ಭಾರತದ ಎದುರು ಮಾನ ಕಳೆದುಕೊಂಡ ಇಂಗ್ಲೆಂಡ್ ಕ್ರಿಕೆಟ್ ತಂಡ!
ಇಂಗ್ಲೆಂಡ್ ತಂಡ ಭಾರತದ ವಿರುದ್ಧ ಮತ್ತೊಂದು ಹೀನಾಯ ಸೋಲು ಕಂಡಿದೆ. ಭಾರತದ ಸ್ಪಿನ್ ಬೌಲಿಂಗ್ ಅಖಾಡದಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡವು ನರಳಾಡಿ ಹೋಗಿದೆ. ಸೋಲು ಸೋಲು ಹೀಗೆ ಸಾಲು ಸಾಲು ಸೋಲುಗಳಿಂದ ಬಳಲಿ ಬೆಂಡಾಗಿರುವ, ಇಂಗ್ಲೆಂಡ್ ತಂಡಕ್ಕೆ ಈಗ ಮತ್ತೊಂದು ಭೀಕರ ಆಘಾತ ಎದುರಾಗಿದೆ.
ಧರ್ಮಶಾಲಾ ಕ್ರಿಕೆಟ್ ಮೈದಾನದಲ್ಲಿ ಭಾರತದ ಎದುರು ಮತ್ತೊಮ್ಮೆ ಮಂಡಿಯೂರಿರುವ, ಇಂಗ್ಲೆಂಡ್ ಕ್ರಿಕೆಟ್ ತಂಡ ಇದೀಗ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಖಾಡದಲ್ಲಿ ಬಹುತೇಕ ಕೊನೆಯ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಯಾಕಂದ್ರೆ ಇಡೀ ಜಗತ್ತಿಗೆ ಕ್ರಿಕೆಟ್ ಪಾಠ ಮಾಡಿದ್ದ ಇದೇ ಇಂಗ್ಲೆಂಡ್ ತಂಡ ಇದೀಗ ಹೀನಾಯ ಸೋಲನ್ನು ಕಂಡಿದೆ. ಈಗಾಗಲೇ ಇದೇ ರೀತಿ ಸಾಲು ಸಾಲು ಸೋಲು ಕಂಡಿರುವ ಇಂಗ್ಲೆಂಡ್ ತಂಡ ಈಗ ಮತ್ತೊಮ್ಮೆ ಭಾರತ ತಂಡದ ಎದುರು ಮಂಡಿಯೂರಿದೆ. ಭಾರತದ ಎದುರು ಇನ್ನಿಂಗ್ಸ್ ಸೋಲಿನ ಮೂಲಕ ಮನೆ ಕಡೆ ನಡೆಯುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿ ತಳವೂರಿದೆ.

ಸೋಲಿನ ನಂತರ ಭಾರತದ ಅಬ್ಬರ!
ಇಂಗ್ಲೆಂಡ್ ವಿರುದ್ಧ 5 ಟೆಸ್ಟ್ ಪಂದ್ಯಗಳ ಸರಣಿ ಆರಂಭವಾದ ಸಮಯದಲ್ಲಿ ಭಾರತವು, ಭೀಕರ ಸೋಲು ಕಂಡಿತ್ತು. ಮೊದಲ ಪಂದ್ಯದಲ್ಲಿ ದೊಡ್ಡ ಹಿನ್ನಡೆ ಅನುಭವಿಸಿದ ರೋಹಿತ್ ಶರ್ಮಾ ಪಡೆ ಮತ್ತೆ ದೊಡ್ಡ ಕಂಬ್ಯಾಕ್ ಮಾಡಿತ್ತು. ಹೀಗೆ ಒಂದು ಸೋಲಿನ ನಂತರ ಮೂರು ಗೆಲುವನ್ನ ಸಾಧಿಸಿ, ಸರಣಿಯಲ್ಲಿ 3-1 ಅಂತರವನ್ನ ಕಾಪಾಡಿಕೊಂಡಿತ್ತು. ಹೀಗಾಗಿ 5ನೇ ಟೆಸ್ಟ್ ಪಂದ್ಯದಲ್ಲಿ ಗೆದ್ದೇ ಗೆಲ್ಲಬೇಕು ಅಂತಾ ಇಂಗ್ಲೆಂಡ್ ಅಖಾಡ ಪ್ರವೇಶ ಮಾಡಿತ್ತು. ಆದರೆ ಆಗಿದ್ದೆಲ್ಲಾ ಉಲ್ಟಾ, ಗೆಲುವು ಬಿಡಿ ಹೀನಾಯ ಸೋಲಿನಿಂದ ಬಚಾವ್ ಆಗಲು ಇಂಗ್ಲೆಂಡ್ ತಂಡ ಪರದಾಡಿತ್ತು!
