270 ರನ್ಗೆ ಹರಿಣಗಳು ಉಡೀಸ್, ಭಾರತದ ಬೌಲಿಂಗ್ ದಾಳಿ ಎದುರು ದಕ್ಷಿಣ ಆಫ್ರಿಕಾ ಧೂಳಿಪಟ... Virat Kohli
ಭಾರತ ಕ್ರಿಕೆಟ್ ತಂಡದ ಬೌಲರ್ಗಳ ಅಬ್ಬರದ ಎದುರು ಹರಿಣಗಳ ಬ್ಯಾಟಿಂಗ್ ಪಡೆ ಇಂದು ಶೇಕ್ ಆಗಿ ಹೋಗಿತ್ತು. ಮೊದಲ ಹಾಗೂ 2ನೇ ಏಕದಿನ ಪಂದ್ಯಗಳಲ್ಲಿ ಅಬ್ಬರಿಸಿದ್ದ ದಕ್ಷಿಣ ಆಫ್ರಿಕಾದ ಬ್ಯಾಟಿಂಗ್ ಪಡೆ ಇವತ್ತು ಭಾರತೀಯ ಬೌಲರ್ಗಳ ಆರ್ಭಟದ ಎದುರು ಪೆವಿಲಿಯನ್ ಪರೇಡ್ಗೆ ಮೊರೆ ಹೋಗಿತ್ತು. ಮೊದಲ ಓವರ್ನಲ್ಲೇ ಒಂದು ವಿಕೆಟ್ ಕಳೆದುಕೊಂಡು, ಆ ನಂತರ ಒಂದಿಷ್ಟು ಚೇತರಿಕೆ ಕಂಡರೂ ಮತ್ತೆ ಸಾಲು ಸಾಲು ವಿಕೆಟ್ ಉರುಳಿದ ಪರಿಣಾಮವಾಗಿ ದಕ್ಷಿಣ ಆಫ್ರಿಕಾ ತಂಡ ನಲುಗಿ ಹೋಗಿತ್ತು.
ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ 2-0 ಅಂತರದಲ್ಲಿ ಟೆಸ್ಟ್ ಸರಣಿ ಸೋತು ಹೋದ ನಂತರ ಸೇಡು ತೀರಿಸಿಕೊಳ್ಳಲು ಏಕದಿನ ಸರಣಿಯಲ್ಲಿ 3-0 ಅಂತರದಲ್ಲಿ ಭರ್ಜರಿ ಗೆಲುವು ಗ್ಯಾರಂಟಿ ಅಂತಾ ಅಭಿಮಾನಿಗಳು ಚರ್ಚೆ ಮಾಡುತ್ತಿದ್ದರು. ಆದರೆ ಮೊದಲ ಏಕದಿನ ಪಂದ್ಯ ಗೆದ್ದ ಭಾರತ ತಂಡ 2ನೇ ಏಕದಿನ ಪಂದ್ಯದಲ್ಲಿ 359 ರನ್ ಬೃಹತ್ ಟಾರ್ಗೆಟ್ ಕೊಟ್ಟಿದ್ದರೂ ರೋಚಕ ಸೋಲೇ ಸಿಕ್ಕಿತ್ತು. ಹೀಗಿದ್ದಾಗ 3ನೇ ಹಾಗೂ ಕೊನೆಯ ಏಕದಿನ ಪಂದ್ಯ ಗೆದ್ದು ಸರಣಿ ವಶಕ್ಕೆ ಪಡೆಯಲು ಭಾರತದ ಆಟಗಾರರು ಅಖಾಡ ಪ್ರವೇಶ ಮಾಡಿದ್ದರು. ಇಂತಹ ಸ್ಥಿತಿಯಲ್ಲಿ ಇದೀಗ ಸೌತ್ ಆಫ್ರಿಕಾ ಸೋತು ಹೋಗುವುದು ಬಹುತೇಕ ಗ್ಯಾರಂಟಿ ಆಗಿದೆ.

270 ರನ್ಗೆ ಹರಿಣಗಳು ಉಡೀಸ್!
ಹೌದು, ದೊಡ್ಡ ದೊಡ್ಡ ಸ್ಟಾರ್ ಬ್ಯಾಟರ್ಸ್ ಇದ್ದರೂ ಇವತ್ತು ದಕ್ಷಿಣ ಆಫ್ರಿಕಾ ತಂಡ ಪರದಾಡಿ ಹೋಗಿತ್ತು. ನಿಗದಿತ 50 ಓವರ್ಗಳ ಪೈಕಿ ಕೇವಲ 47.5 ಓವರ್ ಆಡಿದ ದಕ್ಷಿಣ ಆಫ್ರಿಕಾ ತಂಡ 270 ರನ್ಗೆ ಆಲೌಟ್ ಆಗಿ ಪೆವಿಲಿಯನ್ ಸೇರಿತು. ದಕ್ಷಿಣ ಆಫ್ರಿಕಾ ತಂಡದ ಪರವಾಗಿ ಡಿಕಾಕ್ 106 ರನ್ ಹಾಗೂ ಟೆಂಬಾ ಬವುಮಾ 48 ರನ್ ಗಳಿಸಿದ್ದು ಬಿಟ್ಟರೆ ಇನ್ಯಾರೂ ಸರಿಯಾಗಿ ಆಡಲೇ ಇಲ್ಲ. ಈ ಮೂಲಕ ಭಾರತದ ಪರವಾಗಿ ಕನ್ನಡಿಗ ಪ್ರಸಿದ್ಧ್ ಕೃಷ್ಣ 4 ವಿಕೆಟ್ ಹಾಗೂ ಕುಲ್ದೀಪ್ ಯಾದವ್ 4 ವಿಕೆಟ್ ಪಡೆದು ಮಿಂಚಿದರು.
20 ಪಂದ್ಯ ಸೋಲಿನ ನಂತರ...
2023 ಏಕದಿನ ವಿಶ್ವಕಪ್ ನಂತರ ಭಾರತ ತಂಡ ಸತತ 20 ಪಂದ್ಯಗಳಲ್ಲಿ ಟಾಸ್ ಸೋತು ಹೋಗಿತ್ತು. ಅಲ್ಲದೆ ಭಾರತ ತಂಡಕ್ಕೆ ಟಾಸ್ ಸೋಲಿನ ವಿಚಾರ ದೊಡ್ಡ ತಲೆನೋವು ತರಿಸುವ ಜೊತೆಗೆ ಬೇಡದ ದಾಖಲೆ ಕೂಡ ಸೃಷ್ಟಿ ಆಗಿತ್ತು. ಹೀಗಿದ್ದಾಗ ಸತತ 20 ಪಂದ್ಯ ಸೋಲಿನ ನಂತರ ಟಾಸ್ ವಿಚಾರದಲ್ಲಿ ಭಾರತಕ್ಕೆ ಇಂದು ಭರ್ಜರಿ ಜಯ ಸಿಕ್ಕಿತ್ತು. ಹರಿಣಗಳು ಅಂದ್ರೆ ದಕ್ಷಿಣ ಆಫ್ರಿಕಾ ವಿರುದ್ಧ 3ನೇ ಮತ್ತು ಕೊನೆಯ ಒನ್ ಡೇ ಮ್ಯಾಚ್ ಅಖಾಡದಲ್ಲಿ ಭಾರತ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಭಾರತ ಕೈಗೊಂಡಿದ್ದ ಇದೇ ನಿರ್ಧಾರವು ಈಗ ಪ್ಲಸ್ ಪಾಯಿಂಟ್ ಆಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications