India vs Zimbabwe: ಜೈಸ್ವಾಲ್, ಗಿಲ್ ಅರ್ಧಶತಕ; ಸರಣಿ ಗೆದ್ದ ಭಾರತ
ಜಿಂಬಾಬ್ವೆಯ ಹರಾರೆಯಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯ 4ನೇ ಪಂದ್ಯದಲ್ಲಿ ಭಾರತ 10 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 3-1 ರಲ್ಲಿ ಮುನ್ನಡೆ ಸಾಧಿಸಿದ್ದು, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆ ಸರಣಿ ಗೆದ್ದುಕೊಂಡಿದೆ.
ಜಿಂಬಾಬ್ವೆ ನೀಡಿದ153 ರನ್ಗಳ ಗುರಿಯನ್ನು ಭಾರತ 15.2 ಓವರ್ ಗಳಲ್ಲಿ ಯಾವುದೇ ವಿಕೆಟ್ ಕಳೆದುಕೊಳ್ಳದೆ ಬೆನ್ನಟ್ಟುವ ಮೂಲಕ ಬೃಹತ್ ಗೆಲುವು ಸಾಧಿಸಿತು.

ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 152 ರನ್ ಗಳಿಸಿತು.
ವೆಸ್ಲಿ ಮಾಧೆವೆರೆ 25 ರನ್ ಗಳಿಸಿದರೆ, ಮರುಮನಿ 32 ರನ್ ಗಳಿಸಿದರು. ಬ್ರಿಯಾನ್ ಬೆನ್ನೆಟ್ 9 ರನ್ ಗಳಿಸಿದರು. ನಾಯಕ ಸಿಕಂದರ್ ರಝಾ 28 ಎಸೆತಗಳಲ್ಲಿ 46 ರನ್ ಗಳಿಸುವ ಮೂಲಕ ಜಿಂಬಾಬ್ವೆ ತಂಡ ಗೌರವಯುತ ಮೊತ್ತ ಕಲೆಹಾಕಲು ಕಾರಣವಾದರು.
ಖಲೀಲ್ ಅಹ್ಮದ್ 2 ವಿಕೆಟ್ ಪಡೆದರೆ, ತುಷಾರ್ ದೇಶಪಾಂಡೆ, ವಾಷಿಂಗ್ಟನ್ ಸುಂದರ್, ಅಭಿಷೇಕ್ ಶರ್ಮಾ ಮತ್ತು ಶಿವಂ ದುಬೆ ತಲಾ 1 ವಿಕೆಟ್ ಪಡೆದರು.
ಜೈಸ್ವಾಲ್ ಅರ್ಧಶತಕ
ಈ ಮೊತ್ತವನ್ನು ಬೆನ್ನತ್ತಿದ ಜಿಂಬಾಬ್ವೆ ಸ್ಫೋಟಕ ಆರಂಭ ಪಡೆಯಿತು. ಜಯಸ್ವಾಲ್ ಜಿಂಬಾಬ್ವೆ ಬೌಲರ್ ಗಳನ್ನು ಮನಬಂದಂತೆ ದಂಡಿಸಿದರು. 53 ಎಸೆತಗಳಲ್ಲಿ 13 ಬೌಂಡರಿ 2 ಭರ್ಜರಿ ಸಿಕ್ಸರ್ ಸಹಿತ 93 ರನ್ ಗಳಿಸಿದರು.
ನಾಯಕ ಶುಭಮನ್ ಗಿಲ್ ಆರಂಭದಲ್ಲಿ ಎಚ್ಚರಿಕೆಯಿಂದ ಆಡಿದರೆ, ಬಳಿಕ ಅವರ ಕೂಡ ಬೌಂಡರಿಗಳನ್ನು ಗಳಿಸಿದರು. 39 ಎಸೆತಗಳಲ್ಲಿ 6 ಬೌಂಡರಿ 2 ಸಿಕ್ಸರ್ ಸಹಿತ 58 ರನ್ ಗಳಿಸಿ ಮಿಂಚಿದರು.
ಇಬ್ಬರ ಅಮೋಘ ಆಟದ ನೆರವಿನಿಂದ ಭಾರತ ಯಾವುದೇ ವಿಕೆಟ್ ಕಳೆದುಕೊಳ್ಳದೆ ಗೆಲುವಿನ ಗುರಿ ಮುಟ್ಟಿತು. ಈ ಗೆಲುವಿನ ಮೂಲಕ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿಯನ್ನು ಗೆದ್ದುಕೊಂಡಿದೆ.
-
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ











Click it and Unblock the Notifications