ತರಗೆಲೆ ರೀತಿ ಹಾರಿಹೋದ ಇಂಗ್ಲೆಂಡ್
ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 218 ರನ್ ಗಳಿಸಿದ್ದ ಇಂಗ್ಲೆಂಡ್ ಪಡೆಗೆ ಮೊದಲೇ ಸೋಲಿನ ಸುಳಿವು ಸಿಕ್ಕಿತ್ತು. ಅದರಲ್ಲೂ ಭಾರತ ತಂಡ ಮೊದಲ ಇನ್ನಿಂಗ್ಸ್ನಲ್ಲಿ ಯಾವಾಗ ಭರ್ಜರಿ, 477 ರನ್ ಗಳಿಸಿತ್ತೋ ಅಲ್ಲಿಂದಲೇ ಇಂಗ್ಲೆಂಡ್ ತಂಡಕ್ಕೆ ಕಂಟಕ ಶುರುವಾಗಿತ್ತು. ಭಾರತದ ಬ್ಯಾಟಿಂಗ್ ಅಬ್ಬರ ತಡೆಯಲು ವಿಫಲವಾದ ಇಂಗ್ಲೆಂಡ್ ಟೀಂ, ಕೊನೆಗೆ ಭಾರತದ ಭರ್ಜರಿ ಸ್ಪಿನ್ ದಾಳಿಯನ್ನು ಎದುರಿಸುವಲ್ಲಿ ಕೂಡ ಎಡವಟ್ಟು ಮಾಡಿಕೊಂಡಿತ್ತು. ಹೀಗಾಗಿ ನೋಡ ನೋಡುತ್ತಲೇ ಇಂಗ್ಲೆಂಡ್ ತಂಡ ತರಗೆಲೆ ರೀತಿ ಹಾರಿ ಹೋಗಿದೆ.

2ನೇ ಇನ್ನಿಂಗ್ಸ್ನಲ್ಲಿ ಕೂಡ ಹೀನಾಯ ಪ್ರದರ್ಶನ ನೀಡಿರುವ ಇಂಗ್ಲೆಂಡ್ ತಂಡ 195 ರನ್ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಹೀನಾಯ ಸೋಲು ಕಂಡಿದೆ. ಈ ಮೂಲಕ ಇಂಗ್ಲೆಂಡ್ ವಿರುದ್ಧ ಭಾರತ ಕ್ರಿಕೆಟ್ ತಂಡ ಅತ್ಯದ್ಭುತ ಗೆಲುವು ದಾಖಲಿಸಿದೆ. ಕ್ರಿಕೆಟ್ ಜಗತ್ತಿನಲ್ಲಿ ಭಾರತದ ಶಕ್ತಿ ಏನು ಅನ್ನೋದು ಮತ್ತೆ ಗೊತ್ತಾಗಿದೆ. ಇನ್ನು ಈ ಬಾರಿ ಸರಣಿಯಲ್ಲಿ, ಭಾರತ ತಂಡದ ಪರ ಮಿಂಚಿದ್ದು ರವಿಚಂದ್ರನ್ ಅಶ್ವಿನ್ ಹಾಗೂ ಕುಲ್ದೀಪ್ ಯಾದವ್. ಹಾಗೇ ಬ್ಯಾಟಿಂಗ್ನಲ್ಲಿ, ಯಶಸ್ವಿ ಜೈಸ್ವಾಲ್ ಕೂಡ ಹೊಸ ಹೊಸ ದಾಖಲೆ ನಿರ್ಮಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications