ಬೌಲರ್. ಇವರು ಯಾವುದೇ ಸೂಚನೆ ಇಲ್ಲದೆ ಮೂರು ಅಥವಾ ನಾಲ್ಕು ವಿಭಿನ್ನ ಎಸೆತಗಳನ್ನು ಎಸೆಯುವ ಅವರ ಸಾಮರ್ಥ್ಯ ಅದ್ಭುತ. ಇವರ ಕೈಯನ್ನು ನೋಡಿದರೆ ಇವರು ಯಾವ ಎಸೆತವನ್ನು ಎಸೆಯುತ್ತಾರೆ ಎಂಬುದನ್ನು ಅಂದಾಜಿಸುವುದು ಕಷ್ಟ ಎಂದು ತಿಳಿಸಿದ್ದಾರೆ.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್








Click it and Unblock the Notifications