Olympics: ಪದಕಕ್ಕೆ ಗುರಿ ಇಡುವ ವಿಶ್ವಾಸದಲ್ಲಿ ಆರ್ಚರಿ ತಂಡ
ಇನ್ನೇನು ಕೆಲವೇ ದಿನಗಳಲ್ಲಿ ವಿಶ್ವದಲ್ಲಿ ಒಲಿಂಪಿಕ್ಸ್ ಮೇಳೈಸಲಿದೆ. ವಿಶ್ವದ ಕ್ರೀಡಾ ಹಬ್ಬವನ್ನು ಬರ ಮಾಡಿಕೊಳ್ಳಲು ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಈ ಬಾರಿಯ ಒಲಿಂಪಿಕ್ಸ್ನಲ್ಲಿ ಭಾರತ ಸಹ ಹಲವು ವಿಭಾಗಗಳಲ್ಲಿ ತನ್ನ ಅದೃಷ್ಟ ಪರೀಕ್ಷೆ ನಡೆಸಲಿದೆ. ಭಾರತ ಈ ಬಾರಿ ಪದಕದ ಬೇಟೆಯನ್ನು ನಡೆಸುವ ಲೆಕ್ಕಾಚಾರವನ್ನು ಹಾಕಿಕೊಂಡಿದೆ. ಅದರಂತೆ ಈ ಬಾರಿ ಭಾರತ ಈ ಒಂದು ವಿಭಾಗದಿಂದ ಸಹ ಪದಕ ಗೆಲ್ಲುವ ವಿಶ್ವಾಸ ಹೊಂದಿದೆ.
ಒಲಿಂಪಿಕ್ಸ್ ಜುಲೈ 26 ರಿಂದ ಫ್ರಾನ್ಸ್ನ ರಾಜಧಾನಿಯಲ್ಲಿ ಪ್ರಾರಂಭವಾಗಲಿದೆ. ಇದರಲ್ಲಿ 117 ಕ್ರೀಡಾಪಟುಗಳ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಈ ಬಾರಿಯೂ ಕುಸ್ತಿ, ಬ್ಯಾಡ್ಮಿಂಟನ್, ಶೂಟಿಂಗ್ನಲ್ಲಿ ಪದಕದ ಆಸೆಯನ್ನು ಇಟ್ಟುಕೊಂಡಿದೆ. ಈ ಬಾರಿ ಭಾರತ ತಂಡ ಆರ್ಚರಿ ವಿಭಾಗದಲ್ಲೂ ಪದಕದ ಕನಸು ಕಾಣುತ್ತಿದೆ.

ಅಚ್ಚರಿ ಫಲಿತಾಂಶ ನೀಡುತ್ತಾ ಆರ್ಚರಿ
ಭಾರತ ತಂಡದ ಆರು ಆರ್ಚರಿ ಪಟುಗಳು ಪರ್ಫೆಕ್ಟ್ ಗುರಿಯನ್ನು ಇಟ್ಟಲ್ಲಿ ಪದಕದ ಕನಸು ನನಸಾಗುತ್ತದೆ. ಈ ವರೆಗೆ ಭಾರತ ಒಮ್ಮೆಯೂ ಆರ್ಚರಿಯಲ್ಲಿ ಪದಕವನ್ನು ಗೆದ್ದಿಲ್ಲ. ಹೀಗಾಗಿ ಈ ಬಾರಿ ಪದಕ ಬಾಚಿಕೊಳ್ಳುವ ವಿಶ್ವಾಸವನ್ನು ಹೊಂದಿದೆ. ಈ ಮಹಾ ಕೂಟದಲ್ಲಿ ಭಾರತದ 3 ಪುರುಷ ಮತ್ತು 3 ಮಹಿಳಾ ಆಟಗಾರರು ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಆರ್ಚರಿ ಸ್ಪರ್ಧೆಗೆ ತೆರಳಿದ್ದಾರೆ.
ಈ ಬಾರಿ ಟೂರ್ನಿಗೆ ಭಾರತ ಆರ್ಚರಿ ತಂಡವನ್ನು ಭರದ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಪ್ಯಾರಿಸ್ ಒಲಿಂಪಿಕ್ಸ್ಗೆ ಪುಣೆಯಲ್ಲಿ 10 ದಿನಗಳ ತರಬೇತಿ ಶಿಭಿರ ನಡೆಸಲಾಗಿತ್ತು. ಈ ಬಾರಿ ಒಲಿಂಪಿಕ್ಸ್ನಲ್ಲಿ ಆರ್ಚರಿ ತಂಡ ಪದಕಕ್ಕೆ ಗುರಿ ಇಡುವುದು ಪಕ್ಕಾ ಎಂದು ಹೇಳಲಾಗುತ್ತಿದೆ. 1988ರಲ್ಲಿ ಭಾರತ ಮೊದಲ ಬಾರಿಗೆ ಒಲಿಂಪಿಕ್ಸ್ನಲ್ಲಿ ಆರ್ಚರಿ ಸ್ಪರ್ಧೆಯಲ್ಲಿ ಭಾಗವಹಿಸಿತ್ತು ಆದರೆ ಇಲ್ಲಿಯವರೆಗೆ ಒಮ್ಮೆಯೂ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿರಲಿಲ್ಲ.
ಪದಕದ ಆಸೆ ಚಿಗುರಿಸಿದ ಕ್ರೀಡಾಪಟುಗಳು
ದೀಪಿಕಾ ಕುಮಾರಿ ಮತ್ತು ತರುಣ್ದೀಪ್ ಅವರು ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಆರ್ಚರಿ ಸ್ಪರ್ಧೆಯಲ್ಲಿ ಪದಕ ಗೆಲ್ಲುವ ನಿರೀಕ್ಷೆಯಿದೆ. ಟೋಕಿಯೊ ಒಲಿಂಪಿಕ್ಸ್ನಲ್ಲಿ ಆರ್ಚರಿ ಸ್ಪರ್ಧೆಯಲ್ಲಿ ಭಾಗವಹಿಸಿದ ಏಕೈಕ ಭಾರತೀಯ ಮಹಿಳೆ ಎಂದ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದ ದೀಪಿಕಾ ಮತ್ತು ಅವರು ಕ್ವಾರ್ಟರ್ ಫೈನಲ್ಗೆ ಮಾತ್ರ ತಲುಪುವಲ್ಲಿ ಯಶಸ್ವಿಯಾದರು. ಅಲ್ಲದೆ ಮಿಶ್ರ ಸ್ಪರ್ಧೆಯಲ್ಲೂ ಕ್ವಾರ್ಟರ್ ಫೈನಲ್ ತಲುಪಿದ್ದರು.
ದೀಪಿಕಾ ನಾಲ್ಕನೇ ಬಾರಿಗೆ ಒಲಿಂಪಿಕ್ಸ್ನಲ್ಲಿ ಭಾಗವಹಿಸಲಿರುವ ಕಾರಣ ಪದಕ ಗೆಲ್ಲಲು ಶಕ್ತಿಮೀರಿ ಪ್ರಯತ್ನಿಸಲಿದ್ದಾರೆ. ದೀಪಿಕಾ ಕುಮಾರಿ ಮತ್ತು ತರುಣದೀಪ್ ರೈ ಅವರಲ್ಲದೆ, ಭಾರತದಿಂದ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಆರ್ಚರಿ ಸ್ಪರ್ಧೆಯಲ್ಲಿ ಧೀರಜ್ ಬೊಮ್ಮದೇವರ, ಪ್ರವೀಣ್ ಜಾಧವ್, ಭಜನ್ ಕೌರ್ ಮತ್ತು ಅಂಕಿತಾ ಭಕತ್ ಅವರ ಹೆಸರುಗಳೂ ಸೇರಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications