270 ರನ್ಗೆ ಹರಿಣಗಳು ಉಡೀಸ್, ಭಾರತದ ಬೌಲಿಂಗ್ ದಾಳಿ ಎದುರು ದಕ್ಷಿಣ ಆಫ್ರಿಕಾ ಧೂಳಿಪಟ... Virat Kohli
ಭಾರತ ಕ್ರಿಕೆಟ್ ತಂಡದ ಬೌಲರ್ಗಳ ಅಬ್ಬರದ ಎದುರು ಹರಿಣಗಳ ಬ್ಯಾಟಿಂಗ್ ಪಡೆ ಇಂದು ಶೇಕ್ ಆಗಿ ಹೋಗಿತ್ತು. ಮೊದಲ ಹಾಗೂ 2ನೇ ಏಕದಿನ ಪಂದ್ಯಗಳಲ್ಲಿ ಅಬ್ಬರಿಸಿದ್ದ ದಕ್ಷಿಣ ಆಫ್ರಿಕಾದ ಬ್ಯಾಟಿಂಗ್ ಪಡೆ ಇವತ್ತು ಭಾರತೀಯ ಬೌಲರ್ಗಳ ಆರ್ಭಟದ ಎದುರು ಪೆವಿಲಿಯನ್ ಪರೇಡ್ಗೆ ಮೊರೆ ಹೋಗಿತ್ತು. ಮೊದಲ ಓವರ್ನಲ್ಲೇ ಒಂದು ವಿಕೆಟ್ ಕಳೆದುಕೊಂಡು, ಆ ನಂತರ ಒಂದಿಷ್ಟು ಚೇತರಿಕೆ ಕಂಡರೂ ಮತ್ತೆ ಸಾಲು ಸಾಲು ವಿಕೆಟ್ ಉರುಳಿದ ಪರಿಣಾಮವಾಗಿ ದಕ್ಷಿಣ ಆಫ್ರಿಕಾ ತಂಡ ನಲುಗಿ ಹೋಗಿತ್ತು.
ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ 2-0 ಅಂತರದಲ್ಲಿ ಟೆಸ್ಟ್ ಸರಣಿ ಸೋತು ಹೋದ ನಂತರ ಸೇಡು ತೀರಿಸಿಕೊಳ್ಳಲು ಏಕದಿನ ಸರಣಿಯಲ್ಲಿ 3-0 ಅಂತರದಲ್ಲಿ ಭರ್ಜರಿ ಗೆಲುವು ಗ್ಯಾರಂಟಿ ಅಂತಾ ಅಭಿಮಾನಿಗಳು ಚರ್ಚೆ ಮಾಡುತ್ತಿದ್ದರು. ಆದರೆ ಮೊದಲ ಏಕದಿನ ಪಂದ್ಯ ಗೆದ್ದ ಭಾರತ ತಂಡ 2ನೇ ಏಕದಿನ ಪಂದ್ಯದಲ್ಲಿ 359 ರನ್ ಬೃಹತ್ ಟಾರ್ಗೆಟ್ ಕೊಟ್ಟಿದ್ದರೂ ರೋಚಕ ಸೋಲೇ ಸಿಕ್ಕಿತ್ತು. ಹೀಗಿದ್ದಾಗ 3ನೇ ಹಾಗೂ ಕೊನೆಯ ಏಕದಿನ ಪಂದ್ಯ ಗೆದ್ದು ಸರಣಿ ವಶಕ್ಕೆ ಪಡೆಯಲು ಭಾರತದ ಆಟಗಾರರು ಅಖಾಡ ಪ್ರವೇಶ ಮಾಡಿದ್ದರು. ಇಂತಹ ಸ್ಥಿತಿಯಲ್ಲಿ ಇದೀಗ ಸೌತ್ ಆಫ್ರಿಕಾ ಸೋತು ಹೋಗುವುದು ಬಹುತೇಕ ಗ್ಯಾರಂಟಿ ಆಗಿದೆ.

270 ರನ್ಗೆ ಹರಿಣಗಳು ಉಡೀಸ್!
ಹೌದು, ದೊಡ್ಡ ದೊಡ್ಡ ಸ್ಟಾರ್ ಬ್ಯಾಟರ್ಸ್ ಇದ್ದರೂ ಇವತ್ತು ದಕ್ಷಿಣ ಆಫ್ರಿಕಾ ತಂಡ ಪರದಾಡಿ ಹೋಗಿತ್ತು. ನಿಗದಿತ 50 ಓವರ್ಗಳ ಪೈಕಿ ಕೇವಲ 47.5 ಓವರ್ ಆಡಿದ ದಕ್ಷಿಣ ಆಫ್ರಿಕಾ ತಂಡ 270 ರನ್ಗೆ ಆಲೌಟ್ ಆಗಿ ಪೆವಿಲಿಯನ್ ಸೇರಿತು. ದಕ್ಷಿಣ ಆಫ್ರಿಕಾ ತಂಡದ ಪರವಾಗಿ ಡಿಕಾಕ್ 106 ರನ್ ಹಾಗೂ ಟೆಂಬಾ ಬವುಮಾ 48 ರನ್ ಗಳಿಸಿದ್ದು ಬಿಟ್ಟರೆ ಇನ್ಯಾರೂ ಸರಿಯಾಗಿ ಆಡಲೇ ಇಲ್ಲ. ಈ ಮೂಲಕ ಭಾರತದ ಪರವಾಗಿ ಕನ್ನಡಿಗ ಪ್ರಸಿದ್ಧ್ ಕೃಷ್ಣ 4 ವಿಕೆಟ್ ಹಾಗೂ ಕುಲ್ದೀಪ್ ಯಾದವ್ 4 ವಿಕೆಟ್ ಪಡೆದು ಮಿಂಚಿದರು.
20 ಪಂದ್ಯ ಸೋಲಿನ ನಂತರ...
2023 ಏಕದಿನ ವಿಶ್ವಕಪ್ ನಂತರ ಭಾರತ ತಂಡ ಸತತ 20 ಪಂದ್ಯಗಳಲ್ಲಿ ಟಾಸ್ ಸೋತು ಹೋಗಿತ್ತು. ಅಲ್ಲದೆ ಭಾರತ ತಂಡಕ್ಕೆ ಟಾಸ್ ಸೋಲಿನ ವಿಚಾರ ದೊಡ್ಡ ತಲೆನೋವು ತರಿಸುವ ಜೊತೆಗೆ ಬೇಡದ ದಾಖಲೆ ಕೂಡ ಸೃಷ್ಟಿ ಆಗಿತ್ತು. ಹೀಗಿದ್ದಾಗ ಸತತ 20 ಪಂದ್ಯ ಸೋಲಿನ ನಂತರ ಟಾಸ್ ವಿಚಾರದಲ್ಲಿ ಭಾರತಕ್ಕೆ ಇಂದು ಭರ್ಜರಿ ಜಯ ಸಿಕ್ಕಿತ್ತು. ಹರಿಣಗಳು ಅಂದ್ರೆ ದಕ್ಷಿಣ ಆಫ್ರಿಕಾ ವಿರುದ್ಧ 3ನೇ ಮತ್ತು ಕೊನೆಯ ಒನ್ ಡೇ ಮ್ಯಾಚ್ ಅಖಾಡದಲ್ಲಿ ಭಾರತ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಭಾರತ ಕೈಗೊಂಡಿದ್ದ ಇದೇ ನಿರ್ಧಾರವು ಈಗ ಪ್ಲಸ್ ಪಾಯಿಂಟ್ ಆಗಿದೆ.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications