Sunil Chhetri: ಭಾರತದ ಫುಟ್ಬಾಲ್ ತಂಡದ ನಾಯಕ ಅಂತಾರಾಷ್ಟ್ರೀಯ ಪಂದ್ಯಗಳಿಗೆ ದಿಢೀರ್ ನಿವೃತ್ತಿ
Sunil Chhetri: ಭಾರತದ ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ ಅವರು ಅಂತಾರಾಷ್ಟ್ರೀಯ ಪಂದ್ಯಗಳಿಗೆ ದಿಢೀರ್ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಭಾರತ ತಂಡದ ಪುಟ್ಬಾಲ್ ತಂಡದ ನಾಯಕರಿಂದ ಸುನೀಲ್ ಛೆಟ್ರಿ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಆದರೆ ಇಂದು ಅವರು ಅಂತಾರಾಷ್ಟ್ರೀಯ ಪಂದ್ಯಗಳಿಗೆ ದಿಢೀರ್ ವಿದಾಯ ಹೇಳಿದ್ದು, ಇದು ಅಭಿಮಾನಿಗಳಿಗೆ ಬೇಸರ ತಂದಿದೆ.

ಜೂನ್ 6ರಂದು ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆಯಲಿರುವ ಕುವೈತ್ ವಿರುದ್ಧದ ಪಂದ್ಯವೇ ಕೊನೆಯದಾಗಿದ್ದು, ಇದೀಗ ಅಂತಾರಾಷ್ಟ್ರೀಯ ಫುಟ್ಬಾಲ್ ಪಂದ್ಯಗಳಿಗೆ ಸಂಪೂರ್ಣವಾಗಿ ವಿದಾಯ ಹೇಳುವುದಾಗಿ ಛೆಟ್ರಿ ಅವರು ತಿಳಿಸಿದ್ದಾರೆ.
39 ವರ್ಷ ವಯಸ್ಸಿನ ಸುನಿಲ್ ಛೆಟ್ರಿ ಅವರು, ಭಾರತದ ಪರ ಈವರೆಗೆ 150 ಪಂದ್ಯಗಳನ್ನು ಆಡಿದ್ದು, ಈ ವೇಳೆ 94 ಗೋಲುಗಳನ್ನು ಗಳಿಸುವ ಮೂಲಕ ದಾಖಲೆ ಬರೆದಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಫುಟ್ಬಾಲ್ ಇತಿಹಾಸದಲ್ಲಿ ಅತಿಹೆಚ್ಚು ಗೋಲು ಗಳಿಸಿದವರ ಆಟಗಾರರ ಪಟ್ಟಿಯಲ್ಲಿ ಚೆಟ್ರಿ ಅವರು 4ನೇ ಸ್ಥಾನದಲ್ಲಿದ್ದಾರೆ.
I'd like to say something... pic.twitter.com/xwXbDi95WV
— Sunil Chhetri (@chetrisunil11) May 16, 2024
"ನಾನು ಮೊದಲ ಬಾರಿ ಭಾರತ ಪರ ಆಡಿದ ಪಂದ್ಯವನ್ನು ಎಂದೆಂದಿಗೂ ಮರೆಯುವುದಿಲ್ಲ. ಹಾಗೂ ಅದನ್ನು ಯಾವಾಗಲೂ ನೆನಪಿಸಿಕೊಳ್ಳುತ್ತಲೇ ಇರುತ್ತೇನೆ. ಅದೊಂದು ಮರೆಯಲಾಗದ ಕ್ಷಣ. ಆ ಪಂದ್ಯಕ್ಕೂ ಒಂದು ದಿನ ಮುಂಚೆ, ನಮ್ಮ ರಾಷ್ಟ್ರೀಯ ತಂಡದ ಕೋಚ್ ಆಗಿದ್ದ ಸುಖಿ ಸರ್ ಬಂದು ಆಡುವುದಕ್ಕೆ ತಾಯಾರಾಗಿದ್ದೀರಾ ಅಲ್ವಾ ಎಂದು ಕೇಳಿದರು. ಆ ಕ್ಷಣ ಸಂತೋಷಕ್ಕೆ ಮಾತ್ರ ಪಾರವೇ ಇರಲಿಲ್ಲ. ಅಷ್ಟರ ಮಟ್ಟಿಗೆ ಖುಷಿಯಾಗಿತ್ತು," ಎಂದರು.
"ನಾನು ನನ್ನ ಪಾದಾರ್ಪಣೆ ಪಂದ್ಯದಲ್ಲೇ 80ನೇ ನಿಮಿಷದ ಸುಮಾರಿಗೆ ಮೊದಲ ಗೋಲು ಹೊಡೆದೆ. ಆ ದಿನವನ್ನು ನಾನು ಯಾವತ್ತೂ ಮರೆಯಲು ಸಾಧ್ಯವಿಲ್. ಅದು ನನ್ನ ಪಾಲಿಗೆ ಭಾರತ ತಂಡದ ಪರ ಆಡಿದ ಅದ್ಭುತ ದಿನ ಎಂದು," ಆ ದಿನಗಳನ್ನು ಚೆಟ್ರಿ ಅವರು ಮೆಲುಕು ಹಾಕಿದರು.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications