IPL 2023 Final CSK vs GT: ರಾತ್ರಿಯಿಡೀ ರೈಲ್ವೇ ಸ್ಟೇಷನ್ನಲ್ಲಿ ಮಲಗಿದ್ದ ಧೋನಿ ಅಭಿಮಾನಿಗಳು
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ಮಧ್ಯೆ ನಡೆಯಬೇಕಿದ್ದ ಐಪಿಎಲ್ 2023ರ ಫೈನಲ್ ಪಂದ್ಯ ಭಾನುವಾರ ಮಳೆಯ ಕಾರಣದಿಂದ ರದ್ದಾಗಿತ್ತು. ಸೋಮವಾರ ಮೀಸಲು ದಿನದಂದು ಪಂದ್ಯ ನಡೆಯಲಿದೆ. 1 ಲಕ್ಷಕ್ಕೂ ಹೆಚ್ಚಿನ ಆಸನ ಸಾಮರ್ಥ್ಯ ಹೊಂದಿರುವ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಸಾಗರದಂತೆ ಅಭಿಮಾನಿಗಳು ಹರಿದು ಬಂದಿದ್ದರು, ಲಕ್ಷಾಂತರ ಅಭಿಮಾನಿಗಳು ಮಧ್ಯರಾತ್ರಿವರೆಗೂ ಮಳೆಯಲ್ಲೇ ಪಂದ್ಯ ಆರಂಭವಾಗುತ್ತದೆ ಎಂದು ಕಾದರೂ ಆಗಲಿಲ್ಲ.
ಬೇರೆ ಬೇರೆ ಊರುಗಳಿಂದ ಬಂದಿದ್ದ ಎಂಎಸ್ ಧೋನಿ ಮತ್ತು ಸಿಎಸ್ಕೆ ಅಭಿಮಾನಿಗಳಿಗೆ ಪಂದ್ಯ ನಡೆಯದೇ ಇರುವುದು ಒಂದು ಕಡೆಯಾದರೆ ಮಧ್ಯರಾತ್ರಿಯಲ್ಲಿ ಎಲ್ಲಿ ಉಳಿದುಕೊಳ್ಳುವುದು ಎನ್ನುವ ಯೋಚನೆ ಒಂದು ಕಡೆಯಾಗಿತ್ತು. ನೂರಾರು ಸಿಎಸ್ಕೆ ಅಭಿಮಾನಿಗಳು ಭಾನುವಾರ ರಾತ್ರಿ ರೈಲ್ವೆ ನಿಲ್ದಾಣದಲ್ಲಿ ತಂಗಿದ್ದು, ನೆಲದಲ್ಲೇ ಮಲಗಿಕೊಂಡಿದ್ದರು.

ಕೆಲವರಿಗೆ ವಾಪಸ್ ಹೋಗಲು ರೈಲು, ಬಸ್ಸು ಲಭ್ಯವಿಲ್ಲದ ಕಾರಣ ರಾತ್ರಿ ಅಲ್ಲಿಯೇ ಮಲಗಿದ್ದರು, ಇನ್ನೂ ದೂರದೂರಿನಿಂದ ಬಂದಿದ್ದ ಅಭಿಮಾನಿಗಳು ಸೋಮವಾರ ಪಂದ್ಯ ನೋಡಿಕೊಂಡು ವಾಪಸ್ ಹೋಗುವ ಉದ್ದೇಶದಿಂದ ಅಲ್ಲಿಯೇ ಉಳಿಯಲು ನಿರ್ಧರಿಸಿದ್ದರು.
ಭಾನುವಾರ ಪಂದ್ಯವನ್ನು ನೋಡಲು ಟಿಕೆಟ್ ಖರೀದಿಸಿದವರಿಗೆ ಸೋಮವಾರ ಕ್ರೀಡಾಂಗಣಕ್ಕೆ ಪ್ರವೇಶ ಸಿಗಲಿದೆ. ಸಿಎಸ್ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರಿಗೆ ಇದು ಕೊನೆಯ ಐಪಿಎಲ್ ಪಂದ್ಯ ಎನ್ನಲಾಗಿದ್ದು ಲಕ್ಷಾಂತರ ಅಭಿಮಾನಿಗಳು ಅವರ ಕೊನೆಯ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.
