ಧಾರವಾಡದಲ್ಲಿ ಅಕ್ಟೋಬರ್ನಲ್ಲಿ ಅಂತರಾಷ್ಟ್ರೀಯ ಟೆನ್ನಿಸ್ ಟೂರ್ನಿ
ಧಾರವಾಡ, ಸೆಪ್ಟೆಂಬರ್ 14; ಕರ್ನಾಟಕದ ವಿದ್ಯಾಕಾಶಿ ಧಾರವಾಡದಲ್ಲಿ ಅಕ್ಟೋಬರ್ನಲ್ಲಿ ಅಂತರಾಷ್ಟ್ರೀಯ ಟೆನ್ನಿಸ್ ಟೂರ್ನಿ ಆಯೋಜನೆ ಮಾಡಲಾಗಿದೆ. ವಿಶ್ವ ಮಟ್ಟದ ರ್ಯಾಂಕಿಂಗ್ನ ದಿಗ್ಗಜ ಆಟಗಾರರು ಈ ಟೂರ್ನಿಗಾಗಿ ಆಗಮಿಸುತ್ತಾರೆ.
ಧಾರವಾಡ ಜಿಲ್ಲಾ ಲಾಣ್ ಟೆನ್ನಿಸ್ ಅಸೋಸಿಯೇಷನ್, ಕರ್ನಾಟಕ ರಾಜ್ಯ ಲಾನ್ ಟೆನ್ನಿಸ್ ಅಸೋಸಿಯೇಷನ್ ಜಂಟಿಯಾಗಿ ಧಾರವಾಡದಲ್ಲಿ ಅಂತರಾಷ್ಟ್ರೀಯ ಟೆನ್ನಿಸ್ ಟೂರ್ನಿ ಆಯೋಜಿಸಿವೆ.

ಸುಮಾರು 96 ವರ್ಷಗಳ ಇತಿಹಾಸವನ್ನು ಧಾರವಾಡದ ಟೆನ್ನಿಸ್ ಕೋರ್ಟ್ ಹೊಂದಿದೆ. ವಿಶ್ವ ಮಟ್ಟದ ಟೆನ್ನಿಸ್ ಟೂರ್ನಿಗಳನ್ನು ಆಯೋಜನೆ ಮಾಡುವ ಮೂಲಕ ಈ ಭಾಗದ ಕ್ರೀಡಾಪಟುಗಳಿಗೆ ಸ್ಫೂರ್ತಿ ತುಂಬಿದೆ.
ಧಾರವಾಡದ ಟೆನ್ನಿಸ್ ಕೋರ್ಟ್ 5 ಸಿಂಥೆಟಿಕ್ ಯುಎಸ್ಟಿಎ ಶ್ರೇಣಿಯ ಕೋರ್ಟ್ಗಳನ್ನು ಒಳಗೊಂಡಿದೆ. ಕ್ರೀಡಾಪಟುಗಳಿಗಾಗಿ ಉತೃಷ್ಟ ದರ್ಜೆಯ ಜಿಮ್, ಉತ್ತಮ ಕೋಚ್ಗಳನ್ನು ಸಹ ಒಳಗೊಂಡಿದೆ.
ಸದಸ್ಯತ್ವಕ್ಕೆ ಅರ್ಜಿ ಆಹ್ವಾನ; ಈ ಅಂತರಾಷ್ಟ್ರೀಯ ಟೆನ್ನಿಸ್ ಟೂರ್ನಿಯ ಅಂಗವಾಗಿಯೇ ಟೆನ್ನಿಸ್ ಕ್ರೀಡಾ ಆಸಕ್ತರಿಗೆ ಧಾರವಾಡ ಜಿಲ್ಲಾ ಲಾನ್ ಟೆನ್ನಿಸ್ ಅಸೋಸಿಯೇಷನ್ನ ಆಜೀವ ಸದಸ್ಯತ್ವಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಧಾರವಾಡ ಜಿಲ್ಲಾ ಲಾನ್ ಟೆನ್ನಿಸ್ ಅಸೋಸಿಯೇಷನ್ ಆಜೀವ ಸದಸ್ಯತ್ವ ಪಡೆಯಲು ಸೆಪ್ಟೆಂಬರ್ 15 ರಿಂದ 22ರ ವರೆಗೆ ಸೀಮಿತ ಕಾಲಾವಕಾಶವನ್ನು ನೀಡಲಾಗಿದೆ. ನಿಗದಿತ ಅರ್ಜಿ ನಮೂನೆ ಹಾಗೂ ಸದಸ್ಯತ್ವ ಶುಲ್ಕದೊಂದಿಗೆ ಆಸಕ್ತರು ಸದಸ್ಯತ್ವ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಂದೀಪ ಬಣವಿ, ಕಾರ್ಯದರ್ಶಿಗಳು, ಧಾರವಾಡ ಜಿಲ್ಲಾ ಲಾನ್ ಟೆನ್ನಿಸ್ ಅಸೋಸಿಯೇಷನ್ ಇವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 9448460955, 6361398510.
ಟೆನ್ನಿಸ್ ಕಚೇರಿಗೆ ಬೆಳಿಗ್ಗೆ 9 ರಿಂದ ರಾತ್ರಿ 8 ಗಂಟೆಯವರೆಗೆ ಭೇಟಿ ನೀಡಿ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಅರ್ಜಿ ಸಲ್ಲಿಕೆ ಮಾಡಬಹುದು ಎಂದು ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಧಾರವಾಡದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications