ಕರಾಟೆ ಚಾಂಪಿಯನ್ ಶಿಪ್; ಚಿನ್ನ ಗೆದ್ದ ಬಾಗಲಕೋಟೆ ಸಹೋದರರು
ಬಾಗಲಕೋಟೆ, ಆಗಸ್ಟ್, 04: ಶೀಗಿಕೇರಿ ಗ್ರಾಮದ ಪುಟ್ಟರಾಜ ಹಾಗೂ ಸಾತ್ವಿಕ್ ಕೋಲ್ಕತ್ತಾದಲ್ಲಿ ನಡೆದ 6ನೇ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕಗಳನ್ನು ಜಯಿಸಿ ಬಾಗಲಕೋಟೆ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಆಸಕ್ತಿ ಜೊತೆಗೆ ಛಲ ಇದ್ದರೆ ಏನು ಬೇಕಾದರೂ ಸಾಧಿಸಬಹುದು ಅನ್ನುವುದಕ್ಕೆ ಶೀಗಿಕೇರಿ ಗ್ರಾಮದ ಸಹೋದರರೇ ಸಾಕ್ಷಿ. ತರಬೇತಿ ಪಡೆದ ಎರಡೇ ವರ್ಷದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನ ಗೆದ್ದು ಸಾಧನೆ ಮಾಡಿರುವ ಈ ಪುಟ್ಟ ಪೋರರು ಇಡೀ ಬಾಗಲಕೋಟೆ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.
ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆದ್ದ ಇಬ್ಬರು ಮಕ್ಕಳಿಗೆ ಪೋಷಕರು ಸಿಹಿ ತಿನ್ನಿಸಿ ಸಂಭ್ರಮಿಸಿದರು. ಸಹೋದರರಿಗೆ ತರಬೇತುದಾರರು ಹಾರ ಹಾಕಿ ಅಭಿನಂದನೆ ತಿಳಿಸಿದ್ದು, ಗ್ರಾಮಸ್ಥರ ಕೀರ್ತಿಗೆ ಇವರು ಪಾತ್ರರಾಗಿದ್ದಾರೆ.

ಹೆಚ್.ಎನ್. ಶೇಬನ್ನವರ್ ಅವರ ಪುತ್ರರಾದ ಪುಟ್ಟರಾಜ ಹಾಗೂ ಸಾತ್ವಿಕ್ ಕೋಲ್ಕತ್ತಾದಲ್ಲಿ ನಡೆದ 6ನೇ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕಗಳನ್ನು ಜಯಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಪಶ್ಚಿಮ ಬಂಗಾಳದ ಆಲ್ ಇಂಡಿಯಾ ಶೇಶಿಂಕೈ ಶಿಟೋರಿಯು ಕರಾಟೆ ಡು ಫೆಡರೇಶನ್ ವತಿಯಿಂದ ಜುಲೈ 30, 31ರಂದು ಎರಡು ದಿನಗಳ ಕಾಲ ಕ್ರೀಡೆಯನ್ನು ಆಯೋಜಿಸಲಾಗಿತ್ತು.
ಕೋಲ್ಕತ್ತಾದ ಈಡನ್ ಗಾರ್ಡನ್ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣಗಳಲ್ಲಿ ಆಯೋಜಿಸಿದ್ದ ಕರಾಟೆ ಚಾಂಪಿಯನ್ಶಿಪ್ನಲ್ಲಿ ಗೆಲುವು ಸಾಧಿಸುವುದರ ಮೂಲಕ ಇಬ್ಬರು ಸಹೋದರರು ಚಿನ್ನದ ಪದಕಗಳಿಗೆ ಮುತ್ತಿಟ್ಟು ಇತಿಹಾಸ ಬರೆದರು. ಈ ಬಗ್ಗೆ ಮಾತನಾಡಿದ ಬಾಲಕರು, ಕರಾಟೆಯಲ್ಲಿ ಮುಂದೆ ಹೆಚ್ಚಿನ ಸಾಧನೆ ಮಾಡುವ ಇಂಗಿತ ವ್ಯಕ್ತಪಡಿಸಿದರು. ಅಲ್ಲದೆ ಪೋಷಕರು, ತರಬೇತಿ ನೀಡಿದ ಗುರುಗಳಿಗೆ ಧನ್ಯವಾದ ತಿಳಿಸಿದರು.
ಒಟ್ಟು ಸ್ಪರ್ಧಿಗಳು: ಕೋಲ್ಕತ್ತಾದಲ್ಲಿ ನಡೆದ ಕರಾಟೆ ಚಾಂಪಿಯನ್ಶಿಪ್ನಲ್ಲಿ 9 ದೇಶಗಳಿಂದ 4 ಸಾವಿರಕ್ಕೂ ಅಧಿಕ ಸ್ಪರ್ಧಿಗಳು ಭಾಗಿಯಾಗಿದ್ದರು. ಬಾಗಲಕೋಟೆ ಜಿಲ್ಲೆ ಸೇರಿದಂತೆ ಕರ್ನಾಟಕದಿಂದ ಒಟ್ಟು 27 ಜನ ಕ್ರೀಡಾಪಟುಗಳು ಈ ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು.

ಟೂರ್ನಿಯಲ್ಲಿ ಕರ್ನಾಟಕಕ್ಕೆ 9 ಚಿನ್ನ, 12 ಬೆಳ್ಳಿ ಹಾಗೂ 9 ಕಂಚಿನ ಪದಕಗಳು ಲಭಿಸಿವೆ. ಬಾಗಲಕೋಟೆಯ ಶಿಗಿಕೇರಿಯ ಸಹೋದರರಾದ ಸಾತ್ವಿಕ್ 15 ವರ್ಷದೊಳಗಿನವರ 25-30 ಕೆ.ಜಿ ವಿಭಾಗದಲ್ಲಿ ಗೆದ್ದು ಚಿನ್ನಕ್ಕೆ ಮುತ್ತಿಟ್ಟರೆ, ಪುಟ್ಟರಾಜ ಸೇಬನ್ನವರ್ ಅವರು 15 ವರ್ಷದೊಳಗಿನವರ 45 ಕೆ.ಜಿ ವಿಭಾಗದಲ್ಲಿ ಗೆದ್ದು ಚಿನ್ನಕ್ಕೆ ಮುತ್ತಿಟ್ಟಿದ್ದಾರೆ. ಇನ್ನು ಸಹೋದರರ ಸಾಧನೆಗೆ ತರಬೇತುದಾರರು, ಪೋಷಕರು ಪ್ರಶಂಸೆ ವ್ಯಕ್ತಪಡಿಸಿದರು.
ಹಳ್ಳಿ ಪ್ರತಿಭೆಯ ಸಾಧನೆ: ಹಳ್ಳಿ ಪ್ರತಿಭೆಗಳು ಕೋಲ್ಕತ್ತಾದವರೆಗೂ ಹೋಗಿ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸುವು ತಮಾಷೆಯ ಮಾತಲ್ಲ. ಇದುವರೆಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದವರಲ್ಲಿ ಸುಮಾರು ಜನ ಹಳ್ಳಿ ಪ್ರತಿಭೆಗಳೇ ಇದ್ದಾರೆ. ಒಂದೊಂದೇ ಮೆಟ್ಟಿಲುಗಳಂತೆ ಹಂತಹಂತದಲ್ಲೂ ಪರಿಶ್ರಮ ಹಾಕಿ ಗುರಿಯನ್ನು ಯಶಸ್ವಿಯಾಗಿ ತಲುಪಿದ ಸಾಕಷ್ಟು ಉದಾಹರಣೆಗಳು ಇವೆ. ಅದರಂತೆಯೇ ಬಾಗಲಕೋಟೆ ಜಿಲ್ಲೆಯ ಶೀಗಿಕೇರಿಯ ಒಂದೇ ಕುಟುಂಬದ ಇಬ್ಬರು ಸಹೋದರರು ತರಬೇತಿ ಪಡೆದ ಎರಡೇ ವರ್ಷದಲ್ಲಿಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕಗಳಿಗೆ ಮುತ್ತಿಟ್ಟಿರುವುದು ಎಲ್ಲರನ್ನು ನಿಬ್ಬೆರಗಾಗುವಂಗತೆ ಮಾಡಿದೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications