ಈ ಸಲ ಕಪ್ ನಮ್ದೇ... 50 ವರ್ಷಗಳ ಇತಿಹಾಸ ಧೂಳ್ ಧೂಳ್ ಮಾಡಿದ ಭಾರತದ ಮಹಿಳಾ ಕ್ರಿಕೆಟ್ ತಂಡ... World Cup
ಕ್ರಿಕೆಟ್ ಆಟವನ್ನು ದೇವರು & ಧರ್ಮ ಎಂದು ಪೂಜಿಸುವ ಭಾರತದಲ್ಲಿ ಈಗ ಹೊಸ ಇತಿಹಾಸ ನಿರ್ಮಾಣ ಆಗಿದೆ. ಇಷ್ಟು ದಿನಗಳ ಕಾಲ ಪುರುಷರು ಅಂದ್ರೆ ಹುಡುಗರ ಕ್ರಿಕೆಟ್ ತಂಡ ದಾಖಲೆ ಮೇಲೆ ದಾಖಲೆ ನಿರ್ಮಾಣ ಮಾಡಿ ದೊಡ್ಡ ಹೆಸರು ಸಂಪಾದಿಸಿ, ಲಕ್ಷಾಂತರ ಕೋಟಿ ರೂಪಾಯಿ ಹಣ ಹರಿದು ಬರುವಂತೆ ಮಾಡುತ್ತಿದ್ದರು. ಆದರೆ ಇದೀಗ ಹುಡುಗರನ್ನೂ ಮೀರಿಸಲು ಮಹಿಳಾ ಕ್ರಿಕೆಟ್ ತಂಡ ಎಂಟ್ರಿ ಕೊಟ್ಟಿದೆ. ಅಂದಹಾಗೆ, ಈ ಸಲ ಕಪ್ ನಮ್ದೇ... 50 ವರ್ಷಗಳ ಇತಿಹಾಸ ಧೂಳ್ ಧೂಳ್ ಮಾಡಿದ ಭಾರತದ ಮಹಿಳಾ ಕ್ರಿಕೆಟ್ ತಂಡ...
ಹೌದು, ಕ್ರಿಕೆಟ್ ಇತಿಹಾಸದಲ್ಲೇ ಹೊಸ ದಾಖಲೆಯನ್ನು ಇದೀಗ ಭಾರತದ ಮಹಿಳಾ ಕ್ರಿಕೆಟ್ ತಂಡ ನಿರ್ಮಾಣ ಮಾಡಿದೆ. ಮೊದಲ ಬಾರಿಗೆ ಏಕದಿನ ಮಹಿಳಾ ವಿಶ್ವಕಪ್ ಟೂರ್ನಿಯು ಶುರುವಾಗಿದ್ದು 1973ರ ಸಮಯದಲ್ಲಿ. ಕ್ರಿಕೆಟ್ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿ ಮಾಡಿದ್ದ ಏಕದಿನ ಮಹಿಳಾ ವಿಶ್ವಕಪ್ ಟೂರ್ನಿ ಶುರುವಾಗಿ ಈಗಾಗಲೇ ಸುಮಾರು 50 ವರ್ಷ ಕಳೆದಿದೆ. ಈ 50 ವರ್ಷಗಳಲ್ಲಿ ಭಾರತದ ಮಹಿಳಾ ಕ್ರಿಕೆಟ್ ತಂಡ ಒಂದೇ ಒಂದು ವರ್ಲ್ಡ್ ಕಪ್ ಕೂಡ ಗೆದ್ದಿರಲಿಲ್ಲ. ಆದರೆ ಈ ಬಾರಿ ಭರ್ಜರಿಯಾಗಿ ಭಾರತದ ಮಹಿಳಾ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದು ಚಾಂಪಿಯನ್ ಆಗಿದೆ. ಈ ಮೂಲಕ 50 ವರ್ಷಗಳ ನಂತರ ಇತಿಹಾಸ ನಿರ್ಮಿಸಿದೆ.

ಸ್ಮೃತಿ ಅಬ್ಬರಕ್ಕೆ ಆಫ್ರಿಕಾ ಉಡೀಸ್!
ಅಂದಹಾಗೆ ಕನ್ನಡಿಗರ ಬೆಂಗಳೂರು ತಂಡ ಆರ್ಸಿಬಿ ನಾಯಕಿ ಸ್ಮೃತಿ ಮಂಧಾನ ಅವರ ಬ್ಯಾಟಿಂಗ್ ಅಬ್ಬರಕ್ಕೆ ಇದೀಗ ದಾಖಲೆಗಳೂ ಧೂಳ್ ಧೂಳ್ ಆಗಿ ಹೋಗಿವೆ. ಅದರಲ್ಲೂ 45 ರನ್ ಬಾರಿಸಿ 8 ಬೌಂಡರಿ ಚಚ್ಚಿದ ಆರ್ಸಿಬಿ ನಾಯಕಿ ಸ್ಮೃತಿ ಮಂಧಾನ ಅವರು ಭರ್ಜರಿಯಾಗಿ ಆರಂಭವೇ ಶತಕದ ಜೊತೆಯಾಟ ಆಡಿ ಭಾರತಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು.
ಈ ಮೂಲಕ, ಅಂತಿಮವಾಗಿ ಟೀಂ ಇಂಡಿಯಾ 298 ರನ್ ಗಳಿಸಿ ಸವಾಲಿನ ಮೊತ್ತವನ್ನೇ ದಕ್ಷಿಣ ಆಫ್ರಿಕಾಗೆ ನೀಡಿತ್ತು. ಮಳೆಯ ನಡುವೆ ಇನ್ನೇನು ಮ್ಯಾಚ್ ನಿಂತು ಹೋಗುತ್ತದೆ ಎನ್ನುವಾಗ ಇದು ಅಭಿಮಾನಿಗಳಿಗೆ ನೆಮ್ಮದಿ ನೀಡಿತ್ತು. ಮತ್ತೊಂದು ಕಡೆ 299 ರನ್ ಗುರಿಯನ್ನ ಬೆನ್ನುಹತ್ತಿದ್ದ ದಕ್ಷಿಣ ಆಫ್ರಿಕಾ ತಂಡ ಕೇವಲ 246 ರನ್ಗೆ ಎಲ್ಲಾ ವಿಕೆಟ್ ಕಳೆದುಕೊಂಡು ಆಲೌಟ್ ಆಗಿತ್ತು. ಹೀಗಾಗಿ ಭಾರತ ತಂಡ 50 ವರ್ಷಗಳ ದಾಖಲೆಯನ್ನು ಮುರಿದು ಹೊಸ ಇತಿಹಾಸ ನಿರ್ಮಾಣ ಮಾಡಿದೆ.
ಮಳೆ ಕಾಟದ ನಡುವೆ ಮ್ಯಾಚ್ ಶುರು!
ನಮ್ಮ ಮಹಿಳಾ ಕ್ರಿಕೆಟ್ ತಂಡ ಸೆಮಿಫೈನಲ್ ಅಖಾಡದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ ನೀಡಿದ್ದ ಭರ್ಜರಿ 339 ರನ್ಗಳ ಗುರಿಯನ್ನ ಸುಲಭವಾಗಿ ಬೆನ್ನುಹತ್ತಿ ಗೆದ್ದು ಬೀಗಿತ್ತು. ಈ ಮೂಲಕವೇ ಹೊಸ ಇತಿಹಾಸ ಕೂಡ ನಿರ್ಮಾಣ ಮಾಡಿತ್ತು. ಆದ್ರೆ ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್ ಮ್ಯಾಚ್ ಆಡಲು ಇಂಡಿಯನ್ ವುಮೆನ್ಸ್ ಕ್ರಿಕೆಟ್ ಟೀಂ ಸಜ್ಜಾಗಿತ್ತು. ಆದರೆ ಇಂತಹ ಸಮಯದಲ್ಲೇ 2025 ಮಹಿಳೆಯರ ಕ್ರಿಕೆಟ್ ವರ್ಲ್ಡ್ ಕಪ್ ಫೈನಲ್ ಪಂದ್ಯಕ್ಕೆ ಮಳೆ ಕಾಟ ಎದುರಾಗಿತ್ತು. ಆದರೆ ಅಂತಿಮವಾಗಿ ಮಳೆ ಬ್ರೇಕ್ ಕೊಟ್ಟ ಕಾರಣಕ್ಕೆ ಮ್ಯಾಚ್ ಶುರುವಾಗಿತ್ತು. ಕ್ರಿಕೆಟ್ ದೇವರು ಸಚಿನ್ ಬಂದ ಕಾರಣಕ್ಕೆ ಈ ರೀತಿ ಮಳೆ ನಿಂತಿದೆ ಅನ್ನೋ ಮಾತನ್ನೂ ಅಭಿಮಾನಿಗಳು ಹೇಳಿದರು. ಅಂತಿಮವಾಗಿ ಭಾರತದ ತಂಡ ವಿಶ್ವಕಪ್ ಗೆದ್ದು ಬೀಗಿತ್ತು...
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications