ಭಾರತೀಯ ಕ್ರಿಕೆಟರ್, ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ಗೆ ಗೌರವ ಡಾಕ್ಟರೇಟ್
ಬೆಂಗಳೂರು, ನವೆಂಬರ್ 16: ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಹಾಗೂ ಕನ್ನಡತಿಯಾಗಿರುವ ವಿಜಯಪುರದ ರಾಜೇಶ್ವರಿ ಗಾಯಕ್ವಾಡ್ಗೆ ಗೌರವ ಡಾಕ್ಟರೇಟ್ ದೊರೆತಿದೆ. ರಾಜೇಶ್ವರಿಗೆ ರಾಜಸ್ಥಾನದ ಉದಯಪುರ ಎಸ್ಪಿಎಸ್ಯು ವಿಶ್ವವಿದ್ಯಾಲಯ ಡಾಕ್ಟರೇಟ್ ನೀಡಿ ಭಾರತೀಯ ಸ್ಪಿನ್ನರ್ರನ್ನು ಗೌರವಿಸಿದೆ.
ಉದಯಪುರ ಎಸ್ಪಿಎಸ್ಯು ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ಮಹಿಳಾ ಕ್ರಿಕೆಟರ್ಗೆ ರಾಜೇಶ್ವರಿ ಗಾಯಕವಾಡ್ಗೆ ಎಸ್ಪಿಎಸ್ಯು ವಿವಿಯ ಅಧ್ಯಕ್ಷ ಡಾ.ಪದ್ಮಕಲಿ ಬ್ಯಾನರ್ಜಿ ಹಾಗೂ ಡಾ.ನಿಧಿಪತಿ ಸಿಂಗಾನಿಯಾ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ್ದಾರೆ. ಈ ಮೂಲಕ ಗೌರವ ಡಾಕ್ಟರೇಟ್ ಪಡೆದ ಭಾರತದ ಮೊದಲ ಮಹಿಳಾ ಕ್ರಿಕೆಟರ್ ಎಂಬ ಶ್ರೇಯಕ್ಕೆ ಪಾತ್ರರಾಗಿದ್ದಾರೆ.
ಭಾರತ ತಂಡದ ಖಾಯಂ ಸದಸ್ಯೆಯಾಗಿರುವ ರಾಜೇಶ್ವರಿ 2014ರಲ್ಲಿ ಭಾರತ ಮಹಿಳಾ ತಂಡಕ್ಕೆ ಪದಾರ್ಪಣೆ ಮಾಡಿದ್ದರು. ಶ್ರೀಲಂಕಾ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಗಾಯಕ್ವಾಡ್ 2 ಟೆಸ್ಟ್, 64 ಏಕದಿನ , 44 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದು, 158 ವಿಕೆಟ್ ಪಡೆದಿದ್ದಾರೆ.

ಎಡಗೈ ಸ್ಪಿನ್ನರ್ ಆಗಿರುವ ರಾಜೇಶ್ವರಿ ಇದೇ ವರ್ಷ ಇಂಗ್ಲೆಂಡ್ ಬರ್ಮಿಂಗ್ಹ್ಯಾಮ್ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಬೆಳ್ಳಿ ಗೆದ್ದ ಭಾರತ ತಂಡದ ಸದಸ್ಯರಾಗಿದ್ದರು. ಕಾಮನ್ವೆಲ್ತ್ ಗೇಮ್ಸ್ನಲ್ಲಿ ಇದೇ ಮೊದಲ ಬಾರಿಗೆ ಕ್ರಿಕೆಟ್ಗೆ ಅವಕಾಶ ನೀಡಲಾಗಿತ್ತು. ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದರೂ ಫೈನಲ್ನಲ್ಲಿ ಇಂಗ್ಲೆಂಡ್ ತಂಡದೆದುರು ಸೋಲು ಕಂಡು ರನ್ನರ್ ಅಪ್ ಆಗಿತ್ತು.
2017ರ ಏಕದಿನ ವಿಶ್ವಕಪ್ನಲ್ಲಿ ಫೈನಲ್ ಪ್ರವೇಶಿಸಿದ್ದ ಭಾರತ ತಂಡದಲ್ಲೂ ರಾಜೇಶ್ವರಿ ಗಾಯಕ್ವಾಡ್ ಅವಕಾಶ ಪಡೆದಿದ್ದರು. ಅದರಲ್ಲೂ ಭಾರತ ತಂಡದ 9 ರನ್ಗಳ ರೋಚಕ ಸೋಲು ಕಂಡು ರನ್ನರ್ ಅಪ್ಗೆ ತೃಪ್ತಿಪಟ್ಟುಕೊಂಡಿತ್ತು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications