Ind vs SA: ಯುವರಾಜ್ ಸಿಂಗ್, ರಾಹುಲ್ ಅಬ್ಬರ; ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
ವಡೋದರಾದ ಬಿಸಿಎ ಕ್ರೀಡಾಂಗಣದಲ್ಲಿ ನಡೆದ ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್ 2025 ಪಂದ್ಯದಲ್ಲಿ ಭಾರತ ಮಾರ್ಸರ್ಸ್ ತಂಡವು ದಕ್ಷಿಣ ಆಫ್ರಿಕಾ ಮಾಸ್ಟರ್ಸ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಯುವರಾಜ್ ಸಿಂಗ್, ರಾಹುಲ್ ಶರ್ಮಾ ಅವರ ಮಾರಕ ಬೌಲಿಂಗ್ ದಾಳಿಗೆ ಸಿಲುಕಿದ ದಕ್ಷಿಣ ಆಫ್ರಿಕಾ ಸುಲಭವಾಗಿ ಸೋಲೊಪ್ಪಿಕೊಂಡಿತು.
ಟಾಸ್ ಗೆದ್ದ ಇಂಡಿಯಾ ಮಾಸ್ಟರ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ಮಾಸ್ಟರ್ಸ್ 13.5 ಓವರ್ ಗಳಲ್ಲಿ 85 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ಹೆನ್ರಿ ಡೇವಿಡ್ಸ್ 28 ಎಸೆತಗಳಲ್ಲಿ 38 ರನ್ ಮತ್ತು ಡೇನ್ ವಿಲಾಸ್ 21 ರನ್ ಗಳಿಸಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟರ್ ಕೂಡ ಎರಡಂಕಿ ಸ್ಕೋರ್ ದಾಟಲಿಲ್ಲ.

ರಾಹುಲ್ ಶರ್ಮಾ 4 ಓವರ್ ಗಳಲ್ಲಿ 18 ರನ್ ಬಿಟ್ಟುಕೊಟ್ಟು 3 ವಿಕೆಟ್ ಪಡೆದರೆ, ಯುವರಾಜ್ ಸಿಂಗ್ 2 ಓವರ್ ಗಳಲ್ಲಿ 12 ರನ್ ಬಿಟ್ಟುಕೊಟ್ಟು 3 ವಿಕೆಟ್ ಪಡೆದುಕೊಂಡರು. ಪವನ್ ನೇಗಿ ಮತ್ತು ಸ್ಟುವರ್ಟ್ ಬಿನ್ನಿ ತಲಾ ಎರಡು ವಿಕೆಟ್ ಪಡೆದರು.
ರಾಯುಡು, ನೇಗಿ ಭರ್ಜರಿ ಬ್ಯಾಟಿಂಗ್
86 ರನ್ಗಳ ಸುಲಭ ಗುರಿಯನ್ನು ಬೆನ್ನಟ್ಟಿದ ಇಂಡಿಯಾ ಮಾಸ್ಟರ್ಸ್ 11 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 89 ರನ್ ಗಳಿಸುವ ಮೂಲಕ ಸುಲಭ ಗೆಲುವು ಸಾಧಿಸಿತು. ಅಂಬಾಟಿ ರಾಯುಡು 34 ಎಸೆತಗಳಲ್ಲಿ 7 ಬೌಂಡರಿ ಸಹಿತ 41 ರನ್ ಗಳಿಸಿದರು. ಸಚಿನ್ ತೆಂಡೂಲ್ಕರ್ 6 ರನ್ ಗಳಿಸಿದರು. ಇರ್ಫಾನ್ ಪಠಾನ್ 13 ರನ್ ಗಳಿಸಿದರೆ, ಪವನ್ ನೇಗಿ 12 ಎಸೆತಗಳಲ್ಲಿ 2 ಬೌಂಡರಿ 1 ಸಿಕ್ಸರ್ ಸಹಿತ ಅಜೇಯ 21 ರನ್ ಗಳಿಸುವ ಮೂಲಕ ಮಿಂಚಿದರು.
ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್ನಲ್ಲಿ ಇಂಡಿಯಾ ಮಾಸ್ಟರ್ಸ್ ಈವರೆಗೂ ಸೋಲನ್ನೇ ಕಂಡಿಲ್ಲ. ಆಡಿರುವ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈಗಾಗಲೇ ಶ್ರೀಲಂಕಾ, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ್ದು, ಮುಂದಿನ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ.
ಮಾರ್ಚ್ 5ರಂದು ಬುಧವಾರ ನಡೆಯಲಿರುವ ಪಂದ್ಯದಲ್ಲಿ ಇಂಡಿಯಾ ಮಾಸ್ಟರ್ಸ್ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಸಚಿನ್, ಯುವರಾಜ್ ಸಿಂಗ್, ಇರ್ಫಾನ್ ಪಠಾಣ್, ವಿನಯ್ ಕುಮಾರ್ ಅವರಂತಹ ದಿಗ್ಗಜ ಆಟಗಾರರು ಆಡುತ್ತಿದ್ದು ಅಭಿಮಾನಿಗಳ ಸಂಭ್ರಮಕ್ಕೆ ಪಾರವೇ ಇಲ್ಲದಂತಾಗಿದೆ.
-
RCB: ಆರ್ ಸಿಬಿ ತಂಡದ ಅಧಿಕೃತ ಪೇಮೆಂಟ್ಸ್ ಪಾಲುದಾರ ನವಿ ಯುಪಿಐ, ಫ್ಯಾನ್ಸ್ ಗಮನಿಸಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
IPL 2026 Full Schedule: ಐಪಿಎಲ್ 2026ರ ಸಂಪೂರ್ಣ ವೇಳಾಪಟ್ಟಿ ಪ್ರಕಟ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್












Click it and Unblock the Notifications