ಅಫ್ಘಾನಿಸ್ತಾನ್ ವಿರುದ್ಧ 'ವಿರಾಟ್' ರೂಪ ತೋರಿದ ಕೊಹ್ಲಿ ಸೆಂಚೂರಿ ಯಾರಿಗೆ ಅರ್ಪಣೆ?
ನವದೆಹಲಿ, ಸೆಪ್ಟೆಂಬರ್ 8: ದುಬೈ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ವಿರಾಟ್ ರೂಪ ತೋರಿದ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಏಷ್ಯಾ ಕಪ್ 2022ರ ಸೂಪರ್ ಫೋರ್ ಮುಖಾಮುಖಿಯಲ್ಲಿ ವಿರಾಟ್ ಕೊಹ್ಲಿ ಅಫ್ಘಾನಿಸ್ತಾನದ ವಿರುದ್ಧ ತಮ್ಮ 71ನೇ ಶತಕ ಸಿಡಿಸಿದ್ದು, ಟೀಮ್ ಇಂಡಿಯಾಗೆ ಗೆಲುವಿನ ಉಡುಗೊರೆ ನೀಡಿದ್ದಾರೆ.
83 ಇನ್ನಿಂಗ್ಸ್ ಆಡಿದ ವಿರಾಟ್ ಕೊಹ್ಲಿ ಬರೋಬ್ಬರ 1020 ದಿನಗಳ ನಂತರದಲ್ಲಿ ಮೊದಲ ಬಾರಿಗೆ ಭರ್ಜರಿಯಾಗಿ ಬ್ಯಾಟ್ ಬೀಸಿದ್ದು, 100 ಗಡಿ ದಾಟಿದ್ದಾರೆ. ಶತಕದ ಜೊತೆಗೆ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ, ತನ್ನ ಶತಕವನ್ನು ಪತ್ನಿ ಅನುಷ್ಕಾ ಶರ್ಮಾ ಹಾಗೂ ಪುತ್ರಿ ವಾಮಿಕಾಗೆ ಅರ್ಪಿಸಿದ್ದಾರೆ.

ನಾನು ಈ ಶತಕವನ್ನು ನನ್ನ ಹೆಂಡತಿ ಮತ್ತು ನನ್ನ ಮಗಳಿಗೆ ಅರ್ಪಿಸುತ್ತೇನೆ ಎಂದು ಖಾಸಗಿ ವಾಹನಿಗೆ ನೀಡಿದ ಸಂದರ್ಶನದಲ್ಲಿ ವಿರಾಟ್ ಕೊಹ್ಲಿ ಹೇಳಿಕೆ ನೀಡಿದ್ದಾರೆ. ಇನ್ನೊಂದು ಕಡೆ ವಿರಾಟ್ ಆಟಕ್ಕೆ ಭೇಷ್ ಭೇಷ್ ಎನ್ನುತ್ತಿರುವ ಅಭಿಮಾನಿಗಳು ಕುಣಿದು ಕುಪ್ಪಳಿಸುತ್ತಿದ್ದಾರೆ.
ಭಾರತಕ್ಕೆ ಭರ್ಜರಿ ಓಪನಿಂಗ್:
ಮೊದಲು ಬ್ಯಾಟಿಂಗ್ ನಡೆಸಿದ ಟೀಮ್ ಇಂಡಿಯಾಗೆ ವಿರಾಟ್ ಕೊಹ್ಲಿ ಭರ್ಜರಿ ಆರಂಭ ಒದಗಿಸಿಕೊಟ್ಟರು. ಕೊನೆಯವರೂ ಕ್ರೀಡಾಂಗಣದಲ್ಲಿ ಬಿರುಗಾಳಿಯಂತೆ ಅಬ್ಬರಿಸಿದ ಕಿಂಗ್ ಕೊಹ್ಲಿ, ಕ್ರೀಡಾಂಗಣದ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದರು. ನಿಗದಿತ 20 ಓವರ್ ಗಳಲ್ಲಿ ಭಾರತವು 2 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿತು. ಇದರಲ್ಲಿ 61 ಎಸೆತವನ್ನು ಎದುರಿಸಿದ ವಿರಾಟ್ ಕೊಹ್ಲಿ 6 ಸಿಕ್ಸರ್, 12 ಬೌಂಡರಿ ಸೇರಿದಂತೆ ಒಟ್ಟು 122 ರನ್ ಬಾರಿಸಿದರು. ನಾಯಕ ಕೆಎಲ್ ರಾಹುಲ್ 62 ರನ್ ಗಳಿಸಿದರೆ, ರಿಷಬ್ ಪಂತ್ ಅಜೇಯ 20 ರನ್ ಬಾರಿಸಿದರು.
ಭಾರತದ ಎದುರು ವೈಫಲ್ಯ ಅನುಭವಿಸಿದ ಅಫ್ಘಾನಿಸ್ತಾನ:
ಇತ್ತೀಚಿಗೆ ಪಾಕಿಸ್ತಾನ್ ಎದುರಿನ ಪಂದ್ಯದಲ್ಲಿ ಬೊಂಬಾಟ್ ಪ್ರದರ್ಶನ ತೋರಿದ ಅಫ್ಘಾನಿಸ್ತಾನದ ಆಟಗಾರರು ಭಾರತದ ಎದುರು ಮುಗ್ಗರಿಸಿದರು. ಬೌಲಿಂಗ್ ವಿಭಾಗದಲ್ಲಿ ಎಡವಿಡ ತಂಡವು ಬ್ಯಾಟಿಂಗ್ ನಲ್ಲೂ ಅಷ್ಟಾಗಿ ಮಿಂಚಲಿಲ್ಲ. 20 ಓವರ್ ಆಡಿದ ಅಫ್ಘಾನಿಸ್ತಾನದ ಆಟಗಾರರು ಒಟ್ಟಾಗಿ ಗಳಿಸಲು ಸಾಧ್ಯವಾಗಿದ್ದು ಮಾತ್ರ 111 ರನ್. ಅಷ್ಟರಲ್ಲೇ 8 ವಿಕೆಟ್ ಕಳೆದುಕೊಂಡ ತಂಡವು ಭಾರತದ ಎದುರು ಸೋಲೊಪ್ಪಿಕೊಂಡಿತು. ಅಫ್ಘಾನಿಸ್ತಾನದ ಪರವಾಗಿ ಇಬ್ರಾಹಿಂ ಜದ್ರಾನ್ 64 ರನ್ ಗಳಿಸಿದರೆ, ರಶೀದ್ ಖಾನ್ 15, ಮಜೀಬ್ 18 ರನ್ ಬಾರಿಸಿದರು. ಇದರ ಹೊರತಾಗಿ ಯಾವೊಬ್ಬ ಆಟಗಾರರು ಎರಡಂಕಿ ರನ್ ಗಳಿಸಲಿಲ್ಲ.
-
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications