IND vs USA: ಯುಎಸ್ಎ ವಿರುದ್ಧ ಗೆಲುವು; ಎಂಟರ ಘಟ್ಟಕ್ಕೆ ಭಾರತ
ನ್ಯೂಯಾರ್ಕ್ನಲ್ಲಿ ನಡೆದ ಯುಎಸ್ಎ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದಲ್ಲಿ 7 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದ ಭಾರತ ಸೂಪರ್ 8 ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ.
ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅರ್ಷದೀಪ್ ಸಿಂಗ್ ಮೊದಲ ಓವರ್ ನಲ್ಲೇ ಎರಡು ವಿಕೆಟ್ ಪಡೆಯುವ ಮೂಲಕ ಯುಎಸ್ಎ ತಂಡಕ್ಕೆ ಆಘಾತ ನೀಡಿದರು.

ಭಾರತದ ಬಿಗಿ ಬೌಲಿಂಗ್ ದಾಳಿ ಎದುರು ಯುಎಸ್ಎ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 110 ರನ್ ಗಳಿಸಿತು. ಸ್ಟೀವನ್ ಟೇಲರ್ 24 ರನ್, ಎನ್ಆರ್ ಕುಮಾರ್ 27 ರನ್ ಗಳಿಸಿ ಯುಎಸ್ಎ ತಂಡಕ್ಕೆ ಆಸರೆಯಾದರು.
ಭಾರತದ ಪರವಾಗಿ ಅರ್ಷದೀಪ್ ಸಿಂಗ್ 4 ಓವರ್ ಗಳಲ್ಲಿ ಕೇವಲ 9 ರನ್ ನೀಡಿ 4 ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯ 4 ಓವರ್ ಗಳಲ್ಲಿ 14 ರನ್ ನೀಡಿ 2 ವಿಕೆಟ್ ಪಡೆದರು. ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.
ಸೂರ್ಯ, ದುಬೆ ಆಸರೆ
ಈ ಸುಲಭ ಗುರಿಯನ್ನು ಬೆನ್ನತ್ತಿದ ಭಾರತ ತಂಡ ಆರಂಭದಲ್ಲೇ ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು. ನಾಯಕ ರೋಹಿತ್ ಶರ್ಮಾ ಕೂಡ 4 ರನ್ ಗಳಿಸಿ ಔಟಾದಾಗಾ ಭಾರತೀಯ ಪಾಳಯದಲ್ಲಿ ಆತಂಕ ಎದುರಾಗಿತ್ತು.
ಸೂರ್ಯಕುಮಾರ್ ಯಾದವ್ ಮತ್ತು ರಿಷಬ್ ಪಂತ್ ತಾಳ್ಮೆಯ ಬ್ಯಾಟಿಂಗ್ ಮೂಲಕ ತಂಡಕ್ಕೆ ಆಸರೆಯಾದರು. ರಿಷಬ್ ಪಂತ್ 18 ರನ್ ಗಳಿಸಿ ಔಟಾದಾಗ, ಭಾರತ 39 ರನ್ಗಳಿಗೆ 3 ವಿಕೆಟ್ ಕಳೆದುಕೊಂಡು ಆತಂಕಕ್ಕೆ ಸಿಲುಕಿತು.
ಬಳಿಕ ಸೂರ್ಯಕುಮಾರ್ ಯಾದವ್ಗೆ ಜೊತೆಯಾದ ಶಿವಂ ದುಬೆ ವಿಕೆಟ್ ಬೀಳದಂತೆ ನೋಡಿಕೊಂಡರು. ತಾಳ್ಮೆಯ ಆಟವಾಡಿದ ಈ ಜೋಡಿ ಭಾರತವನ್ನು ಗೆಲುವಿನ ದಡ ಸೇರಿಸಿದತು.
ಸೂರ್ಯಕುಮಾರ್ ಯಾದವ್ 49 ಎಸೆತಗಳಲ್ಲಿ ಅಜೇಯ 50 ರನ್ ಗಳಿಸಿದರೆ, ಶಿವಂ ದುಬೆ 35 ಎಸೆತಗಳಲ್ಲಿ ಅಜೇಯ 31 ರನ್ ಗಳಿಸಿದರು.
ಭಾರತ ಮುಂದಿನ ಪಂದ್ಯದಲ್ಲಿ ಕೆನಡಾ ತಂಡವನ್ನು ಎದುರಿಸಲಿದ್ದು, ಜೂನ್ 15ರಂದು ಈ ಪಂದ್ಯ ನಡೆಯಲಿದೆ.
-
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ












Click it and Unblock the Notifications