It is 3 o'clock in the night when I went to Ahmedabad railway station, I saw people wearing jersey of csk team, some were sleeping, some were awake, some people, I asked them what they are doing, they said we have come only to see MS Dhoni @IPL @ChennaiIPL #IPLFinal #Ahmedabad pic.twitter.com/ZJktgGcv8U
— Sumit kharat (@sumitkharat65) May 28, 2023
ಬಲಿಷ್ಠ ತಂಡಗಳ ನಡುವಿನ ಹೋರಾಟ
ಐಪಿಎಲ್ 2023ರ ಅಂಕಪಟ್ಟಿಯಲ್ಲಿ ಅಗ್ರ ಎರಡು ಸ್ಥಾನಗಳಲ್ಲಿರುವ ತಂಡಗಳೇ ಫೈನಲ್ಗೆ ಪ್ರವೇಶ ಪಡೆದುಕೊಂಡಿವೆ. ಎರಡೂ ತಂಡಗಳು ಲೀಗ್ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಅರ್ಹವಾಗಿವೇ ಫೈನಲ್ಗೆ ಅವಕಾಶ ಗಿಟ್ಟಿಸಿಕೊಂಡಿವೆ. ಒಂದು ಕಡೆ ನಾಲ್ಕು ಬಾರಿ ಕಪ್ ಗೆದ್ದಿರುವ ಸಿಎಸ್ಕೆ 5ನೇ ಬಾರಿ ಚಾಂಪಿಯನ್ ಆಗುವ ವಿಶ್ವಾಸದಲ್ಲಿದ್ದರೇ, ಆಡಿದ ಚೊಚ್ಚಲ ಆವೃತ್ತಿಯಲ್ಲೇ ಚಾಂಪಿಯನ್ ಎನಿಸಿಕೊಂಡಿರುವ ಗುಜರಾತ್ ಟೈಟಾನ್ಸ್ ಅದನ್ನು ಎರಡನೇ ಅವಧಿಗೂ ಉಳಿಸಿಕೊಳ್ಳಲು ರಣತಂತ್ರ ರೂಪಿಸಿದೆ.
ಎರಡೂ ತಂಡಗಳಲ್ಲಿ ಅದ್ಭುತ ಆಟಗಾರರೇ ತುಂಬಿದ್ದು ಸಮಬಲದ ಹೋರಾಟ ನಡೆಯುವ ನಿರೀಕ್ಷೆ ಇದೆ. ಈ ಬಾರಿ ಐಪಿಎಲ್ನಲ್ಲಿ ಇದುವರೆಗೂ ಒಂದೂ ಸೂಪರ್ ಓವರ್ ಕಂಡಿಲ್ಲ, ಫೈನಲ್ ಪಂದ್ಯ ಸೂಪರ್ ಓವರ್ ವರೆಗೆ ಹೋಗುವಂತೆ ರೋಚಕತೆಯಿಂದ ಕೂಡಿರಲಿ ಎಂದೂ ಅಭಿಮಾನಿಗಳು ಬಯಸುತ್ತಿದ್ದಾರೆ.
ಅಹಮದಾಬಾದ್ನಲ್ಲಿ ಪಂದ್ಯ ನಡೆಯುತ್ತಿದ್ದರೂ ಎಂಎಸ್ ಧೋನಿಗೆ ಅಭಿಮಾನಿಗಳ ಬೆಂಬಲ ಹೆಚ್ಚಾಗಿದೆ. ಇಡೀ ಕ್ರೀಡಾಂಗಣದಲ್ಲಿ ಹಳದಿ ಬಣ್ಣವೇ ಹೆಚ್ಚಾಗಿರುವುದು ಧೋನಿ ಕ್ರೇಜ್ಗೆ ಇರುವ ಉದಾಹರಣೆಯಾಗಿದೆ. ಧೋನಿ ಮತ್ತೊಂದು ಟ್ರೋಫಿ ಗೆದ್ದು ಕ್ರಿಕೆಟ್ ಬದುಕಿಗೆ ವಿದಾಯ ಹೇಳ್ತಾರ ಎಂದು ಕಾದು ನೋಡಬೇಕಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications