India Vs West Indies: ಟೀಂ ಇಂಡಿಯಾ ಆಡುವ ಬಳಗ, ಪಂದ್ಯದ ಸಮಯ, ನೇರಪ್ರಸಾರ ಮಾಹಿತಿ
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯನ್ನು ಗೆದ್ದ ಬಳಿಕ ಭಾರತ ಏಕದಿನ ಸರಣಿಯ ಮೊದಲ ಪಂದ್ಯವನ್ನಾಡಲು ಸಜ್ಜಾಗಿದೆ. ಜುಲೈ 27ರಂದು ಭಾರತ-ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ಇಂದು ಆರಂಭವಾಗಲಿದೆ.
ಬಾರ್ಬಡಾಸ್ನ ಕೆನ್ಸಿಂಗ್ಟನ್ ಓವಲ್ ಅಂಗಳದಲ್ಲಿ ಏಕದಿನ ಸರಣಿಯ ಮೊದಲ ಪಂದ್ಯ ನಡೆಯಲಿದೆ. ಭಾರತೀಯ ಕಾಲಮಾನ 7 ಗಂಟೆಗೆ ಪಂದ್ಯ ಆರಂಭವಾಗಲಿದೆ. 2023ರ ಏಕದಿನ ವಿಶ್ವಕಪ್ಗೆ ಭಾರತ ತಂಡದ ತಯಾರಿ ದೃಷ್ಟಿಯಿಂದ ಈ ಸರಣಿ ಮಹತ್ವದ್ದಾಗಿದೆ.

ಏಕದಿನ ವಿಶ್ವಕಪ್ಗೆ ಭಾರತ ತಂಡವನ್ನು ಆಯ್ಕೆ ಮಾಡುವ ದೃಷ್ಟಿಯಿಂದ ಈ ಸರಣಿ ಮಹತ್ವ ವಹಿಸಲಿದೆ. ವಿಶ್ವಕಪ್ಗೆ ಭಾರತ ಏಕದಿನ ತಂಡ ಪ್ಲೇಯಿಂಗ್ 11 ಅಂತಿಮಗೊಳಿಸಲು ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ಅವರಿಗೆ ಈ ಸರಣಿ ಸಹಕಾರಿಯಾಗಲಿವೆ.
ಭಾರತ ವಿಶ್ವಕಪ್ ಆರಂಭಕ್ಕೆ ಮುನ್ನ 12 ಏಕದಿನ ಪಂದ್ಯಗಳನ್ನು ಆಡಲಿದೆ. ಅದರಲ್ಲೂ ಪ್ರಮುಖ ಆಟಗಾರರು ಇಲ್ಲದೆ ವಿಶ್ವಕಪ್ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಬದಲೀ ಆಟಗಾರರನ್ನು ಅಂತಿಮಗೊಳಿಸುವುದು ಅವಶ್ಯಕವಾಗಿದೆ.
ರೋಹಿತ್ ಶರ್ಮಾ ಹೇಳಿದ್ದೇನು?
"ನಾವು ವೆಸ್ಟ್ ಇಂಡೀಸ್ ವಿರುದ್ಧ 3 ಏಕದಿನ ಪಂದ್ಯಗಳನ್ನು ಆಡಲಿದ್ದೇವೆ. ಏಷ್ಯಾಕಪ್ನಲ್ಲಿ 5-6 ಪಂದ್ಯಗಳನ್ನು ಆಡುತ್ತೇವೆ, ಅದಾದ ನಂತರ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಆಡಲಿದ್ದೇವೆ. ವಿಶ್ವಕಪ್ ಆರಂಭಕ್ಕೆ ಮುನ್ನ 11-12 ಏಕದಿನ ಪಂದ್ಯಗಳನ್ನು ಆಡುತ್ತೇವೆ. ಯಾವ ಆಟಗಾರರು ತಂಡದಲ್ಲಿ ಇರುತ್ತಾರೆ ಎಂದು ನಿರ್ಧರಿಸಲು ಇದು ಉತ್ತಮ ಸಮಯ. ಅನೇಕ ಹೊಸ ಆಟಗಾರರಿಗೆ ಆಡಲು ಅವಕಾಶ ನೀಡಲಾಗುತ್ತದೆ" ಎಂದು ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.
ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ ಮತ್ತು ರಿಷಬ್ ಪಂತ್ ತಂಡದಲ್ಲಿ ಇಲ್ಲದೇ ಪ್ರಮುಖ ಪಂದ್ಯಗಳನ್ನು ಆಡಲಿದೆ. ಪಂತ್ ಹೊರತುಪಡಿಸಿ ಉಳಿದ ಆಟಗಾರರು ಏಷ್ಯಾಕಪ್, ವಿಶ್ವಕಪ್ನಲ್ಲಿ ಆಡುವ ಸಾಧ್ಯತೆ ಕೂಡ ಇದೆ.
ಭಾರತ ತಂಡದ ಸಂಭಾವ್ಯ ಆಡುವ ಬಳಗ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್/ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಜಯದೇವ್ ಉನದ್ಕತ್, ಮುಖೇಶ್ ಕುಮಾರ್
ವೆಸ್ಟ್ ಇಂಡೀಸ್ ಸಂಭಾವ್ಯ ಆಡುವ ಬಳಗ
ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಕೀಸಿ ಕಾರ್ಟಿ, ಶಾಯ್ ಹೋಪ್ (ನಾಯಕ / ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ರೊಮಾರಿಯೋ ಶೆಫರ್ಡ್, ಕೆವಿನ್ ಸಿಂಕ್ಲೇರ್, ಅಲ್ಜಾರಿ ಜೋಸೆಫ್, ಓಶೇನ್ ಥಾಮಸ್, ಜೇಡನ್ ಸೀಲ್ಸ್ / ಯಾನಿಕ್ ಕ್ಯಾರಿಯಾ.
ಪಂದ್ಯ ವೀಕ್ಷಣೆ ಹೇಗೆ
ಭಾರತ - ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯವನ್ನು ಭಾರತದಲ್ಲಿ ದೂರದರ್ಶನ ಸ್ಪೋರ್ಟ್ಸ್ ಚಾನೆಲ್ನಲ್ಲಿ ಉಚಿತವಾಗಿ ವೀಕ್ಷಿಸಬಹುದು. ಜಿಯೋ ಸಿನಿಮಾ ಆಪ್ ಮತ್ತು ವೆಬ್ಸೈಟ್ನಲ್ಲಿ ಕೂಡ ಪಂದ್ಯದ ನೇರಪ್ರಸಾರವನ್ನು ವೀಕ್ಷಣೆ ಮಾಡಬಹುದಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications