Kho Kho World Cup: ಖೋ ಖೋಗೆ ಭಾರತವೇ ವಿಶ್ವ ಚಾಂಪಿಯನ್
ಮೊದಲ ಖೋ ಕೋ ವಿಶ್ವಕಪ್ನಲ್ಲಿ ಭಾರತಕ್ಕೆ ಭಾನುವಾರ ಡಬಲ್ ಖುಷಿ ಸಿಕ್ಕಿದೆ. ಮೊದಲು ಮಹಿಳಾ ತಂಡ ವಿಶ್ವಕಪ್ ಫೈನಲ್ನಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಚೊಚ್ಚಲ ಪ್ರಶಸ್ತಿ ಗೆದ್ದುಕೊಂಡಿದ್ದು, ಬಳಿಕ ಭಾರತ ಪುರುಷರ ತಂಡ ಕೂಡ ಫೈನಲ್ನಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ವಿಶ್ವ ಚಾಂಪಿಯನ್ ಆಗಿದೆ.
ದೆಹಲಿಯ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ಖೋ ಖೋ ಫೈನಲ್ ಪಂದ್ಯಗಳು ನಡೆದವು. ಮೊದಲು ನಡೆದ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವು ನೇಪಾಳ ವಿರುದ್ಧ 78-40ರ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿತು.

ಜನವರಿ 13 ರಿಂದ 19ರವರೆಗೆ ಖೋ ಖೋ ವಿಶ್ವಕಪ್ ಪಂದ್ಯಾವಳಿ ನಡೆಯಿತು. ಇದೇ ಮೊದಲ ಬಾರಿಗೆ ನಡೆದ ಖೋ ಖೋ ವಿಶ್ವಕಪ್ ಭರ್ಜರಿ ಯಶಸ್ಸು ಕಂಡಿದೆ. ಪಂದ್ಯಾವಳಿಯಲ್ಲಿ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ 39 ತಂಡಗಳು ಭಾಗವಹಿಸಿದ್ದವು. ಪುರುಷರ ಪಂದ್ಯಾವಳಿಯಲ್ಲಿ 20 ತಂಡಗಳು ಭಾಗವಹಿಸಿದ್ದು ನಾಲ್ಕು ಗುಂಪುಗಳಾಗಿ ಮಾಡಲಾಗಿತ್ತು. ಮಹಿಳಾ ವಿಭಾಗದಲ್ಲಿ 19 ತಂಡಗಳನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಲಾಗಿತ್ತು.
ಪಂದ್ಯಾವಳಿಯಲ್ಲಿ ಪುರುಷ ತಂಡದ ಪ್ರಾಬಲ್ಯ
ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಪುರುಷರ ತಂಡವು ನೇಪಾಳವನ್ನು 54-36 ಅಂತರದಲ್ಲಿ ಸೋಲಿಸಿ ಭರ್ಜರಿ ಗೆಲುವು ಸಾಧಿಸಿತು. ನಾಯಕ ಪ್ರತೀಕ್ ವೈಕರ್ ಮತ್ತು ರಾಮ್ಜಿ ಕಶ್ಯಪ್ ಅವರ ಡೈವ್ಗಳಿಂದ ಭಾರತ ಮೊದಲ ಸರದಿಯಲ್ಲಿ 26-0 ಅಂಕ ಗಳಿಸುವ ಮೂಲಕ ಉತ್ತಮ ಆರಂಬ ಪಡೆಯಿತು.
ಆದಿತ್ಯ ಗನ್ಪುಲೆ ಭಾರತ ಮುನ್ನಡೆ ಪಡೆಯುವಲ್ಲಿ ನಿರ್ಣಾಯಕ ಪಾತ್ರ ವಹಿಸಿದರು, ಬಳಿಕ ವೈಕರ್ಗೆ ಬೆಂಬಲ ನೀಡಿದರು. ನೇಪಾಳ ಚೇತರಿಸಿಕೊಳ್ಳಲು ಪ್ರಯತ್ನಿಸಿದರೂ, ಸಚಿನ್ ಭಾರ್ಗೊ ಮತ್ತು ಇತರರ ಸಂಘಟಿತ ಪ್ರಯತ್ನದಿಂದ ಭಾರತದ ಗೆಲುವು ಖಚಿತವಾಯಿತು. ಭಾರತ ಗುಂಪು ಹಂತಗಳಲ್ಲಿ ಬ್ರೆಜಿಲ್, ಪೆರು, ಭೂತಾನ್ ಮತ್ತು ಬಾಂಗ್ಲಾದೇಶ ವಿರುದ್ಧ ಗೆಲುವು ಸಾಧಿಸಿದರೆ, ಬಳಿಕ ಸೆಮಿಫೈನಲ್ನಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾವನ್ನು ಸೋಲಿಸಿತು.
ಮಹಿಳಾ ತಂಡದ ಭರ್ಜರಿ ಆಟ
ಭಾರತ ಮಹಿಳಾ ತಂಡ ಫೈನಲ್ನಲ್ಲಿ ನೇಪಾಳದ ವಿರುದ್ಧ 78-40 ರ ಅಂತರದ ಗೆಲುವು ಸಾಧಿಸಿತು. ನಾಯಕಿ ಪ್ರಿಯಾಂಕಾ ಇಂಗ್ಲೆ ಮುನ್ನಡೆ ಸಾಧಿಸಿದರು, ಮೊದಲ ಸರದಿಯಲ್ಲಿ ಹಲವು ಟಚ್ ಪಾಯಿಂಟ್ಗಳನ್ನು ಗಳಿಸಿದರು. ಚೈತ್ರ ಬಿ ಕೂಡ ಭಾರತ ಮುನ್ನಡೆ ಪಡೆದುಕೊಳ್ಳುವಲ್ಲಿ ಮಹತ್ವದ ಪಾತ್ರ ವಹಿಸಿದರು.
ಗುಂಪು ಹಂತದಲ್ಲಿ ಭಾರತ ಮಹಿಳಾ ತಂಡವು ದಕ್ಷಿಣ ಕೊರಿಯಾ, ಇರಾನ್ ಮತ್ತು ಮಲೇಷ್ಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿತ್ತು, ನಾಕೌಟ್ ಸುತ್ತುಗಳಲ್ಲಿ ಬಾಂಗ್ಲಾದೇಶ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಜಯ ಸಾಧಿಸಿತು.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್








Click it and Unblock the Notifications